ಸಾಂದರ್ಭಿಕ ಚಿತ್ರ 
ಜೀವನಶೈಲಿ

ಕೋವಿಡ್-19 ಸಾಂಕ್ರಾಮಿಕದಿಂದ ಯುವ ವಯಸ್ಕರು ತೀವ್ರ ಒತ್ತಡದಲ್ಲಿ: ತಜ್ಞರು

ಕೊರೋನಾ ಸೋಂಕು ಯಾವ್ಯಾವ ವರ್ಗದವರಿಗೆ ಏನೇನು ಸಮಸ್ಯೆಗಳನ್ನು ತಂದೊಡ್ಡಿದೆ ಎಂದು ಊಹಿಸುವುದೂ ಕಷ್ಟವಾಗಿದೆ. 18 ರಿಂದ 20 ವರ್ಷದೊಳಗಿನ ಯುವ ವಯಸ್ಕರು ಸಾಕಷ್ಟು ಒತ್ತಡದಿಂದ ಬಳಲುತ್ತಿದ್ದು ಪರಿಸ್ಥಿತಿಯನ್ನು ನಿಭಾಯಿಸಲು ಕಲಿಯಬೇಕು ಎಂದು ತಜ್ಞರು ಹೇಳುತ್ತಾರೆ, ಅದಕ್ಕಾಗಿ ಯುವ ವಯಸ್ಸಿನವರಿಗೆ ತಜ್ಞರು ಮಾರ್ಗದರ್ಶನ ನೀಡುತ್ತಾರೆ.

ಬೆಂಗಳೂರು: ಕೊರೋನಾ ಸೋಂಕು ಯಾವ್ಯಾವ ವರ್ಗದವರಿಗೆ ಏನೇನು ಸಮಸ್ಯೆಗಳನ್ನು ತಂದೊಡ್ಡಿದೆ ಎಂದು ಊಹಿಸುವುದೂ ಕಷ್ಟವಾಗಿದೆ. 18ರಿಂ 20 ವರ್ಷದೊಳಗಿನ ಯುವ ವಯಸ್ಕರು ಸಾಕಷ್ಟು ಒತ್ತಡದಿಂದ ಬಳಲುತ್ತಿದ್ದು ಪರಿಸ್ಥಿತಿಯನ್ನು ನಿಭಾಯಿಸಲು ಕಲಿಯಬೇಕು ಎಂದು ತಜ್ಞರು ಹೇಳುತ್ತಾರೆ, ಅದಕ್ಕಾಗಿ ಯುವ ವಯಸ್ಸಿನವರಿಗೆ ತಜ್ಞರು ಮಾರ್ಗದರ್ಶನ ನೀಡುತ್ತಾರೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಮತ್ತು ಆಲ್‌ಬೋರ್ಗ್ ಯುನೆಸ್ಕೋ ಸೆಂಟರ್ ಫಾರ್ ಪಿಬಿಎಲ್ ಎಂಜಿನಿಯರಿಂಗ್ ವಿಜ್ಞಾನ ಮತ್ತು ಸುಸ್ಥಿರತೆ ಆಯೋಜಿಸಿರುವ ‘ಸಮಸ್ಯೆ ಆಧಾರಿತ ಕಲಿಕೆ’ ಕುರಿತು ಪ್ರಾದೇಶಿಕ ಸಂಶೋಧನಾ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣ ಮಾಡಿದ ಕಾರ್ಯನಿರ್ವಾಹಕ ನಿರ್ದೇಶಕರು, ಹೊಸ ಎಂಜಿನಿಯರಿಂಗ್ ಶಿಕ್ಷಣ ಪರಿವರ್ತನೆ (ನೀಟ್), ಸ್ಕೂಲ್ ಆಫ್ ಎಂಜಿನಿಯರಿಂಗ್, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಪ್ರೊ. ಅಮಿತಾವಾ ‘ಬಾಬಿ’ ಮಿತ್ರ, ವಿದ್ಯಾರ್ಥಿಗಳು ಸಾಕಷ್ಟು ಒತ್ತಡದಲ್ಲಿದ್ದಾರೆ. ಮಿ ಟೂ ಚಳುವಳಿಯಿಂದ ಜಾರ್ಜ್ ಫ್ಲಾಯ್ಡ್ ಕೊಲೆ ಮತ್ತು ನಂತರ ಸಾಂಕ್ರಾಮಿಕದವರೆಗೆ ವಿದ್ಯಾರ್ಥಿಗಳು ಈ ಎಲ್ಲದರ ಮೂಲಕ ಸಾಗುತ್ತಿದ್ದಾರೆ. ನಮ್ಮ ವಿಧಾನದಲ್ಲಿ ನಾವು ಅನುಭೂತಿ ಮತ್ತು ಹೊಂದಿಕೊಳ್ಳುವ ಅಗತ್ಯವಿದೆ ಎಂದರು.

ಈ ಸಾಂಕ್ರಾಮಿಕವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಕೆಲಸ ಮಾಡುವ ಅಗತ್ಯವನ್ನು ಬಲಪಡಿಸಿದೆ. ಬದಲಾವಣೆಗಳಿಗೆ ಹೇಗೆ ಹೊಂದಿಕೊಳ್ಳುವುದು ಎಂಬುದನ್ನು ತೋರಿಸಿಕೊಡಬೇಕು ಎಂದು ಹೇಳಿದ್ದಾರೆ.ನಾವು ವಿದ್ಯಾರ್ಥಿಗಳಿಂದ ಸ್ಪಷ್ಟ ನಿರೀಕ್ಷೆಯನ್ನು ಹೊಂದಿದ್ದರೆ, ಅದನ್ನು ಪೂರೈಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಪ್ರತಿ ಪಠ್ಯಕ್ರಮವು ಕಲಿಕೆಯ ಫಲಿತಾಂಶಗಳು, ದೈನಂದಿನ ಘಟನೆಗಳು, ಯೋಜನೆಗಳು ಮತ್ತು ಮೌಲ್ಯಮಾಪನ ಪ್ರಕ್ರಿಯೆಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಮಸ್ಯೆ ಆಧಾರಿತ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು, ಇದರಿಂದಾಗಿ ನೈಜ ಜಗತ್ತಿನ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರಗಳನ್ನು ಕಂಡುಹಿಡಿಯಬಹುದು. “ಪಿಬಿಎಲ್ ವಿಧಾನವು ವಿದ್ಯಾರ್ಥಿಗಳನ್ನು ನಿಜ ಜೀವನದ ಸಮಸ್ಯೆಗಳಿಗೆ ಪರಿಚಯಿಸುತ್ತದೆ ಮತ್ತು ಸಾಮೂಹಿಕ ರೀತಿಯಲ್ಲಿ ಪರಿಹಾರಗಳನ್ನು ಕಂಡುಕೊಳ್ಳಲು ಪ್ರೇರೇಪಿಸುತ್ತದೆ. ಇದು ಸೌಂದರ್ಯದ, ಭಾವನಾತ್ಮಕ, ನೈತಿಕ, ಸೃಜನಶೀಲ, ವಿಶ್ಲೇಷಣಾತ್ಮಕ ಮತ್ತು ಪರಿಸ್ಥಿತಿಯ ಇತರ ಅಂಶಗಳನ್ನು ಸಮಗ್ರ ರೀತಿಯಲ್ಲಿ ಅನುಭವಿಸಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡುತ್ತದೆ ಎಂದು ಇಸ್ರೊ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ಹೇಳಿದ್ದಾರೆ.

ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕೋರ್ಸ್‌ಗಳಲ್ಲಿ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಜ್ಞಾನದ ನಡುವಿನ ಅಂತರವನ್ನು ಕಡಿಮೆ ಮಾಡಲು ನೋವೆಲ್ ಕಲಿಕೆಯ ವಿಧಾನಗಳನ್ನು ಪರಿಚಯಿಸಲು ಸರ್ಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT