ಸಿಎಂ ಬೊಮ್ಮಾಯಿ 
LIVE

'ತಾಕತ್ತಿದ್ರೆ, ಧಮ್ಮಿದ್ರೆ ತಡೆಯುವ ಪ್ರಯತ್ನ ಮಾಡಿ', 'ಅಕ್ಕಿ ನಮ್ದು, ಚೀಲ ಮಾತ್ರ ನಿಮ್ದು': ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಆವೇಶಭರಿತ ಮಾತು

ದೊಡ್ಡಬಳ್ಳಾಪುರದಲ್ಲಿ ಪ್ರಾರಂಭ ಮಾಡಿರುವ ಜನಸ್ಪಂದನೆಯನ್ನು ಇಡೀ ಕರ್ನಾಟಕ ತುಂಬ ತೆಗೆದುಕೊಂಡು ಹೋಗಿ ಮತ್ತೊಮ್ಮೆ ಕಮಲವನ್ನು ಅರಳಿಸುವ ಪ್ರಯತ್ನ ಮಾಡುತ್ತೇವೆ. ತಾಕತ್ತಿದ್ದರೆ, ಧಮ್ಮಿದ್ದರೆ ನಿಲ್ಲಿಸುವ, ತಡೆಯುವ ಪ್ರಯತ್ನ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಆಕ್ರೋಶಭರಿತರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. 

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಪ್ರಾರಂಭ ಮಾಡಿರುವ ಜನಸ್ಪಂದನೆಯನ್ನು ಇಡೀ ಕರ್ನಾಟಕ ತುಂಬ ತೆಗೆದುಕೊಂಡು ಹೋಗಿ ಮತ್ತೊಮ್ಮೆ ಕಮಲವನ್ನು ಅರಳಿಸುವ ಪ್ರಯತ್ನ ಮಾಡುತ್ತೇವೆ. ತಾಕತ್ತಿದ್ದರೆ, ಧಮ್ಮಿದ್ದರೆ ನಿಲ್ಲಿಸುವ, ತಡೆಯುವ ಪ್ರಯತ್ನ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಆಕ್ರೋಶಭರಿತರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. 

ಬಿಜೆಪಿ ಸರ್ಕಾರದ 3 ವರ್ಷದ ಸಾಧನೆ ಹಾಗೂ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷ ನಡೆಸಿದ ಆಡಳಿತ ಬಗ್ಗೆ ರಾಜ್ಯದ ಜನತೆ ಮುಂದಿಡುವ ಸಮಾವೇಶವಾದ ಜನಸ್ಪಂದನೆಯಲ್ಲಿ ಇಂದು ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ನೇರಾನೇರವಾಗಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿರುದ್ಧ ಹರಿದಾಯ್ದರು. 

ಕಾಮನ್ ಮ್ಯಾನ್ ಸಿಎಂ, ಸರಳ, ಮೃದು ಭಾಷಿ ಎಂದು ಕರೆಸಿಕೊಳ್ಳುವ ಬೊಮ್ಮಾಯಿಯವರು ಇಂದು ಜನೋತ್ಸವ ಸಮಾವೇಶದಲ್ಲಿ ಮಾತ್ರ ರೋಷಾ ವೇಷದ ಆವೇಶಭರಿತರಾಗಿ ರಾಜಕೀಯ ಭಾಷಣದಂತೆ ಮಾತನಾಡಿದರು. ಅವರ ಇಂದಿನ ಭಾಷಣ 2023ರ ಚುನಾವಣೆಗೆ ಮುನ್ನುಡಿ ಬರೆದಂತಿತ್ತು.

ನಮ್ಮ ಸರ್ಕಾರವನ್ನು ಪರ್ಸೆಂಟೇಜ್ ಸರ್ಕಾರ ಎಂದು ಕರೆಯುತ್ತಿರುವ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನವರದ್ದು 100 ಪರ್ಸೆಂಟ್ ಕಮಿಷನ್ ಸರ್ಕಾರವಾಗಿತ್ತು. ಸಿದ್ದರಾಮಯ್ಯ ಆಡಳಿತದಲ್ಲಿ ಎಷ್ಟು ಹಗರಣಗಳು ಕೇಳಿಬಂದಿದ್ದವು, ಎಷ್ಟು ಅಧಿಕಾರಿಗಳು ಜೀವ ಕಳೆದುಕೊಂಡಿದ್ದರು, ಸಿದ್ದರಾಮಯ್ಯ ಅವಧಿಯಲ್ಲಿಯೇ ಹೆಚ್ಚು ಕೊಲೆಗಳು ಆದವು, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತೀರಿ ಎಂದು ಸಾಬೀತಾಗಿದೆ ಎಂದರು.

2019ರಲ್ಲೇ ಬಿ.ಎಸ್​.ಯಡಿಯೂರಪ್ಪ ಸಿಎಂ ಆಗಬೇಕಿತ್ತು. ಆದರೆ ಕಾಂಗ್ರೆಸ್​ನ ಹುನ್ನಾರದಿಂದ ಅದು ಕೈತಪ್ಪಿತ್ತು. ಕಾಂಗ್ರೆಸ್​ನಿಂದ ಬಂದ ಎಲ್ಲ ಶಾಸಕರೂ ವೀರರು. ನಾವು ಸಮರ್ಥವಾಗಿ ಕೊವಿಡ್​ ಎದುರಿಸಿದ್ದೇವೆ. ಜನರಿಗೆ ಉಚಿತವಾಗಿ ಕೊವಿಡ್​ ಲಸಿಕೆ ನೀಡಿದ್ದೇವೆ. ಕಾಂಗ್ರೆಸ್​​ನವರು ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಾರೆ. ಅನ್ನಭಾಗ್ಯ ಕೊಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳ್ತಾರೆ. ಚೀಲದಲ್ಲಿದ್ದ ಅಕ್ಕಿ ಮೋದಿದು, ಚೀಲ ಮಾತ್ರ ನಿಮ್ಮದು. ಅನ್ನಭಾಗ್ಯದಲ್ಲಿ ಅವ್ಯವಹಾರ ಆಯ್ತು. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ದಂಧೆ ಮಾಡಿದ್ರಿ. ಲ್ಯಾಪ್​ಟಾಪ್​ ಕೊಡುವುದರಲ್ಲಿ ಹಗರಣ ಮಾಡಿದ್ರಿ, ನಿಮ್ಮ ಬಗ್ಗೆ ಹೇಳುತ್ತಾ ಹೋದರೆ ಒಂದೆರಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT