ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ 
LIVE

ರಾಜಸ್ಥಾನ ಸರ್ಕಾರದ ಬಿಕ್ಕಟ್ಟು Live Updates: ಇತ್ತ ಸಿಎಲ್ ಪಿ ಸಭೆ, ಅತ್ತ ಕಾಂಗ್ರೆಸ್ ನಾಯಕರಿಗೆ ಐಟಿ ದಾಳಿಯ ಶಾಕ್! 

ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟ ಜು.13 ರಂದು ಹೊಸ ತಿರುವು ಪಡೆದುಕೊಂಡಿದ್ದು ಕಾಂಗ್ರೆಸ್ ನಾಯಕರ ಮನೆ ಐಟಿ ದಾಳಿ ನಡೆದಿದೆ. ಐಟಿ ದಾಳಿಯ ನಡುವೆಯೇ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಿಎಲ್ ಪಿ ಸಭೆ ನಡೆಸುತ್ತಿದ್ದಾರೆ.

ಜೈಪುರ: ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟ ಜು.13 ರಂದು ಹೊಸ ತಿರುವು ಪಡೆದುಕೊಂಡಿದ್ದು ಕಾಂಗ್ರೆಸ್ ನಾಯಕರ ಮನೆ ಐಟಿ ದಾಳಿ ನಡೆದಿದೆ. ಐಟಿ ದಾಳಿಯ ನಡುವೆಯೇ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಿಎಲ್ ಪಿ ಸಭೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನ ಬೆಂಬಲಿಗರೂ ಸಹ ಐಟಿ ದಾಳಿಗೆ ಗುರಿಯಾಗಿದ್ದು ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.

ಕಾಂಗ್ರೆಸ್ ನ ಹಿರಿಯ ನಾಯಕರಾದ ರಾಜೀವ್ ಅರೋರಾ, ಧರ್ಮೇಂದ್ರ ಚೌಧರಿ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಇಲ್ಲದ ನಗದು, ಚಿನ್ನಾಭರಣ, ಆಸ್ತಿಗಳ ದಾಖಲೆಪತ್ರ, ಲಾಕರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಐಟಿ ಅಧಿಕಾರಿಗಳ ತಂಡ ಬಿಲ್ವಾರಾ ಹಾಗ್ ಝಲಾವಾಡ್ ಗೂ ಭೇಟಿ ನೀಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಐಟಿ ದಾಳಿಯ ಹಿನ್ನೆಲೆಯಲ್ಲಿ 10:30 ಕ್ಕೆ ನಡೆಯಬೇಕಿದ್ದ ಸಿಎಲ್ ಪಿ ಸಭೆಯನ್ನು ಕಾಂಗ್ರೆಸ್ 11 ಗಂಟೆಗೆ ಮುಂದೂಡಿತ್ತು. ಇತ್ತೀಚಿನ ವರದಿಯ ಪ್ರಕಾರ ಸಿಎಲ್ ಪಿ ಸಭೆಯಲ್ಲಿ ಭಾಗವಹಿಸಲು 74 ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿಗಳ ನಿವಾಸದಲ್ಲಿದ್ದಾರೆ. ಐಟಿ ದಾಳಿ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ವಿಪ್ ಮಹೇಶ್ ಜೋಷಿ ಬಿಜೆಪಿ ತನಿಖಾ ಸಂಸ್ಥೆಗಳನ್ನು ತನ್ನ ಉದ್ದೇಶ ಈಡೇರಿಸಿಕೊಳ್ಳುವುದಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT