ಸಾಂದರ್ಭಿಕ ಚಿತ್ರ 
LIVE

Live: ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಚುನಾವಣಾ ಫಲಿತಾಂಶ: ಮತ ಎಣಿಕೆ ಪ್ರಗತಿಯಲ್ಲಿ, ಕೆಲವೇ ಗಂಟೆಗಳಲ್ಲಿ ಸ್ಪಷ್ಟ ಚಿತ್ರಣ

ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಪ್ರಗತಿಯಲ್ಲಿದೆ. 

ನವದೆಹಲಿ: ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಪ್ರಗತಿಯಲ್ಲಿದೆ. 

ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ಫಲಿತಾಂಶಗಳು ಹೊರಹೊಮ್ಮುತ್ತಿದ್ದಂತೆ, ಈ ಚುನಾವಣೆ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ತೀವ್ರ ಜಿದ್ದಾಜಿದ್ದಿನ ಪ್ರತಿಷ್ಠೆಯ ಕಣವಾಗಿವೆ. 

ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ತೆಲಂಗಾಣದಲ್ಲಿ ಪುನರಾಗಮನ ಮಾಡುತ್ತಿದ್ದು, ಛತ್ತೀಸ್‌ಗಢವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ಮತದಾರರು ಕಮಲದ ಮೇಲೆ ಒಲವು ತೋರಿದಂತಿದೆ. 

ಭಾರತದ ಹೊಸ ರಾಜ್ಯವಾದ ತೆಲಂಗಾಣ ಆ ರಾಜ್ಯ ರಚನೆಯ ಮುಂದಾಳತ್ವ ವಹಿಸಿದ ಕೆಸಿಆರ್ ನ್ನು ಸೋಲಿಸಿದರೆ ಇದು ಬಿಆರ್ ಎಸ್ ಪಕ್ಷಕ್ಕೆ ದೊಡ್ಡ ಆಘಾತವಾಗಲಿದೆ. ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಬಿಜೆಪಿಯ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗುವ ಲಕ್ಷಣವಿದೆ.

ಛತ್ತೀಸ್‌ಗಢದಲ್ಲಿ, ಭೂಪೇಶ್ ಬಘೇಲ್ ಅವರು ಅಧಿಕಾರಕ್ಕೆ ಮರಳಲು ಉತ್ಸುಕರಾಗಿದ್ದಾರೆ. ಬಿಜೆಪಿಯಿಂದ ಮಾಜಿ ಸಿಎಂ ರಮಣ್ ಸಿಂಗ್ ಅವರು ತಮ್ಮ ಪಕ್ಷವನ್ನು ಗೆಲುವಿನತ್ತ ಮುನ್ನಡೆಸುವ ಉತ್ಸಾಹದಲ್ಲಿದ್ದಾರೆ. 

ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರಲು ಆಶಿಸಿದ್ದರಾದರೂ ಈ ರಾಜ್ಯದ ಇತಿಹಾಸದಲ್ಲಿ ಒಮ್ಮೆ ಅಧಿಕಾರಕ್ಕೆ ಬಂದ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದದ್ದಿಲ್ಲ. ನವೆಂಬರ್ 7 ರಂದು ಚುನಾವಣೆ ನಡೆದ ಮಿಜೋರಾಂ ಫಲಿತಾಂಶ ನಾಳೆ ಡಿಸೆಂಬರ್ 4 ರಂದು ಪ್ರಕಟವಾಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT