ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ 
LIVE

ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆ LIVE Updates

ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ರಾಮ ಭಕ್ತರ ಐದು ದಶಕಗಳ ಕನಸು ನನಸಾಗುವ ಶುಭದಿನ ಇದೀಗ ಬಂದಿದೆ. 

ಅಯೋಧ್ಯೆ: ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ರಾಮ ಭಕ್ತರ ಐದು ದಶಕಗಳ ಕನಸು ನನಸಾಗುವ ಶುಭದಿನ ಇದೀಗ ಬಂದಿದೆ. 

ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿಯವರು ಹಸ್ತದಿಂದ ಭೂಮಿಪೂಜೆ ನೆರವೇರಲಿದೆ. 

ಇದರೊಂದಿಗೆ ಪ್ರಧಾನಿಯವರು ತಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ರಾಮಮಂದಿರ ನಿರ್ಮಾಣ ವಾಗ್ಧಾನವನ್ನು ಸಕಾರಗೊಳಿಸಲಿದ್ದಾರೆ. 

ಮಧ್ಯಾಹ್ನ 12.44.08 ಗಂಟೆಯಿಂದ 12.44.40 ಗಂಟೆಯ 32 ಸೆಕೆಂಡುಗಳ ಶುಭಮುಹೂರ್ತ ನಿಗದಿಯಾಗಿದ್ದು, ಇಷ್ಟು ಅವಧಿಯಲ್ಲಿಯೇ ಮೋದಿಯವರು ಬೆಳ್ಳಿ ಇಟ್ಟಿಗೆ ಇರಿಸಿ ಸಾಂಕೇತಿಕ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಬೆಳ್ಳಿ ಇಟ್ಟಿಗೆ ಸಾಂಕೇತಿಕವಾದ ಕಾರಣ ಬಳಿಕ, ಅದನ್ನು ಭೂಮಿಪೂಜಾ ಸ್ಥಳದಿಂದ ತೆಗೆದಿರಿಸಲಾಗುತ್ತದೆ.

ಈ ನಡುವೆ ಭೂಮಿಪೂಜೆ ನೆರವೇರಿದ ಬಳಿಕ ಪ್ರಧಾನಿ ಮೋದಿಯವರು ನೆರೆ ಆಹ್ವಾನಿತ ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ವೇದಿಕೆಯ ಮೇಲೆ ಮೋದಿ ಸೇರಿದಂತೆ ಐವರು ಮಾತ್ರ ಉಪಸ್ಥಿತರಿರಲಿದ್ದಾರೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್, ಉತ್ತರಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮಕ್ಕೆ ಒಟ್ಟಾರೆ 175 ಜನರಿಗೆ ಮಾತ್ರವೇ ಆಹ್ವಾನ ನೀಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಬೆಳಿಗ್ಗೆ 11.30ರ ಸುಮಾರಿಗೆ ಪ್ರಧಾನಿ ಮೋದಿಯವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಲಿದ್ದು, ಮೊದಲು ಹನುಮಾನ್ ಗಢಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾಮಲಲ್ಲಾ ದೇಗುಲದಲ್ಲಿ ದರ್ಶನ ಪಡೆದು ಮಧ್ಯಾಹ್ನ 12.44ರ ಮಹೂರ್ತದಲ್ಲಿ ಭೂಮಿಪೂಜೆ ನೆರವೇರಿಸಿ. ನಂತರ ಭಾಷಣ ಮಾಡಲಿದ್ದಾರೆ. 

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರುತ್ತಿರುವ ಹಿನ್ನೆಲೆಯಲ್ಲಿ, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT