ಧೂಮಪಾನ (ಸಾಂಕೇತಿಕ ಚಿತ್ರ) 
ಜೀವನಶೈಲಿ

"ಧೂಮಪಾನದ ಅಭ್ಯಾಸವಿದ್ದರೆ ಕೋವಿಡ್-19 ಎದುರಿಸುವುದು ಮತ್ತಷ್ಟು ಕಷ್ಟ"

ತಂಬಾಕು ಬಳಕೆಯಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳಲಿದ್ದು ಕೋವಿಡ್-19 ಎದುರಿಸುವುದು ತಂಬಾಕು ಅಭ್ಯಾಸವುಳ್ಳವರಿಗೆ ಕಷ್ಟ ಎಂದು ಡಾ. ರಾಮಚಂದ್ರ ಹೇಳಿದ್ದಾರೆ. 

ಬೆಂಗಳೂರು: ತಂಬಾಕು ಶ್ವಾಸಕೋಶಕ್ಕೆ ಹಾನಿಯುಂಟುಮಾಡಬಲ್ಲ ಅಪಾಯಕಾರಿ ಪದಾರ್ಥ ಎಂದೇ ಕುಖ್ಯಾತಿ ಪಡೆದಿದ್ದು, ಇದರ ಬಳಕೆಯಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳಲಿದ್ದು ಕೋವಿಡ್-19 ಎದುರಿಸುವುದು ತಂಬಾಕು ಅಭ್ಯಾಸವುಳ್ಳವರಿಗೆ ಕಷ್ಟ ಎಂದು ಡಾ. ರಾಮಚಂದ್ರ ಹೇಳಿದ್ದಾರೆ. 

ಕಿದ್ವಾಯಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಆನ್ಕೋಲಜಿಯ ನಿರ್ದೇಶಕರಾಗಿರುವ ಡಾ. ಸಿ ರಾಮಚಂದ್ರ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಹೇಳಿಕೆ ನೀಡಿದ್ದು, ಕೋವಿಡ್-19 ವೈರಾಣು ಪ್ರಾಥಮಿಕವಾಗಿ ಶ್ವಾಸಕೋಶದ ಮೇಲೆ ದಾಳಿ ಮಾಡುತ್ತವೆ ಹಾಗೂ ಧೂಮಪಾನದ ಅಭ್ಯಾಸವುಳ್ಳವರ ಶ್ವಾಸಕೋಶ ದುರ್ಬಲವಾಗಿದ್ದು, ಇವರಿಗೆ ಕೋವಿಡ್-19 ಎದುರುವುದು ಕಷ್ಟವಾಗಲಿದೆ ಎನ್ನುತ್ತಾರೆ. 

2020 ರ ಏ.29 ರಂದು ಸಾರ್ವಜನಿಕ ಆರೋಗ್ಯ ತಜ್ಞರ ಅಧ್ಯಯನಗಳ ವಿಮರ್ಶೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿದ್ದು ಧೂಮಪಾನ ಮಾಡದವರಿಗೆ ಹೋಲಿಕೆ ಮಾಡಿದಲ್ಲಿ ಧೂಮಪಾನ ಮಾಡುವವರಿಗೇ ಕೋವಿಡ್-19 ಹೆಚ್ಚು ಬಾಧಿಸುತ್ತದೆ ಎಂದು ಎಚ್ಚರಿಸಿದೆ. 

ತಂಬಾಕು ಸಾಂಕ್ರಾಮಿಕವಲ್ಲದ ರೋಗಗಳಾದ ಹೃದಯರಕ್ತನಾಳದ ಕಾಯಿಲೆ, ಕ್ಯಾನ್ಸರ್, ಉಸಿರಾಟದ ಕಾಯಿಲೆ ಮತ್ತು ಮಧುಮೇಹಕ್ಕೂ ಕಾರಣವಾಗುತ್ತದೆ. ಇವೆಲ್ಲವೂ ಕೋವಿಡ್-19 ಬಂದಲ್ಲಿ ಆರೋಗ್ಯದ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದ್ದು ಸಾವಿಗೂ ಕಾರಣವಾಗಬಹುದು ಎಂದು ಡಾ.ರಾಮಚಂದ್ರ ಹೇಳಿದ್ದಾರೆ. 

ಇದೇ ವೇಳೆ ತಂಬಾಕು ಕೋವಿಡ್-19 ಅಪಾಯವನ್ನು ಕಡಿಮೆ ಮಾಡುತ್ತದೆ ಎಂಬ ಆಧಾರವಿಲ್ಲದ ಉಲ್ಲೇಖಗಳಿಂದ ಮಾಧ್ಯಮಗಳು, ಸಂಶೋಧಕರು, ವಿಜ್ಞಾನಿಗಳಿಗೆ ಡಬ್ಲ್ಯುಹೆಚ್ಒ ಎಚ್ಚರಿಕೆ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT