ಕೋವಿಡ್-19 ನಿಂದ ಜಾಗತಿಕ ಮಟ್ಟದಲ್ಲಿ ಸಂತಾನೋತ್ಪತ್ತಿ ಸಾಮರ್ಥ್ಯ ಕುಸಿತ! 
ಜೀವನಶೈಲಿ

ಕೋವಿಡ್-19 ನಿಂದ ಜಾಗತಿಕ ಮಟ್ಟದಲ್ಲಿ ಸಂತಾನೋತ್ಪತ್ತಿ ಸಾಮರ್ಥ್ಯ ಕುಸಿತ!

ಕೋವಿಡ್-19 ಲಾಕ್ ಡೌನ್ ಪರಿಣಾಮದಿಂದಾಗಿ ಮಕ್ಕಳ ಜನನ ಹೆಚ್ಚಾಗಲಿದೆ ಎಂದು ಈ ಹಿಂದೆ ಹಲವು ಅಧ್ಯಯನ ವರದಿಗಳಲ್ಲಿ ಅಂದಾಜಸಲಾಗಿತ್ತು. ಆದರೆ ಈಗ ಜರ್ನಲ್ ಸೈನ್ಸ್ ನಲ್ಲಿ ಪ್ರಕಟಗೊಂಡಿರುವ ವರದಿ ಬೇರೆಯದ್ದೇ ಹೇಳುತ್ತಿದೆ. 

ಲಂಡನ್: ಕೋವಿಡ್-19 ಲಾಕ್ ಡೌನ್ ಪರಿಣಾಮದಿಂದಾಗಿ ಮಕ್ಕಳ ಜನನ ಹೆಚ್ಚಾಗಲಿದೆ ಎಂದು ಈ ಹಿಂದೆ ಹಲವು ಅಧ್ಯಯನ ವರದಿಗಳಲ್ಲಿ ಅಂದಾಜಸಲಾಗಿತ್ತು. ಆದರೆ ಈಗ ಜರ್ನಲ್ ಸೈನ್ಸ್ ನಲ್ಲಿ ಪ್ರಕಟಗೊಂಡಿರುವ ವರದಿ ಬೇರೆಯದ್ದೇ ಹೇಳುತ್ತಿದೆ. 

ಕೋವಿಡ್-19 ನಿಂದಾಗಿ ಜಾಗತಿಕವಾಗಿ ಹೆಚ್ಚು ಆದಾಯ ಹೊಂದಿರುವ ರಾಷ್ಟ್ರಗಳಲ್ಲಿ ಮಕ್ಕಳ ಜನನ ಪ್ರಮಾಣ ಅಥವಾ ಸಂತಾನೋತ್ಪತ್ತಿ ಸಾಮರ್ಥ್ಯ ಕುಸಿತ ಕಾಣಲಿದೆ ಎಂದು ಜರ್ನಲ್ ಸೈನ್ಸ್ ನಲ್ಲಿ ಪ್ರಕಟಗೊಂಡ ವರದಿ ಹೇಳುತ್ತಿದೆ. 

ಈ ಹಿಂದೆ ಎದುರಾಗಿದ್ದ ಇದೇ ಮಾದರಿಯ ಸನ್ನಿವೇಶಗಳಿಗೆ ಇಂದಿನ ಸಾಮಾಜಿಕ, ಆರ್ಥಿಕ ಹಾಗೂ ಜನಸಂಖ್ಯೆಯ ಪರಿಸ್ಥಿತಿಗಳನ್ನು ಹೋಲಿಕೆ ಮಾಡಿ ಈ ಅಧ್ಯಯನ ವರದಿಯನ್ನು ಪ್ರಕಟಿಸಲಾಗಿದೆ. 

ಈ ವಿಷಯದಲ್ಲಿ ನಿಖರವಾಗಿ ಹೇಳಲು ಸಾಧ್ಯವಾಗದೇ ಇದ್ದರೂ, ಹೆಚ್ಚು ಆದಾಯವಿರುವ ದೇಶಗಳಲ್ಲಿ ಹಾಗೂ ಕಡಿಮೆ ಆದಾಯ ಇರುವ ದೇಶಗಳಲ್ಲಿ ಸಂತಾನೋತ್ಪತ್ತಿ ಪ್ರಮಾಣ ಕುಸಿಯಲಿದೆ ಎಂಬುದನ್ನು ಅಂದಾಜಿಸಲಾಗಿದೆ ಎಂದು ಇಟಲಿಯ ಬೊಕೊನಿ ವಿಶ್ವವಿದ್ಯಾಲಯದ ಪ್ರೊಫೆಸರ್ ಹಾಗೂ ಈ ಅಧ್ಯಯನದಲ್ಲಿ ತೊಡಗಿದ್ದ ಅರ್ನ್ಸ್ಟೈನ್ ಆಸ್ವೆ ಹೇಳಿದ್ದಾರೆ.

ಕ್ಷಾಮ ಹಾಗು ಯುದ್ಧದ ಸನ್ನಿವೇಶಗಳಲ್ಲಿ ಮರಣ ಪ್ರಮಾಣ ಹೆಚ್ಚಾಗಿದ್ದಾಗ ಅದರ ನಂತರದಲ್ಲಿ ಜನನ ಪ್ರಮಾಣಗಳು ಏರಿಕೆ ಕಂಡ ನಿದರ್ಶನಗಳಿವೆ. ಸ್ಪ್ಯಾನಿಷ್ ಫ್ಲೂ ಸಂದರ್ಭದಲ್ಲಿ ಜನನದ ಏರಿಕೆ ಕಾಣುವುದಕ್ಕೂ ಮುನ್ನ ತಾತ್ಕಾಲಿಕವಾಗಿ ಸಂತಾನೋತ್ಪತ್ತಿ ಪ್ರಮಾಣ ಕುಸಿದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಕೋವಿಡ್-19 ಪರಿಣಾಮ ಬೀರಲಿದೆ. .

ಕೋವಿಡ್-19 ಆರೋಗ್ಯ ತುರ್ತು ಪರಿಸ್ಥಿತಿಯಿಂದಾಗಿ ಸಂತಾನೋತ್ಪತ್ತಿ ಕುಸಿತ ಕಾಣಲಿದೆ. ಹೆಚ್ಚು ಆದಾಯ ಹೊಂದಿರುವ ರಾಷ್ಟ್ರಗಳಲ್ಲಿ ಕುಟುಂಬ ವ್ಯವಸ್ಥೆಯಲ್ಲಿ ಕೋವಿಡ್-19 ಲಾಕ್ ಡೌನ್ ನಿಂದ ಸಾಕಷ್ಟು ಬದಲಾವಣೆಯಾಗಲಿದೆ. ಲಾಕ್ ಡೌನ್, ಶಾಲೆಗಳ ಸ್ಥಗಿತಗಳಿಂದಾಗಿ ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿ ಮನೆಯ ಸದಸ್ಯರ ಮೇಲೆಯೇ ಬೀಳಲಿದೆ. ಇದರ ಜೊತೆಗೆ ಆರ್ಥಿಕ ಸಾಮರ್ಥ್ಯವೂ ಕುಸಿಯುತ್ತಿದ್ದು, ಈ ಎಲ್ಲಾ ಅಂಶಗಳು ಸಂತಾನೋತ್ಪತ್ತಿಯನ್ನು ತಡೆಗಟ್ಟಲಿವೆ ಎಂದು ಸಂಶೋಧಕರು ವಿಶ್ಲೇಷಿಸಿದ್ದಾರೆ. ಇದರ ದೀರ್ಘಾವಧಿಯ ಪರಿಣಾಮಗಳನ್ನೂ ಅತಿ ಹೆಚ್ಚು ಆದಾಯ ಹೊಂದಿದ ರಾಷ್ಟ್ರಗಳು ಎದುರಿಸಬೇಕಿದ್ದು ಮುಂದೊಮ್ಮೆ ವಯಸ್ಸಾದವರ ಜನಸಂಖ್ಯೆ ಏರಿಕೆಯಾಗುವಂತೆ ಹಾಗೂ ಜನಸಂಖ್ಯೆ ಕುಸಿಯುವಂತೆ ಮಾಡಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ