ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಮೇ 4 ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ಕೆಲವು ಭಾಗಗಳಲ್ಲಿ 90% ಮತದಾನ ದಾಟಿದ್ದು, ಫಲಿತಾಂಶಗಳನ್ನು ಪ್ರಮುಖ ರಾಜಕೀಯ ಮಾಪಕವಾಗಿ ಗಮನಿಸಲಾಗುತ್ತಿದೆ.
ಎಲ್ಲಾ ಐದು ರಾಜ್ಯಗಳು ಮಹತ್ವದ್ದಾಗಿದ್ದರೂ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಪ್ರಮುಖ ಹಣಾಹಣಿ ರಾಜ್ಯಗಳಾಗಿ ಹೊರಹೊಮ್ಮಿವೆ.
ಪಶ್ಚಿಮ ಬಂಗಾಳದಲ್ಲಿ, ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ಹೈ-ವೋಲ್ಟೇಜ್ ಮುಖಾಮುಖಿ ನಡೆದಿದೆ. 294 ಸ್ಥಾನಗಳನ್ನು ಹೊಂದಿರುವ ವಿಧಾನಸಭೆಯು ಈ ಬಾರಿ ಅತ್ಯಂತ ಉಗ್ರ ಪ್ರಚಾರಗಳನ್ನು ಕಂಡಿದೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ವ್ಯಾಪಕವಾಗಿ ಪ್ರಚಾರ ಮಾಡಿದ್ದಾರೆ. ಈ ಚುನಾವಣೆಯಲ್ಲಿ ದಾಖಲೆಯ 92% ಕ್ಕಿಂತ ಹೆಚ್ಚು ಮತದಾನವಾಗಿದೆ.
ಏತನ್ಮಧ್ಯೆ, ತಮಿಳುನಾಡಿನಲ್ಲಿ ಎಂ.ಕೆ. ಸ್ಟಾಲಿನ್ ನೇತೃತ್ವದ ಆಡಳಿತಾರೂಢ ಡಿಎಂಕೆ, ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ವಿರುದ್ಧ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ತನ್ನ ಚೊಚ್ಚಲ ಚುನಾವಣೆಯಲ್ಲಿ ಗಮನಾರ್ಹ ಪಕ್ಷವಾಗಿ ಹೊರಹೊಮ್ಮಿದೆ.
ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಮೇ 4, 2026ರಂದು ಫಲಿತಾಂಶ ಪ್ರಕಟವಾಗಲಿದೆ.
ಆಡಳಿತಾರೂಢ ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೇ ಬಿಜೆಪಿ ಅವುಗಳನ್ನು ವಶಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ (ಬಾಗಲಕೋಟೆ) ಮತ್ತು ಶಾಮನೂರು ಶಿವಶಂಕರಪ್ಪ (ದಾವಣಗೆರೆ ದಕ್ಷಿಣ) ಅವರ ನಿಧನದಿಂದಾಗಿ ಉಪಚುನಾವಣೆ ಘೋಷಣೆಯಾಗಿತ್ತು.
ಬಿಜೆಪಿ ಬಾಗಲಕೋಟೆಯಿಂದ ಮಾಜಿ ಶಾಸಕ ಮತ್ತು 2023ರ ಪರಾಜಿತ ಅಭ್ಯರ್ಥಿ ವೀರಭದ್ರಯ್ಯ ಚರಂತಿಮಠ ಮತ್ತು ದಾವಣಗೆರೆ ದಕ್ಷಿಣದಿಂದ ಹೊಸ ಮುಖ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ದಿವಂಗತ ಶಾಸಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಿದೆ. ಬಾಗಲಕೋಟೆ ಅಭ್ಯರ್ಥಿ ಉಮೇಶ್ ಮೇಟಿ ಎಚ್ ವೈ ಮೇಟಿ ಅವರ ಪುತ್ರರಾಗಿದ್ದರೆ, ದಾವಣಗೆರೆ ದಕ್ಷಿಣದ ಅಭ್ಯರ್ಥಿ ಸಮರ್ಥ ಮಲ್ಲಿಕಾರ್ಜುನ್ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಆಗಿದ್ದಾರೆ.
ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಮತ ಎಣಿಕೆ ನಾಳೆ ನಡೆಯಲಿದ್ದು, ಫಲಿತಾಂಶದತ್ತ ಜನರ ಚಿತ್ತ ನೆಟ್ಟಿದೆ. ಈ ಮಧ್ಯೆ ಮತ ಎಣಿಕೆಗೂ ಮುನ್ನಾ ಬೆಟ್ಟಿಂಗ್ ಭರಾಟೆಯೂ ಜೋರಾಗಿ ನಡೆಯುತ್ತಿದೆ. ಕೇರಳದ ಹಿರಿಯ ರಾಜಕಾರಣಿಯೊಬ್ಬರು ಚುನಾವಣೆಯಲ್ಲಿ ತಾನು ಗೆಲ್ಲುವುದಾಗಿ 1 ಕೋಟಿ ರೂ. ಬೆಟ್ಟಿಂಗ್ ಕಟ್ಟುವುದಾಗಿ ಹೇಳಿದ್ದಾರೆ.
ಕೇರಳದ ಪೂಂಜಾರ್ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ.ಸಿ. ಜಾರ್ಜ್, ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವುದಾಗಿ ಭಾನುವಾರ ಹೇಳಿದ್ದು, ತನ್ನ ಮಾತಿಗೆ ತಕ್ಕಂತೆ 1 ಕೋಟಿ ರೂ. ಬೆಟ್ಟಿಂಗ್ ಕಟ್ಟುವುದಾಗಿ ಹೇಳಿದ್ದಾರೆ.
ನೆರೆಯ ಪಾಲಾ ಕ್ಷೇತ್ರದಲ್ಲಿ ತಮ್ಮ ಮಗ ಶೋನ್ ಜಾರ್ಜ್ ಗೆಲುವಿನ ಭವಿಷ್ಯ ನುಡಿದ ಜಾರ್ಜ್, ಈ ಬಾರಿಯ ಚುನಾವೆಯಲ್ಲಿ ಇಬ್ಬರು ಗೆದ್ದು ತಂದೆ-ಮಗ ಜೋಡಿ ಒಟ್ಟಾಗಿ ಸದನ ಪ್ರವೇಶಿಸಲಿದೆ ಎಂದು ಹೇಳಿದರು.
ಮತ ಎಣಿಕೆಯ ಪಾರದರ್ಶಕ ಮತ್ತು ಸುಗಮತೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಸೋಮವಾರ ಪಶ್ಚಿಮ ಬಂಗಾಳದ ಎಲ್ಲಾ 294 ವಿಧಾನಸಭಾ ಕ್ಷೇತ್ರಗಳಲ್ಲಿ 432 ಎಣಿಕೆ ವೀಕ್ಷಕರನ್ನು ನಿಯೋಜಿಸಿದೆ. ಸೂಕ್ಷ್ಮತೆ ಮತ್ತು ಚುನಾವಣಾ ಪ್ರಾಮುಖ್ಯತೆಯಿಂದಾಗಿ ಹಲವಾರು ಜಿಲ್ಲೆಗಳಲ್ಲಿ ಹೆಚ್ಚುವರಿ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.
ಉತ್ತರ 24 ಪರಗಣ ಜಿಲ್ಲೆಯ 33 ಕ್ಷೇತ್ರಗಳಿಗೆ ನಲವತ್ತೊಂಬತ್ತು ವೀಕ್ಷಕರನ್ನು ನಿಯೋಜಿಸಲಾಗಿದ್ದು, ದಕ್ಷಿಣ 24 ಪರಗಣ ಜಿಲ್ಲೆಯ 31 ಕ್ಷೇತ್ರಗಳಿಗೆ 45 ವೀಕ್ಷಕರನ್ನು ನಿಯೋಜಿಸಲಾಗಿದೆ. ಮುರ್ಷಿದಾಬಾದ್ನಲ್ಲಿ 22 ಕ್ಷೇತ್ರಗಳಿಗೆ 33 ವೀಕ್ಷಕರನ್ನು ನಿಯೋಜಿಸಲಾಗಿದೆ. ಡಾರ್ಜಿಲಿಂಗ್, ಜಲ್ಪೈಗುರಿ ಮತ್ತು ಉತ್ತರ ದಿನಾಜ್ಪುರದಂತಹ ಜಿಲ್ಲೆಗಳಲ್ಲಿ, ಪ್ರತಿ ಕ್ಷೇತ್ರಕ್ಕೆ ಒಬ್ಬ ಹೆಚ್ಚುವರಿ ವೀಕ್ಷಕರನ್ನು ಒದಗಿಸಲಾಗಿದೆ.
ತಮಿಳುನಾಡು ವಿಧಾನಸಭೆಯ ವಿವಿಧ ಚುನಾವಣಾ ಸಮೀಕ್ಷೆಗಳ ಪ್ರಕಾರ, ವಿಜಯ್ ಕಿಂಗ್ ಮೇಕರ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂಭಾವ್ಯ ಕುದುರೆ ವ್ಯಾಪಾರದ ವಿರುದ್ಧ ನಾಯಕರು ಎಚ್ಚರ ವಹಿಸಿದ್ದಾರೆ. ತಮಿಳುನಾಡಿನಲ್ಲಿ "ರೆಸಾರ್ಟ್ ರಾಜಕೀಯ"ದ ಆರಂಭವಾಗುವ ಸಾಧ್ಯತೆಯೂ ಹೆಚ್ಚಾಗಿದೆ.
ಫಲಿತಾಂಶ ಘೋಷಣೆಯಾದ ನಂತರ ಎಲ್ಲಾ ವಿಜೇತ ಟಿವಿಕೆ ಅಭ್ಯರ್ಥಿಗಳು ಪಕ್ಷದ ಪನೈಯೂರ್ ಪ್ರಧಾನ ಕಚೇರಿಗೆ ತಕ್ಷಣ ಬರುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ 3207 ಮತಗಳ ಮುನ್ನಡೆ. ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಹಿನ್ನಡೆ. ಉಮೇಶ್ ಮೇಟಿಗೆ 6106, ವೀರಣ್ಣ ಚರಂತಿಮಠಗೆ 2899 ಮತಗಳು. ಅಂತೆಯೇ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ ಸಾಧಿಸಿದ್ದಾರೆ.
ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿಗಳಲ್ಲಿ ಮತ ಎಣಿಕೆ ಆರಂಭವಾಗುತ್ತಿದ್ದಂತೆ ಆರಂಭಿಕ ಹಂತದಲ್ಲಿ ಮಿಶ್ರ ಮುನ್ನಡೆಯನ್ನು ತೋರಿಸುತ್ತಿವೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 823 ಕ್ಷೇತ್ರಗಳ ಎಣಿಕೆ ನಡೆಯುತ್ತಿದೆ. ಈ ಅಂಕಿಅಂಶಗಳು ಆರಂಭಿಕ ಅಂಚೆ ಮತಪತ್ರದ ಪ್ರವೃತ್ತಿಗಳನ್ನು ಆಧರಿಸಿವೆ. ಎಲೆಕ್ಟ್ರಾನಿಕ್ ಮತ ಯಂತ್ರ (ಇವಿಎಂ) ಮತಗಳ ಎಣಿಕೆ ಬೆಳಿಗ್ಗೆ 08:30 ಕ್ಕೆ ಪ್ರಾರಂಭವಾಗಿದೆ. ಚುನಾವಣಾ ಆಯೋಗ ಇನ್ನೂ ಯಾವುದೇ ಅಧಿಕೃತ ಪ್ರವೃತ್ತಿಗಳನ್ನು ಘೋಷಿಸಿಲ್ಲ.
ಆರಂಭಿಕ ಟ್ರೆಂಡ್ಗಳು ಮಮತಾ ಬ್ಯಾನರ್ಜಿ ತವರು ಕ್ಷೇತ್ರದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದರೆ, ಟಿವಿಕೆ ಅಭ್ಯರ್ಥಿ ವಿಜಯ್ ಎರಡೂ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಟೆಲಿವಿಷನ್ ಚಾನೆಲ್ಗಳ ಆರಂಭಿಕ ಟ್ರೆಂಡ್ಗಳು ಸಿಎಂ ಮಮತಾ ಬ್ಯಾನರ್ಜಿ ಅವರ ಹೈ ಪ್ರೊಫೈಲ್ ಭಬಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸುತ್ತಿದ್ದಾರೆ ಎಂದು ಸೂಚಿಸಿವೆ. ಅಂಚೆಯೇ ಸುವೇಂದು ಅಧಿಕಾರಿ ನಂದಿಗ್ರಾಮ್ನಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಇದು ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಹಿನ್ನಡೆಯನ್ನು ತಂದಿಟ್ಟಿದೆ.
ಇತ್ತ ತಮಿಳುನಾಡಿನಲ್ಲಿ, ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕಿಂತ ಡಿಎಂಕೆ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದರೆ, ಟಿವಿಕೆ ಬೆರಳೆಣಿಕೆಯಷ್ಟು ಕ್ಷೇತ್ರಗಳಲ್ಲಿ ಮಾತ್ರ ಮುಂದಿದೆ. ಆರಂಭಿಕ ಟ್ರೆಂಡ್ಗಳು ತಿರುಚಿ (ಪೂರ್ವ) ಮತ್ತು ಪೆರಂಬೂರ್ ಎರಡೂ ಕ್ಷೇತ್ರಗಳಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ಗೆ ಮುನ್ನಡೆ ಸೂಚಿಸುತ್ತಿವೆ.
ಅಸ್ಸಾಂನಲ್ಲಿ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) 35 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುಂದಿದ್ದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಏಳು ಸ್ಥಾನಗಳಲ್ಲಿ ಮುಂದಿದೆ. ಟೆಲಿವಿಷನ್ ಚಾನೆಲ್ಗಳು ತೋರಿಸಿದ ಆರಂಭಿಕ ಪ್ರವೃತ್ತಿಗಳ ಪ್ರಕಾರ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಕ್ರಮವಾಗಿ ಜಲುಕ್ಬರಿ ಮತ್ತು ಜೋರ್ಹತ್ ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಅಸ್ಸಾಂ ರಾಷ್ಟ್ರೀಯ ಪರಿಷತ್ ಅಧ್ಯಕ್ಷೆ ಲುರಿಂಜ್ಯೋತಿ ಗೊಗೊಯ್ ಕೂಡ ಖೋವಾಂಗ್ನಲ್ಲಿ ಮುಂದಿದ್ದಾರೆ. ಚುನಾವಣೆಗೆ ಮುನ್ನ ಬಿಜೆಪಿಗೆ ಸೇರಿದ ಮಾಜಿ ಹಿರಿಯ ಕಾಂಗ್ರೆಸ್ ನಾಯಕರಾದ ಪ್ರದ್ಯುತ್ ಬೋರ್ಡೊಲೊಯ್ ಮತ್ತು ಭೂಪೇನ್ ಬೋರಾ ಕ್ರಮವಾಗಿ ದಿಸ್ಪುರ್ ಮತ್ತು ಬಿಹ್ಪುರಿಯಾ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಕೇರಳದಲ್ಲಿ, ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಮತ್ತು ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ (ಯುಡಿಎಫ್) ನಿಕಟ ಸ್ಪರ್ಧೆಯಲ್ಲಿವೆ, ಕಾಂಗ್ರೆಸ್ ನೇತೃತ್ವದ ರಂಗ ಮುಂದಿದೆ.
ಸುದ್ದಿ ವರದಿಗಳ ಪ್ರಕಾರ, ಯುಡಿಎಫ್ 60 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ರಾಜ್ಯದಲ್ಲಿ 50 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುಂದಿದೆ. ಆರಂಭಿಕ ಪ್ರವೃತ್ತಿಗಳು ಅಂಚೆ ಮತಪತ್ರಗಳ ಎಣಿಕೆಯನ್ನು ಆಧರಿಸಿವೆ, ಇದು ಒಟ್ಟು ಚಲಾವಣೆಯಾದ ಮತಗಳಲ್ಲಿ ಶೇಕಡಾ 1.36 ರಷ್ಟಿದೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಭಾರತೀಯ ಷೇರುಮಾರುಕಟ್ಟೆ ಮೇಲೂ ಪರಿಣಾಮ ಬೀರುತ್ತಿದ್ದು, ದಿನದ ಆರಂಭಿಕ ವಹಿವಾಟಿನಲ್ಲೇ ಮಾರುಕಟ್ಟೆ ಚೇತೋಹಾರಿ ವಹಿವಾಟು ನಡೆಸುತ್ತಿದೆ.
ಸೆನ್ಸೆಕ್ಸ್ 600 ಅಂಕಗಳ ಏರಿಕೆ ಕಂಡಿದ್ದರೆ. ನಿಫ್ಟಿ 24 ಸಾವಿರ ಅಂಕಗಳ ಗಡಿಯತ್ತ ದಾಪುಗಾಲಿರಿಸಿದೆ. ನಿಫ್ಟಿ 50 ಬೆಳಿಗ್ಗೆ 9:17 ರ ಹೊತ್ತಿಗೆ 0.79 ರಷ್ಟು ಏರಿಕೆಯಾಗಿ 24,196.05 ಕ್ಕೆ ತಲುಪಿದೆ ಮತ್ತು ಬಿಎಸ್ಇ ಸೆನ್ಸೆಕ್ಸ್ 0.80 ರಷ್ಟು ಏರಿಕೆಯಾಗಿ 77,521.93 ಕ್ಕೆ ತಲುಪಿದೆ.
ಎಲ್ಲಾ 16 ಪ್ರಮುಖ ವಲಯಗಳು ಆರಂಭಿಕ ಹಂತದಲ್ಲಿ ಮುನ್ನಡೆಯಲ್ಲಿವೆ. ಕಚ್ಚಾ ತೈಲ ಬೆಲೆಗಳು ಇನ್ನೂ ಬ್ಯಾರೆಲ್ಗೆ $105 ಕ್ಕಿಂತ ಹೆಚ್ಚಿವೆ. ಇಂದು ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ಎಣಿಕೆ ನಡೆಯುತ್ತಿದೆ.
ನೆರೆಯ ತಮಿಳುನಾಡಿನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ನಟ ವಿಜಯ್ ರ ಟಿವಿಕೆ ಪಕ್ಷ ಆಡಳಿತಾರೂಢ ಡಿಎಂಕೆ ಪಕ್ಷವನ್ನೇ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಇತ್ತೀಚಿನ ವರದಿಗಳು ಬಂದಾಗ ತಮಿಳುನಾಡಿನ ಒಟ್ಟು 234 ಸ್ಥಾನಗಳ ಪೈಕಿ ಟಿವಿಕೆ ಪಕ್ಷ 84 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, 2ನೇ ಸ್ಥಾನದಲ್ಲಿರುವ ಎಡಿಎಂಕೆ 77 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತಾರೂಢ ಡಿಎಂಕೆ 54 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವುದರೊಂದಿಗೆ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ - 17,654
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು - 11,953
ಎಸ್ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ- 1,935
ಕಾಂಗ್ರೆಸ್ - 32,363
ಬಿಜೆಪಿ - 16,906
ಭಾರೀ ಕುತೂಹಲ ಮೂಡಿಸಿರುವ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸುತ್ತಿದೆ.
ಬಹುಮತಕ್ಕೆ ಬೇಕಾದ 148 ಸ್ಥಾನಗಳಿಗೆ ಹತ್ತಿರದಲ್ಲಿ ಬಿಜೆಪಿ ಇದೆ. ಆಡಳಿತಾರೂಢ ಟಿಎಂಸಿ ಕೂಡ ಅಷ್ಟೇ ಪ್ರಮಾಣದಲ್ಲಿ ಟಕ್ಕರ್ ನೀಡುತ್ತಿದೆ. ಇದು ಹೀಗೇ ಸಾಗಿದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಸತ್ಯವಾಗಲಿದೆ.
ಕಾಂಗ್ರೆಸ್ - 37,202
ಬಿಜೆಪಿ - 26,321
ಅಸ್ಸಾಂನಲ್ಲಿ ಏಕಪಕ್ಷೀಯವಾಗಿ ಬಿಜೆಪಿ ನೇತೃತ್ವದ ಮೈತ್ರಿ ನೂರರ ಗಡಿಯತ್ತ ಸಾಗುತ್ತಿದೆ. ಸದ್ಯಕ್ಕೆ 85 ಸ್ಥಾನಗಳಲ್ಲಿ ಎನ್ಡಿಎ ಮುನ್ನಡೆಯಲ್ಲಿದೆ. ಕಾಂಗ್ರೆಸ್ ನೇತೃತ್ವದ ಕೂಟವು ಕೇವಲ 26 ಸ್ಥಾನಗಳಲ್ಲಿ ಮಾತ್ರ ಮುಂದಿದೆ.
ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಫಲಿತಾಂಶ ಕೂಡ ಇಂದೇ ಪ್ರಕಟವಾಗುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೇ ಬಿಜೆಪಿ ಅವುಗಳನ್ನು ವಶಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ.
ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ (ಬಾಗಲಕೋಟೆ) ಮತ್ತು ಶಾಮನೂರು ಶಿವಶಂಕರಪ್ಪ (ದಾವಣಗೆರೆ ದಕ್ಷಿಣ) ಅವರ ನಿಧನದಿಂದಾಗಿ ಉಪಚುನಾವಣೆ ಘೋಷಣೆಯಾಗಿತ್ತು. ಬಿಜೆಪಿ ಬಾಗಲಕೋಟೆಯಿಂದ ಮಾಜಿ ಶಾಸಕ ಮತ್ತು 2023ರ ಪರಾಜಿತ ಅಭ್ಯರ್ಥಿ ವೀರಭದ್ರಯ್ಯ ಚರಂತಿಮಠ ಮತ್ತು ದಾವಣಗೆರೆ ದಕ್ಷಿಣದಿಂದ ಹೊಸ ಮುಖ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸಿದೆ.
ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ದಿವಂಗತ ಶಾಸಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಿದೆ. ಬಾಗಲಕೋಟೆ ಅಭ್ಯರ್ಥಿ ಉಮೇಶ್ ಮೇಟಿ ಎಚ್ ವೈ ಮೇಟಿ ಅವರ ಪುತ್ರರಾಗಿದ್ದರೆ, ದಾವಣಗೆರೆ ದಕ್ಷಿಣದ ಅಭ್ಯರ್ಥಿ ಸಮರ್ಥ ಮಲ್ಲಿಕಾರ್ಜುನ್ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಆಗಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸಮರ್ಥ್ ಶಾಮನೂರು ಹಿನ್ನಡೆಯಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದಾರೆ. ಇತ್ತ ಬಾಗಲಕೋಟೆಯಲ್ಲಿ ಬಿಜೆಪಿಯ ವೀರಣ್ಣ ಚರಂತಿ ಮಠ ಹಿನ್ನಡೆಯಲ್ಲಿದ್ದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ 13,391 ಮತಗಳ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 27,314 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ ಮಠ 13,923 ಮತಗಳನ್ನು ಪಡೆದು ಹಿನ್ನಡೆಯಲ್ಲಿದ್ದಾರೆ.
ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಾರಂಭವಾದ ಮೊದಲ ಎರಡು ಗಂಟೆಗಳಲ್ಲೇ ಕಾಂಗ್ರೆಸ್ ನೇತೃತ್ವದ UDF ಭಾರೀ ಮುನ್ನಡೆ ಸಾಧಿಸಿದೆ. ಆರಂಭಿಕ ಬೆಳವಣಿಗೆಗಳು ಕೇರಳದಲ್ಲಿ UDF ಸರ್ಕಾರ ರಚಿಸುವ ಸಾಧ್ಯತೆಯನ್ನು ಸೂಚಿಸುತ್ತಿವೆ.
ಮಾಹಿತಿಗಳ ಪ್ರಕಾರ, UDF 90ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ, CPI(M) ನೇತೃತ್ವದ LDF ಸುಮಾರು 50ಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಬಿಜೆಪಿ ನೇತೃತ್ವದ NDA ಸುಮಾರು 5 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಕಾಂಗ್ರೆಸ್ ಸುಮಾರು 50 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, CPI(M) 31, IUML 17, CPI 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜೊತೆಗೆ ಕೇರಳ ಕಾಂಗ್ರೆಸ್ (M) 4 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದರೆ, ಬಿಜೆಪಿ, ಕೇರಳ ಕಾಂಗ್ರೆಸ್ (KEC) ಮತ್ತು ರೆವಲ್ಯೂಷನರಿ ಸೋಷಲಿಸ್ಟ್ ಪಾರ್ಟಿ (RSP) ತಲಾ 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.
ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆ ಸಾಧ್ಯತೆ ಗಟ್ಟಿಯಾಗುತ್ತಿದೆ. ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಜನತಾಂತ್ರಿಕ ಮೈತ್ರಿ (ಎನ್ಡಿಎ) ಸ್ಪಷ್ಟ ಮುನ್ನಡೆಯನ್ನು ಸಾಧಿಸಿದ್ದು, ಸರ್ಕಾರ ರಚನೆಗೆ ಅಗತ್ಯವಿರುವ ಬಹುಮತದ ಗಡಿ ದಾಟಿದೆ.
ಇಲ್ಲಿಯವರೆಗೆ ಲಭ್ಯವಾದ ಮಾಹಿತಿಯ ಪ್ರಕಾರ, ಎನ್ಡಿಎ 88 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ವಿರೋಧ ಪಕ್ಷಗಳ ಮೈತ್ರಿ ಕೇವಲ 23 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಹೊಂದಿದೆ. ಸರ್ಕಾರ ರಚಿಸಲು ಅಗತ್ಯವಿರುವ 64 ಸ್ಥಾನಗಳ ಗುರಿಯನ್ನು ಎನ್ಡಿಎ ಸುಲಭವಾಗಿ ದಾಟಿರುವುದರಿಂದ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚಿರುವ ಸಾಧ್ಯತೆ ಬಹಳ ಹೆಚ್ಚಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಈ ವರೆಗಿನ ಫಲಿತಾಂಶಗಳ ಅನ್ವಯ ಬಿಜೆಪಿ ಈಗಾಗಲೇ ಮ್ಯಾಜಿಕ್ ನಂಬರ್ 148 ಅನ್ನು ದಾಟಿದ್ದು, ಒಟ್ಟು 294 ಕ್ಷೇತ್ರಗಳ ಪೈಕಿ ಬರೊಬ್ಬರಿ 173 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತಾರೂಢ ಟಿಎಂಸಿ ಪಕ್ಷ 111 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿ 2ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
ಅಂತೆಯೇ ಕಾಂಗ್ರೆಸ್ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ ಎಡಪಕ್ಷಗಳ ಮೈತ್ರಿಕೂಟ 1 ಸ್ಥಾನದಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.
ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಉತ್ತರ ಪರವೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಹಿನ್ನಡೆಯಲ್ಲಿದ್ದಾರೆ.
ವರದಿಗಳ ಪ್ರಕಾರ, ಸಿಪಿಐ(ಎಂ) ಅಭ್ಯರ್ಥಿ ಇ ಟಿ ಟೈಸನ್ ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ಸುಮಾರು 240ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಆದರೆ, ಕಾಂಗ್ರೆಸ್ ಬಲವಿರುವ ಸ್ಥಳೀಯ ಸಂಸ್ಥೆಗಳ ಮತಗಳು ಎಣಿಕೆಗೆ ಬಂದ ನಂತರ ಸತೀಶನ್ ಮುನ್ನಡೆ ಪಡೆಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಧರ್ಮಡಂ ಕ್ಷೇತ್ರದಲ್ಲಿ ಪಿಣರಾಯಿ ವಿಜಯನ್ ನಾಲ್ಕನೇ ಸುತ್ತಿನಲ್ಲೂ ಸುಮಾರು 2800 ಮತಗಳ ಅಂತರದಿಂದ ಹಿಂದುಳಿದಿದ್ದಾರೆ.
ಪುದುಚೇರಿ ವಿಧಾನಸಭೆಯಲ್ಲೂ ಎನ್ ಡಿಎ ಮೈತ್ರಿಕೂಟ ಭಾರಿ ಮುನ್ನಡೆಯಲ್ಲಿದ್ದು, ಒಟ್ಟು 30 ಕ್ಷೇತ್ರಗಳ ಪೈಕಿ ಎನ್ ಆರ್ ಸಿ ಮತ್ತು ಎನ್ ಡಿಎ ಮೈತ್ರಿಕೂಟ 16 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಮೈತ್ರಿಕೂಟ 4 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆಯಲ್ಲಿದ್ದು, ನಟ ವಿಜಯ್ ರ ಟಿವಿಕೆ ಕೂಡ 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಅಸ್ಸಾಂನಲ್ಲಿ ರಾಷ್ಟ್ರೀಯ ಜನತಾಂತ್ರಿಕ ಮೈತ್ರಿ (ಎನ್ಡಿಎ) ಸ್ಪಷ್ಟ ಮುನ್ನಡೆ ಸಾಧಿಸಿದೆ. ಚುನಾವಣಾ ಆಯೋಗದ ಮಾಹಿತಿಯಂತೆ, ಎನ್ಡಿಎ 87 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
126 ಕ್ಷೇತ್ರಗಳಲ್ಲಿ 114 ಕ್ಷೇತ್ರಗಳ ಬೆಳವಣಿಗೆಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಬಿಜೆಪಿ 71 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಮೈತ್ರಿ ಪಕ್ಷಗಳಾದ ಅಸೋಮ್ ಗಣ ಪರಿಷತ್ 7 ಕ್ಷೇತ್ರಗಳಲ್ಲಿ ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ 9 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.
ಇನ್ನೊಂದೆಡೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಅದರ ಮೈತ್ರಿ ಪಕ್ಷಗಳಾದ ಅಸ್ಸಾಂ ರಾಷ್ಟ್ರೀಯ ಪರಿಷತ್ ಮತ್ತು ರೈಜೋರ್ ದಳ ತಲಾ ಒಂದು ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಇದಲ್ಲದೆ, ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ತಲಾ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಚಾಲ್ತಿಯಲ್ಲಿರುವಂತೆಯೇ ಇತ್ತ ಉತ್ತರ 24 ಪರಗಣದ ನೊಪಾರ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಗಾರ್ಗಿ ಚಟರ್ಜಿ ಮರು ಮತದಾನಕ್ಕೆ ಆಗ್ರಹಿಲಿದ್ದಾರೆ. "ಮತ ಎಣಿಕೆ ಸರಿಯಾಗಿ ನಡೆಯಬೇಕು. ನಾವು ಗೆಲ್ಲುತ್ತೇವೆ ಎಂದು ನಾವು ಭಾವಿಸುತ್ತೇವೆ" ಎಂದು ಹೇಳಿದ್ದಾರೆ.
ಮತ ಎಣಿಕೆಗೆ ಒಂದು ದಿನ ಮೊದಲು, ಮಧ್ಯಮಗ್ರಾಮ ವಿಧಾನಸಭೆಯಲ್ಲಿ ತಿರಸ್ಕರಿಸಲಾಗಿದೆ ಎನ್ನಲಾದ ನೊಪಾರ ವಿಧಾನಸಭೆಯ ವಿವಿಪಿಎಟಿ ಸ್ಲಿಪ್ಗಳಲ್ಲಿ. ನಿನ್ನೆ ಪತ್ತೆಯಾದ ಎಲ್ಲಾ ವಿವಿಪಿಎಟಿಗಳು ನನ್ನವು. ನಾನು ಮರು ಮತದಾನಕ್ಕೆ ಒತ್ತಾಯಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಸ್ಸಾಂನ ಜೋರ್ಹಾಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೌರವ್ ಗೊಗೊಯ್'ಗೆ ಹಿನ್ನಡೆಯಲ್ಲಿದ್ದಾರೆ.
ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಅವರು ಬಿಜೆಪಿ ಅಭ್ಯರ್ಥಿ ಹಿತೇಂದ್ರನಾಥ್ ಗೋಸ್ವಾಮಿ ವಿರುದ್ಧ 4,132 ಮತಗಳಿಂದ ಹಿಂದೆ ಇದ್ದಾರೆ.
ಇಲ್ಲಿಯವರೆಗೆ, ಗೋಗೋಯ್ ಅವರು 9,875 ಮತಗಳನ್ನು ಪಡೆದಿದ್ದರೆ, ಹಿತೇಂದ್ರನಾಥ್ ಗೋಸ್ವಾಮಿ 14,007 ಮತಗಳನ್ನು ಗಳಿಸಿದ್ದಾರೆ. ಜೋರ್ಹಾಟ್ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಗೋಗೋಯಿ, ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧೆಗಿಳಿದಿದ್ದಾರೆ.
ಇನ್ನೊಂದೆಡೆ, ಐದು ಬಾರಿ ಶಾಸಕರಾದ ಗೋಸ್ವಾಮಿ, ಈ ಕ್ಷೇತ್ರವನ್ನು ಮೂರು ಬಾರಿ ಅಸೋಮ್ ಗಣ ಪರಿಷತ್ ಪಕ್ಷದಿಂದ ಹಾಗೂ ಎರಡು ಬಾರಿ ಭಾರತೀಯ ಜನತಾ ಪಕ್ಷದ ಪರವಾಗಿ ಪ್ರತಿನಿಧಿಸಿದ್ದಾರೆ, ಇದೀಗ ಮೂರನೇ ಅವಧಿಗೆ ಗೆಲ್ಲಲು ಯತ್ನಿಸುತ್ತಿದ್ದಾರೆ.
ಪ್ರವೃತ್ತಿಗಳ ಬಗ್ಗೆ ಪ್ರತಿಕ್ರಿಯಿಸಿದ ಗೋಗೋಯಿ, “ದಿಸ್ಪುರ ಕಚೇರಿಯಲ್ಲಿ ನಮ್ಮ ವೀಕ್ಷಕರನ್ನು ನಿಯೋಜಿಸಲಾಗಿದೆ. ಅವರು ಮತ ಎಣಿಕೆ ಪ್ರಕ್ರಿಯೆಯನ್ನು ಗಮನಿಸುತ್ತಿದ್ದಾರೆ. ಮತ ಎಣಿಕೆಯನ್ನು ನಿಲ್ಲಿಸಬೇಕೇ ಅಥವಾ ಮರುಎಣಿಕೆ ಅಗತ್ಯವಿದೆಯೇ ಎಂಬ ಬಗ್ಗೆ ನಮ್ಮ ಪ್ರತಿನಿಧಿಗಳಿಂದ ವಿಚಾರಣೆ ಬಂದಿದೆ. ಕಾಂಗ್ರೆಸ್ ಪಕ್ಷದ ಕ್ರಮಗಳಿಂದ ನನಗೆ ತೃಪ್ತಿ ಇದೆ. ಇನ್ನೂ ಸ್ವಲ್ಪ ಸಮಯದಲ್ಲಿ ಸ್ಪಷ್ಟತೆಗಳು ತಿಳಿದುಬರಲಿದೆ ಎಂದು ತಿಳಿಸಿದ್ದಾರೆ.
ನೆರೆಯ ತಮಿಳುನಾಡಿನಲ್ಲಿ ನಟ ವಿಜಯ್ ರ ಟಿವಿಕೆ ಪಕ್ಷ ಐತಿಹಾಸಿಕ ಸಾಧನೆಯತ್ತ ದಾಪುಗಾಲಿರಿಸಿದ್ದು, ಈಗಾಗಲೇ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ನಟ ವಿಜಯ್ ಸ್ಪರ್ಧೆ ಮಾಡಿರುವ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ ಆಡಳಿತಾರೂಢ ಡಿಎಂಕೆ 48 ಸ್ಥಾನಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ. ಅಚ್ಚರಿ ಬೆಳವಣಿಗೆಯಲ್ಲಿ ಎಡಿಎಂಕೆ 77 ಸ್ಥಾನಗಳೊಂದಿಗೆ 2ನೇ ಸ್ಥಾನದಲ್ಲಿದೆ.
ಪುದುಚೇರಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರಿಯುತ್ತಿದೆ, ಮುಖ್ಯಮಂತ್ರಿ ಎನ್ ರಂಗಸಾಮಿ ನೇತೃತ್ವದ ಅಖಿಲ ಭಾರತ ಎನ್ಆರ್ ಕಾಂಗ್ರೆಸ್ (ಎಐಎನ್ಆರ್ಸಿ) ಪಕ್ಷ ಮುನ್ನಡೆ ಸಾಧಿಸಿದೆ.
ಮತದಾನದ ಎಣಿಕೆಯಲ್ಲಿ, ರಂಗಸಾಮಿ ಅವರು ತಟ್ಟಾಂಚಾವಡಿ ಕ್ಷೇತ್ರದಲ್ಲಿ 3,591 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ರಂಗಸಾಮಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿದಿದ್ದಾರೆ.
ಎಐಎನ್ಆರ್ಸಿ ಅಭ್ಯರ್ಥಿಗಳಾದ ಆರ್ ರವಿಕುಮಾರ್, ವೈಯಾಪುರಿ ಮಣಿಕಂದನ್, ಸಿ ಅಯ್ಯಪ್ಪನ್, ಇ ಮೋಹನ್ ದಾಸ್, ಪಿ ರಾಜವೇಲು ಹಾಗೂ ಪಿ ಆರ್ ಎನ್ ತಿರುಮುರುಗನ್ ಕ್ರಮವಾಗಿ ವಿಲಿಯನೂರ್, ಮುತ್ತಿಯಲ್ಪೇಟೆ, ಅರಿಯಾಂಕುಪ್ಪಂ, ಎನ್ಬಲಂ, ನೆಟ್ಟಪಾಕ್ಕಂ ಮತ್ತು ಕಾರೈಕಲ್ ಉತ್ತರ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ ಎಂದು ಚುನಾವಣಾ ಆಯೋಗದ ಮಾಹಿತಿ ಇದೆ.
ಇದೇ ವೇಳೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ಎ ನಮಸ್ಶಿವಾಯಂ ಮತ್ತು ಟಿ ಕೆ ಎಸ್ಎಂ ಮೀನಚಿಸುಂದರಂ ಕ್ರಮವಾಗಿ ಮಾನ್ನಾಡಿಪೇಟೆ ಮತ್ತು ನೆರವಿ ಟಿ.ಆರ್. ಪಟ್ಟಿಣಂ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆಯ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ರವಿ ಕಿಶನ್ ಅವರು, “ಅಸ್ಸಾಂನಲ್ಲಿ ಈ ಫಲಿತಾಂಶವನ್ನು ನಿರೀಕ್ಷಿಸಲಾಗಿತ್ತು ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೆಲಸ, ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಶರ್ಮಾ ಅವರ ಆಡಳಿತ ಮತ್ತು ಬಿಜೆಪಿಯ ನೀತಿಗಳು, ಬಡವರ ಕಲ್ಯಾಣ ಹಾಗೂ ಮಹಿಳಾ ಸಬಲೀಕರಣ ಮುಖ್ಯ ಕಾರಣಗಳಾಗಿವೆ ಎಂದು ತಿಳಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಮತ ಎಣಿಕೆ ಕಾರ್ಯ ನಿರ್ಣಾಯಕ ಘಟ್ಟ ತಲುಪಿದೆ. ಮತ ಎಣಿಕೆ ಆರಂಭವಾದ ಎರಡು ಗಂಟೆಗಳ ನಂತರ ಮತ್ತು ಆರಂಭಿಕ ಟ್ರೆಂಡ್ಗಳು ತಮಿಳುನಾಡಿನಲ್ಲಿ ನಟ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಗೆ ದೊಡ್ಡ ಗೆಲುವಿನತ್ತ ದಾಪುಗಾಲಿರಿಸುತ್ತಿರುವುದನ್ನು ತೋರಿಸುತ್ತಿವೆ.
ತಮಿಳುನಾಡಿನಲ್ಲಿ ವಿಜಯ್ ಮ್ಯಾಜಿಕ್
ತಮಿಳುನಾಡಿನಲ್ಲಿ 234 ಸ್ಥಾನಗಳಿಗೆ ಮತ ಚಲಾಯಿಸಲಾಗಿದ್ದು, ಪ್ರಸ್ತುತ 107 ಸ್ಥಾನಗಳಲ್ಲಿ ಮುನ್ನಡೆಯಲ್ಲಿರುವ ಟಿವಿಕೆ ಮತ್ತು 77 ಸ್ಥಾನಗಳಲ್ಲಿ ಮುನ್ನಡೆಯಲ್ಲಿರುವ ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಡಿಎಂಡಿಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಆಡಳಿತಾರೂಢ ಡಿಎಂಕೆ ಕೇವಲ 48 ಸ್ಥಾನಗಳೊಂದಿಗೆ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.
ಬಂಗಾಳದಲ್ಲಿ ಬಿಜೆಪಿ ಅಲೆ, ದೀದಿಗೆ ಮುಖಭಂಗ
ಅತ್ತ ಪಶ್ಚಿಮ ಬಂಗಾಳದಲ್ಲಿ, ಜನರು 294 ಸ್ಥಾನಗಳಿಗೆ ಮತ ಚಲಾಯಿಸಿದ್ದಾರೆ, ಇದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವಿನ ಹೋರಾಟವಾಗಿದೆ. ಆರಂಭಿಕ ಪ್ರವೃತ್ತಿಗಳ ಪ್ರಕಾರ, ಬಿಜೆಪಿ ಈಗಾಗಲೇ ಮ್ಯಾಜಿಕ್ ನಂಬರ್ ದಾಟಿದ್ದು,180 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಮತ್ತೊಂದೆಡೆ ಮಮತಾ ಬ್ಯಾನರ್ಜಿ ಅವರ ಪಕ್ಷವು 108 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 1 ಸ್ಥಾನದಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆಯಲ್ಲಿದೆ.
ಚುನಾವಣೆ ಎರಡು ಕಾರಣಗಳಿಗಾಗಿ ಮಹತ್ವದ್ದಾಗಿದ್ದು, ಮೊದಲನೆಯದಾಗಿ, ಬಂಗಾಳವು ಬಹಳ ಹಿಂದೆಯೇ ಬಿಜೆಪಿಯನ್ನು ತಪ್ಪಿಸಿದೆ. ಮತ್ತು ಎರಡನೆಯದಾಗಿ, ಮಮತಾ ಬ್ಯಾನರ್ಜಿ ಅವರು ಚುನಾವಣಾ ಆಯೋಗದ ವಿರುದ್ಧ ಮತದಾರರ ಪಟ್ಟಿಯ ಶುದ್ಧೀಕರಣ ವ್ಯಾಯಾಮದ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಸಮರ ಸಾರಿದ್ದಾರೆ, ಇದು 89 ಲಕ್ಷ ಮತದಾರರನ್ನು ತೆಗೆದುಹಾಕಿತ್ತು. ಇದು ರಾಜ್ಯದ ಮತದಾರರಲ್ಲಿ ಸರಿಸುಮಾರು 11.6 ಪ್ರತಿಶತ. ಈ ಅಂಕಿ ಅಂಶವು 2021 ರಲ್ಲಿ ತೃಣಮೂಲ ಕಾಂಗ್ರೆಸ್ನ ಗೆಲುವಿನ ಅಂತರಕ್ಕಿಂತ ಸ್ವಲ್ಪ ಹೆಚ್ಚಾಗಿದೆ ಎನ್ನಲಾಗಿದೆ.
ಮತ ಎಣಿಕೆಯಲ್ಲಿ ಡಿಎಂಕೆ ಪಕ್ಷ ಮೂರನೇ ಸ್ಥಾನಕ್ಕೆ ಕುಸಿದ ಹಿನ್ನಲೆಯಲ್ಲಿ ಚೆನ್ನೈನಲ್ಲಿರುವ ಡಿಎಂಕೆ ಪ್ರಧಾನ ಕಚೇರಿ ಅಣ್ಣಾ ಅರಿವಲಯಂನಲ್ಲಿ ಹಾಕಲಾಗಿದ್ದ ಟೆಂಟ್ ಗಳನ್ನು ಡೇರೆಗಳನ್ನು ತೆಗೆದುಹಾಕಲಾಯಿತು. ಆರಂಭಿಕ ಪ್ರವೃತ್ತಿಗಳ ಪ್ರಕಾರ ಟಿವಿಕೆ 107, ಎಐಎಡಿಎಂಕೆ 77 ಮತ್ತು ಡಿಎಂಕೆ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 10 ವರ್ಷಗಳ ಬಳಿಕ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರದತ್ತ ದಾಪುಗಾಲಿರಿಸಿದ್ದು, ಒಟ್ಟು 140 ಕ್ಷೇತ್ರಗಳ ಪೈಕಿ 85 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಇದು ಮ್ಯಾಜಿಕ್ ಸಂಖ್ಯೆ 71ಕ್ಕಿಂತ ಹೆಚ್ಚಾಗಿದ್ದು, ಈ ಬಾರಿ ಯುಡಿಎಫ್ ಮೈತ್ರಿಕೂಟ ಅಧಿಕಾರ ರಚನೆ ಸ್ಪಷ್ಟವಾಗಿದೆ. ಅತ್ತ ಸಿಎಂ ಪಿಣರಾಯಿ ವಿಜಯನ್ ರ ಆಡಳಿತಾರೂಢ ಎಲ್ ಡಿಎಫ್ 42 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದು 2ನೇ ಸ್ಥಾನಕ್ಕೆ ಕುಸಿದಿದೆ. ಇಲ್ಲಿ ಬಿಜೆಪಿ ಮೈತ್ರಿಕೂಟ 1 ಕ್ಷೇತ್ರದಲ್ಲಿ ಮಾತ್ರ ಮುನ್ನಡೆಯಲ್ಲಿದೆ.
ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವಂತೆಯೇ ಇಂದು ಸಂಜೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.
ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆಯ ಪ್ರಾರಂಭಿಕ ಸುತ್ತುಗಳ ಬಳಿಕ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಮುನ್ನಡೆ ಸಾಧಿಸಿದ್ದು, 140 ಕ್ಷೇತ್ರಗಳಲ್ಲಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ಇದರಿಂದ KPCC ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಇನ್ನು ಸಿಪಿಐ(ಎಂ) ನೇತೃತ್ವದ ಆಡಳಿತಾರೂಢ ಎಲ್ಡಿಎಫ್ (LDF) ಕೇವಲ ಸುಮಾರು 40 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆಯಲ್ಲಿದೆ.
ಈ ಆರಂಭಿಕ ಪ್ರವೃತ್ತಿಗಳು ರಾಜ್ಯದಲ್ಲಿ ಅಧಿಕಾರ ಬದಲಾವಣೆಯ ಸೂಚನೆ ನೀಡುತ್ತಿದ್ದು, UDF ಭಾರೀ ಬಹುಮತದತ್ತ ಸಾಗುತ್ತಿರುವುದು ಸ್ಪಷ್ಟವಾಗುತ್ತಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಜಲುಕ್ಬರಿ ಕ್ಷೇತ್ರದಲ್ಲಿ ಸ್ಪಷ್ಟ ಮುನ್ನಡೆ ಸಾಧಿಸಿದ್ದಾರೆ.
ಚುನಾವಣಾ ಆಯೋಗದ ಮಾಹಿತಿಯಂತೆ, ಅವರು ಕಾಂಗ್ರೆಸ್ ಅಭ್ಯರ್ಥಿ ಬಿದಿಶಾ ನಿಯೋಗ್ ವಿರುದ್ಧ 7,748 ಮತಗಳ ಮುನ್ನಡೆ ಪಡೆದಿದ್ದಾರೆ.
ಎರಡನೇ ಸುತ್ತಿನ ಮತ ಎಣಿಕೆಯ ಅಂತ್ಯಕ್ಕೆ, ಶರ್ಮಾ 11,821 ಮತಗಳನ್ನು ಪಡೆದಿದ್ದು, ನೀಯೋಗ್ 4,073 ಮತಗಳನ್ನು ಗಳಿಸಿದ್ದಾರೆ.
AINRC 7ರಲ್ಲಿ ಮುನ್ನಡೆ, ಐಎನ್'ಡಿ 3, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ 2, ಎಐಎಡಿಎಂಕೆ ಮತ್ತು ಡಿಎಂಕೆ ತಲಾ 1 ಸ್ಥಾನದಲ್ಲಿ ಮುನ್ನಡೆ
ಕಳೆದ ಚುನಾವಣೆಯಲ್ಲಿ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗಿದ್ದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF), ಈ ಬಾರಿ ತಿರುವನಂತಪುರಂನಲ್ಲಿ ತನ್ನ ಸ್ಥಾನವನ್ನು ಸುಧಾರಿಸಿಕೊಂಡಿದ್ದು, ಒಟ್ಟು 14 ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಇದೇ ವೇಳೆ ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಎಂಟು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿಗೆ ಈ ಬಾರಿ ನೇಮೋಂ ಕ್ಷೇತ್ರದಲ್ಲಿ ಮಾತ್ರ ಸಾಧನೆ ದೊರೆತಿದ್ದು, ಪಕ್ಷದ ಅಭ್ಯರ್ಥಿ ರಾಜೀನ್ ಚಂದ್ರಶೇಖರ್ ಅವರು ಸಿಪಿಐ(ಎಂ) ಹಿರಿಯ ನಾಯಕ ವಿ ಶಿವನ್ಕುಟ್ಟಿ ವಿರುದ್ಧ ಮೂರನೇ ಸುತ್ತಿನ ಮತ ಎಣಿಕೆಯಲ್ಲಿ 1972 ಮತಗಳ ಅಂತರದಿಂದ ಮುನ್ನಡೆ ಪಡೆದಿದ್ದಾರೆ.
ಅಸ್ಸಾಂನಲ್ಲಿ ವಿರೋಧ ಪಕ್ಷದ ಪ್ರಮುಖ ನಾಯಕರು ತಮ್ಮ ಕ್ಷೇತ್ರಗಳಲ್ಲಿ ಹಿನ್ನಡೆಯಲ್ಲಿದ್ದಾರೆ ಎಂದು ಚುನಾವಣಾ ಆಯೋಗದ ಮಾಹಿತಿ ತಿಳಿಸಿದೆ.
ವಿಪಕ್ಷ ನಾಯಕ ದೇಬಬ್ರತ ಸೈಕಿಯಾ ಶಿವಸಾಗರ್ ಜಿಲ್ಲೆಯ ನಜಿರಾ ಕ್ಷೇತ್ರದಲ್ಲಿ 4,967 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಯೂರ್ ಬೋರ್ಗೊಹೈನ್ ಎರಡನೇ ಸುತ್ತಿನ ಬಳಿಕ 11,607 ಮತಗಳನ್ನು ಪಡೆದಿದ್ದು, ಸೈಕಿಯಾ 6,640 ಮತಗಳನ್ನು ಪಡೆದಿದ್ದಾರೆ.
ರೈಜೋರ್ ದಲ್ ಅಧ್ಯಕ್ಷ ಹಾಗೂ ಶಾಸಕ ಅಖಿಲ್ ಗೊಗೊಯ್ ಶಿವಸಾಗರ್ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದು, ಅವರು 3,262 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಕುಶಾಲ್ ದೋವಾರಿ 5,171 ಮತಗಳನ್ನು ಗಳಿಸಿದ್ದಾರೆ.
ಎನ್ಡಿಎ ಮೈತ್ರಿ ಪಕ್ಷವಾದ ಅಸೋಮ್ ಗಣ ಪರಿಷತ್ ಅಭ್ಯರ್ಥಿ ಪ್ರದೀಪ್ ಹಜಾರಿಕಾ 443 ಮತಗಳನ್ನು ಪಡೆದಿದ್ದಾರೆ.
ಇನ್ನು ಅಸ್ಸಾಂ ಜಾತೀಯ ಪರಿಷತ್ ಅಧ್ಯಕ್ಷ ಲುರಿಂಜ್ಯೋತಿ ಗೊಗೊಯ್ ಕೂಡ ಬಿಜೆಪಿ ಅಭ್ಯರ್ಥಿಯ ವಿರುದ್ಧ ಹಿನ್ನಡೆಯಲ್ಲಿದ್ದಾರೆ.
ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ ಅವರಿಗೆ ಭರ್ಜರಿ ಮುನ್ನಡೆ ಲಭಿಸಿದ್ದು, ಜಯ ಬಹುತೇಕ ಖಚಿತವಾಗಿದೆ. ರಂಗಸಾಮಿ ಅವರು ತಟ್ಟಾಂಚಾವಡಿ ಕ್ಷೇತ್ರದಲ್ಲಿ 3,591 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
All India NR Congress (AINRC) ನೇತೃತ್ವದ ರಂಗಸಾಮಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಅವರ ಪಕ್ಷದ ಅಭ್ಯರ್ಥಿಗಳು ಕನಿಷ್ಠ ಏಳು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
AINRC ಅಭ್ಯರ್ಥಿಗಳಾದ ಆರ್ ರವಿಕುಮಾರ್, ವೈಯಾಪುರಿ ಮಣಿಕಂದನ್, ಸಿ ಅಯ್ಯಪ್ಪನ್, ಇ ಮೋಹನ್ದಾಸ್, ಪಿ ರಾಜವೇಲು ಮತ್ತು ಪಿ ಆರ್ ಎನ್ ತಿರುಮುರುಗನ್ ಕ್ರಮವಾಗಿ ವಿಲಿಯನೂರ್, ಮುತ್ತಿಯಲ್ಪೇಟೆ, ಅರಿಯಾಂಕುಪ್ಪಂ, ಎನ್ಬಲಂ, ನೆಟ್ಟಪಾಕ್ಕಂ ಮತ್ತು ಕಾರೈಕಲ್ ಉತ್ತರ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಅಂಕಿಅಂಶಗಳು ತಿಳಿಸಿವೆ.
ಇನ್ನೊಂದೆಡೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ಎ ನಮಸ್ಸಿವಾಯಂ ಮತ್ತು ಟಿ ಕೆ ಎಸ್ಎಂ ಮೀನಾಚ್ಚಿಸುಂದರಂ ಕ್ರಮವಾಗಿ ಮಾನ್ನಾಡಿಪೇಟೆ ಮತ್ತು ನೆರವಿ ಟಿ.ಆರ್. ಪಟ್ಟಿಣಂ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಒಟ್ಟಾರೆ, ಪುದುಚೇರಿಯಲ್ಲಿ AINRC ಮುನ್ನಡೆ ಸಾಧಿಸಿರುವುದು ಸರ್ಕಾರ ರಚನೆಗೆ ದಾರಿ ಮಾಡಿಕೊಡುವ ಸಾಧ್ಯತೆಯನ್ನು ಹೆಚ್ಚಿಸಿದೆ.
ಕರ್ನಾಟಕದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಮುನ್ನಡೆ ಸಾಧಿಸಿದ್ದು, ಬರೊಬ್ಬರಿ 10764 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಒಟ್ಟು 23 ಸುತ್ತುಗಳ ಮತ ಎಣಿಕೆಯ ಪೈಕಿ 16 ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಈ ಪೈಕಿ ಉಮೇಶ್ ಮೇಟಿ ಒಟ್ಟು 64747 ಮತಗಳನ್ನು ಪಡೆದಿದ್ದು, ತಮ್ಮ ಪ್ರತಿ ಸ್ಪರ್ಧಿ ಬಿಜೆಪಿಯ ವೀರಣ್ಣ ಚರಂತಿಮಠ (53983 ಮತಗಳು) ಅವರನ್ನು ಹಿಂದಿಕ್ಕಿದ್ದಾರೆ.
ಕೇರಳ ವಿಧಾನಸಭೆ ಚುನಾವಣೆಯ ಆರಂಭಿಕ ಮತ ಎಣಿಕೆ ಪ್ರವೃತ್ತಿಗಳಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಬಹುಮತದ ಗಡಿಯನ್ನು ದಾಟುತ್ತಿದ್ದಂತೆಯೇ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಈ ಬೆಳವಣಿಗೆಯನ್ನು ಸ್ವಾಗತಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ತರೂರ್, ಮತದಾರರು ದಶಕದ ಆಡಳಿತದ ನಂತರ ಬದಲಾವಣೆಯನ್ನು ಬಯಸುತ್ತಿರುವುದು ಈ ಫಲಿತಾಂಶದ ಮೂಲಕ ತಿಳಿಯುತ್ತಿದೆ. “ಇದು ಹೊಸ ರಾಜಕೀಯದ ಸೂಚನೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇರಳದಲ್ಲಿ ಮುಂದಿನ ಸರ್ಕಾರದ ಕುರಿತು ಮಾತನಾಡಿ, ಕಾಂಗ್ರೆಸ್ ಪಕ್ಷ ತ್ವರಿತ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾದ ಶಾಸಕರೊಂದಿಗೆ ಚರ್ಚಿಸಲು ಪ್ರತಿನಿಧಿಯನ್ನು ನೇಮಿಸಲಿದ್ದು, ನಂತರ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ದಾವಣಗೆರೆಯ 21 ಸುತ್ತಿನ ಮತಎಣಿಕೆಯ ಪೈಕಿ 9 ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶ್ಯಾಮನೂರು 3986 ಮತಗಳ ಮುನ್ನಡೆಯಲ್ಲಿದ್ದಾರೆ. ಸಮರ್ಥ್ ಒಟ್ಟು 30530ಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ 26544 ಮತಗಳನ್ನು ಪಡೆದಿದ್ದಾರೆ.
ಗುವಾಹಾಟಿ ಕೇಂದ್ರ ಕ್ಷೇತ್ರದಲ್ಲಿ ಅಸ್ಸಾಂ ಜಾತೀಯ ಪರಿಷತ್ (AJP) ಅಭ್ಯರ್ಥಿ ಕುಂಕಿ ಚೌಧರಿ ಅವರು ಬಿಜೆಪಿ ಹಿರಿಯ ನಾಯಕ ವಿಜಯ್ ಕುಮಾರ್ ಗುಪ್ತಾ ವಿರುದ್ಧ ಹಿನ್ನಡೆಯಲ್ಲಿದ್ದಾರೆ ಎಂದು ಚುನಾವಣಾ ಆಯೋಗದ ಮಾಹಿತಿ ತಿಳಿಸಿದೆ.
ಮೂರನೇ ಸುತ್ತಿನ ಮತ ಎಣಿಕೆಯ ಅಂತ್ಯದ ವೇಳೆಗೆ ಗುಪ್ತಾ 16,892 ಮತಗಳನ್ನು ಪಡೆದಿದ್ದು, ಕುಂಕಿ ಚೌಧರಿ 9,524 ಮತಗಳನ್ನು ಪಡೆದಿದ್ದಾರೆ. ಇದರಿಂದಾಗಿ ಗುಪ್ತಾ 7,368 ಮತಗಳ ಸ್ಪಷ್ಟ ಮುನ್ನಡೆ ಸಾಧಿಸಿದ್ದಾರೆ.
ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭಿಕ ಹಂತದಲ್ಲೇ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಐದು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಆರಂಭಿಕ ಎಣಿಕೆ ಪ್ರವೃತ್ತಿಗಳ ಪ್ರಕಾರ, NDA ನೇಮಮ್, ಕಜಕೂಟಂ, ಮಂಜೇಶ್ವರ, ಪಾಲಕ್ಕಾಡ್ ಮತ್ತು ಚತ್ತನ್ನೂರ್ನಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ನೇಮಮ್ ಕ್ಷೇತ್ರದಲ್ಲಿ ಬಿಜೆಪಿ ನಾಯಕ ರಾಜೀನ್ ಚಂದ್ರಶೇಖರ್ ಅವರು ನಾಲ್ಕನೇ ಸುತ್ತಿನ ಮತ ಎಣಿಕೆಯ ನಂತರ 4,234 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಶಿವಸಾಗರ್ ಕ್ಷೇತ್ರದಲ್ಲಿ ರೈಜೋರ್ ದಳದ ಅಧ್ಯಕ್ಷ ಅಖಿಲ್ ಗೊಗೋಯ್ ಅವರು ಬಿಜೆಪಿ ಅಭ್ಯರ್ಥಿ ಕುಶಾಲ್ ದೋವಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಮುನ್ನಡೆ ಸಾಧಿಸಿದ್ದು, ಒಟ್ಟು 140 ಕ್ಷೇತ್ರಗಳ ಪೈಕಿ 91 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ ಎಂದು ಚುನಾವಣಾ ಆಯೋಗದ ಪ್ರಾಥಮಿಕ ಅಂಕಿಅಂಶಗಳು ತಿಳಿಸಿವೆ.
ಮಾಹಿತಿಯ ಪ್ರಕಾರ, ಕಾಂಗ್ರೆಸ್ 58 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) 22 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ.
ಇದಕ್ಕೆ ವಿರುದ್ಧವಾಗಿ ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಸುಮಾರು 40 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆಯಲ್ಲಿದೆ. ಈ ಪ್ರವೃತ್ತಿಗಳು ಕೇರಳದಲ್ಲಿ ದಶಕದ ನಂತರ ಅಧಿಕಾರ ಬದಲಾವಣೆಯ ಸಾಧ್ಯತೆಯನ್ನು ಸೂಚಿಸುತ್ತಿವೆ.
UDF ಬಹುಮತದ ಗಡಿಯನ್ನು ದಾಟುತ್ತಿದ್ದಂತೆಯೇ ಹಿರಿಯ ಕಾಂಗ್ರೆಸ್ ನಾಯಕರುಗಳಾದ ರಮೇಶ್ ಚೆನ್ನಿತ್ತಲ, ಕೆ.ಸಿ.ವೇಣುಗೋಪಾಲ್ ಮತ್ತು ಶಶಿ ತರೂರ್ ಅವರು ತಿರುವನಂತಪುರಂನಲ್ಲಿರುವ ಪಕ್ಷದ ರಾಜ್ಯ ಕಚೇರಿಗೆ ಆಗಮಿಸಿದ ಪರಿಸ್ಥಿತಿ ಹಾಗೂ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ.
126 ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದೆ. ಮಧ್ಯಾಹ್ನ 12.20ರ ಹೊತ್ತಿಗೆ ಬಿಜೆಪಿ 80 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 23 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಎಐಯುಡಿಎಫ್ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಕರ್ನಾಟಕದ ಬಾಗಲಕೋಟೆ ಮತ್ತು ದಾವಣೆಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಕೂಡ ಕುತೂಹಲ ಕೆರಳಿಸಿದ್ದು ಉಭಯ ಕ್ಷೇತ್ರಗಳಲ್ಲಿ ಇದೀಗ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.
ದಾವಣಗೆರೆಯ 21 ಸುತ್ತಿನ ಮತಎಣಿಕೆಯ ಪೈಕಿ 9 ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶ್ಯಾಮನೂರು 3986 ಮತಗಳ ಮುನ್ನಡೆಯಲ್ಲಿದ್ದಾರೆ. ಸಮರ್ಥ್ ಒಟ್ಟು 30530ಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ 26544 ಮತಗಳನ್ನು ಪಡೆದಿದ್ದಾರೆ.
ಉಮೇಶ್ ಮೇಟಿ ಮುನ್ನಡೆ
ಇತ್ತ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಮುನ್ನಡೆ ಸಾಧಿಸಿದ್ದು, ಬರೊಬ್ಬರಿ 10764 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಒಟ್ಟು 23 ಸುತ್ತುಗಳ ಮತ ಎಣಿಕೆಯ ಪೈಕಿ 16 ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಈ ಪೈಕಿ ಉಮೇಶ್ ಮೇಟಿ ಒಟ್ಟು 64747 ಮತಗಳನ್ನು ಪಡೆದಿದ್ದು, ತಮ್ಮ ಪ್ರತಿ ಸ್ಪರ್ಧಿ ಬಿಜೆಪಿಯ ವೀರಣ್ಣ ಚರಂತಿಮಠ (53983 ಮತಗಳು) ಅವರನ್ನು ಹಿಂದಿಕ್ಕಿದ್ದಾರೆ.
140 ಕ್ಷೇತ್ರಗಳಿರುವ ಕೇರಳದಲ್ಲಿ ಬಹುಮತಕ್ಕೆ 71 ಸ್ಥಾನಗಳ ಅಗತ್ಯವಿದೆ. ಮಧ್ಯಾಹ್ನ 12.23ರ ಹೊತ್ತಿಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ 836 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಆಡಳಿತಾರೂಢ ಎಲ್ಡಿಎಫ್ 67 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
30 ಕ್ಷೇತ್ರಗಳಿರುವ ಪುದುಚೇರಿಯಲ್ಲಿ ಬಹುಮತಕ್ಕೆ 16 ಸ್ಥಾನಗಳ ಅಗತ್ಯವಿದೆ. ಮಧ್ಯಾಹ್ನ 12.28 ರ ಹೊತ್ತಿಗೆ AINRC 8 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 2 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 1 ಹಾಗೂ ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣಾ ಮತ ಎಣಿಕೆಯಲ್ಲಿ ಅಚ್ಚರಿ ಫಲಿತಾಂಶವೆಂಬಂತೆ ಸಿಎಂ ಸ್ಟಾಲಿನ್ ಸೇರಿದಂತೆ 15 ಡಿಎಂಕೆ ಸಚಿವರು ಹಿನ್ನಡೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಮೂರನೇ ಸುತ್ತಿನ ಎಣಿಕೆಯ ನಂತರವೂ ತಮ್ಮ ಕ್ಷೇತ್ರಗಳಲ್ಲಿ ಹಿಂದುಳಿದಿರುವ 14 ಡಿಎಂಕೆ ಸಚಿವರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೇರಿದ್ದಾರೆ.
ಚುನಾವಣಾ ಆಯೋಗದ (ಇಸಿ) ಪ್ರಕಾರ ಕೊಳತ್ತೂರಿನಲ್ಲಿ ಸ್ಪರ್ಧಿಸುತ್ತಿರುವ ಸ್ಟಾಲಿನ್ 2,277 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಅದೇ ರೀತಿ, ಚೆಪಾಕ್-ತಿರುವಲ್ಲಿಕೇಣಿಯಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿಂಗ್ 1,244 ಮತಗಳಿಂದ ಹಿನ್ನಡೆಯಲ್ಲಿದ್ದಾರೆ ಎನ್ನಲಾಗಿದೆ.
ಉಳಿದಂತೆ ಕಟ್ಪಾಡಿ ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ಸಚಿವ ದುರೈ ಮುರುಗನ್ ಕೂಡ 2,293 ಮತಗಳಿಂದ ಹಿನ್ನಡೆಯಲ್ಲಿದ್ದರೆ, ಪಿ.ಗೀತಾ ಜೀವನ್ (ತೂತುಕ್ಕುಡಿ), ಮಾ.ಸುಬ್ರಮಣಿಯನ್ (ಸೈದಾಪೇಟ್), ಇ.ವಿ.ವೇಲು (ತಿರುವನಾಮಲೈ), ಪಿ.ಕೆ.ಸೇಕರ್ಬಾಬು (ಹಾರ್ಬರ್), ಟಿ.ಎಂ.ಅನ್ಬರಸನ್ (ಆಲಂದೂರು), ಕೆ.ಎನ್.ನೆಹರು (ತಿರುಚಿ ಪಶ್ಚಿಮ), ಗೋವಿ ಚೆಝಿಯಾನ್ (ತಿರುವಿಡೈಮರುದೂರ್), ರಾಜಪುರಂ (ಎ.ಟಿ.ಆರ್.), ನಜರ್ಪುರಂ (ಎ.ಟಿ.ಆರ್.), ನಜರ್ಪುರಂ (ಎಟಿಆರ್), ನಜರ್ಪುರಂ (ಎಟಿಆರ್), ಇತರ ಸಚಿವರು (ಮನರಗುಡಿ), ಕೆಕೆಎಸ್ಎಸ್ಆರ್ ರಾಮಚಂದ್ರನ್ ಮತ್ತು ತ್ರಿಚುಲಿಯಲ್ಲಿ ತಂಗಂ ತೇನರಸು ಹಿನ್ನಡೆಯಲ್ಲಿದ್ದಾರೆ.
ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಸಿಪಿಐ(ಎಂ) ನಾಯಕ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಧರ್ಮಡಂ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಏಳನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ ಅವರು ಸುಮಾರು 3,659 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಈ ಕ್ಷೇತ್ರದಲ್ಲಿ ಆರಂಭಿಕ ಸುತ್ತುಗಳಲ್ಲಿ ಹಿನ್ನಡೆಯಲ್ಲಿದ್ದ ಅವರು, ನಂತರದ ಸುತ್ತುಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಪೈಪೋಟಿಯನ್ನು ತೀವ್ರಗೊಳಿಸಿದ್ದಾರೆ.
ಮುಂದಿನ ಸುತ್ತಿನ ಮತ ಎಣಿಕೆಯಲ್ಲಿ ಅಂತರ ಇನ್ನಷ್ಟು ಬದಲಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅಸ್ಸಾಂ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಪ್ರದ್ಯುತ್ ಬೋರ್ಡೊಲೊಯ್ ದಿಸ್ಪುರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಆರು ಸುತ್ತಿನ ಮತ ಎಣಿಕೆಯಲ್ಲಿ ಬೊರ್ಡೊಲೊಯ್ ಕಾಂಗ್ರೆಸ್ನ ಮೀರಾ ಬೋರ್ತಕುರ್ ಗೋಸ್ವಾಮಿಗಿಂತ 26,836 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ಪುದುಚೆರಿ,ತಮಿಳುನಾಡು ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಜೊತೆಗೆ ರಾಜ್ಯದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆಯೂ ಪ್ರಗತಿಯಲ್ಲಿದ್ದು, ಇತ್ತೀಚಿನ ವರದಿಗಳ ಪ್ರಕಾರ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ರಾಜಧಾನಿ ತಿರುವಂತಪುರದಲ್ಲಿ ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ (LDF) 14 ಕ್ಷೇತ್ರಗಳಲ್ಲಿ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ನೇತೃತ್ವದ UDF 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
2021ರಲ್ಲಿ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗಿದ್ದ UDF ಈ ಬಾರಿ ರಾಜಧಾನಿಯಲ್ಲಿ ಸ್ವಲ್ಪ ಸುಧಾರಣೆ ಕಂಡು ನಾಲ್ಕು ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಮತ್ತೊಂದೆಡೆ LDF ತನ್ನ ಬಲವನ್ನು ಉಳಿಸಿಕೊಂಡು ಒಂಬತ್ತು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ನೇಮಮ್ ಕ್ಷೇತ್ರದಲ್ಲಿ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಸಿಪಿಐ(ಎಂ) ಹಿರಿಯ ನಾಯಕ ವಿ.ಶಿವನ್ ಕುಟ್ಟಿ ವಿರುದ್ಧ ಆರು ಸುತ್ತಿನ ಮತ ಎಣಿಕೆಯ ನಂತರ 4234 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಅಟ್ಟಿಂಗಲ್ ಕ್ಷೇತ್ರದಲ್ಲಿ ಸಿಪಿಐ(ಎಂ) ಅಭ್ಯರ್ಥಿ ಒ.ಎಸ್.ಅಂಬಿಕಾ ಅವರು 8549 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪಿ. ಸುಧೀರ್ ಎರಡನೇ ಸ್ಥಾನದಲ್ಲಿದ್ದಾರೆ.
ವರ್ಕಲಾ ಕ್ಷೇತ್ರದಲ್ಲಿ ಸಿಪಿಐ(ಎಂ) ಅಭ್ಯರ್ಥಿ ವಿ. ಜಾಯ್ ಅವರು ಕಾಂಗ್ರೆಸ್ ಅಭ್ಯರ್ಥಿ ವರ್ಕಳ ಕಹಾರ್ ವಿರುದ್ಧ 1648 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ವಟ್ಟಿಯೂರ್ಕಾವು ಕ್ಷೇತ್ರದಲ್ಲಿ ಎಂಟನೇ ಸುತ್ತಿನ ನಂತರ ಸಿಪಿಐ(ಎಂ) ಅಭ್ಯರ್ಥಿ ವಿ.ಕೆ.ಪ್ರಶಾಂತ್ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ವಿರುದ್ಧ ಕೇವಲ 34 ಮತಗಳ ಅಲ್ಪ ಮುನ್ನಡೆ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಪಿ. ಶ್ರೀಲೇಖಾ ಮೂರನೇ ಸ್ಥಾನದಲ್ಲಿದ್ದಾರೆ.
ಪುದುಚೇರಿಯಲ್ಲಿ ಮುಖ್ಯಮಂತ್ರಿ ಎನ್.ರಂಗಸಾಮಿ ನೇತೃತ್ವದ All India NR Congress ಪಕ್ಷ ಮುನ್ನಡೆ ಸಾಧಿಸಿದೆ. AINRC ಕನಿಷ್ಠ 7 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ರಂಗಸಾಮಿ ತಟ್ಟಾಂಚಾವಡಿ ಕ್ಷೇತ್ರದಲ್ಲಿ 3,591 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
AINRC ಅಭ್ಯರ್ಥಿಗಳಾದ ಆರ್ ರವಿಕುಮಾರ್, ವೈಯಾಪುರಿ ಮಣಿಕಂಠನ್, ಸಿ ಅಯ್ಯಪ್ಪನ್, ಇ ಮೋಹನದಾಸ್, ಪಿ ರಾಜವೇಲು ಮತ್ತು ಪಿ ಆರ್ ಎನ್ ತಿರುಮುರುಗನ್ ವಿಲಿಯನೂರು, ಮುಥಿಯಾಲ್ಪೇಟೆ, ಅರಿಯಾಂಕುಪ್ಪಂ, ಎನ್ಬಳಂ, ನೆಟ್ಟಪಕ್ಕಂ ಮತ್ತು ಕಾರೈಕಲ್ ಉತ್ತರ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಇದೇ ವೇಳೆ, ಬಿಜೆಪಿ ಅಭ್ಯರ್ಥಿಗಳಾದ ನಮಸ್ಸಿವಾಯಂ ಮತ್ತು ಟಿ ಕೆ ಎಸ್ಎಂ ಮೀನಾಚ್ಚಿಸುಂದರಂ ಕ್ರಮವಾಗಿ ಮಾನ್ನಾಡಿಪೇಟೆ ಮತ್ತು ನೆರವಿ ಟಿ.ಆರ್. ಪಟ್ಟಿಣಂ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಪುದುಚೇರಿ ಮುಖ್ಯಮಂತ್ರಿ ಎನ್.ರಂಗಸಾಮಿ ತಟ್ಟಾಂಚಾವಡಿ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ನಯಮ್ ಮಕ್ಕಳ್ ಕಚ್ಚಿ (TVK ಮಿತ್ರ ಪಕ್ಷ) ಅಭ್ಯರ್ಥಿ ಇ.ವಿನಾಯಗಂ ಅವರನ್ನು 4,441 ಮತಗಳ ಅಂತರದಿಂದ ಸೋಲಿಸಿದ್ದಾರೆ.
ರಂಗಸಾಮಿ ಒಟ್ಟು 10,024 ಮತಗಳನ್ನು ಪಡೆದುಕೊಂಡರೆ, ವಿನಾಯಗಂ 5,583 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಫಲಿತಾಂಶ ತಿಳಿಸಿದೆ. ಈ ಜಯದೊಂದಿಗೆ ರಂಗಸಾಮಿ ತಮ್ಮ ಕ್ಷೇತ್ರದಲ್ಲಿ ಪ್ರಾಬಲ್ಯವನ್ನು ಮತ್ತೊಮ್ಮೆ ಸ್ಥಾಪಿಸಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳಲ್ಲಿ ಡಿಎಂಕೆ (DMK) ಹಿನ್ನಡೆ ಅನುಭವಿಸುತ್ತಿದ್ದಂತೆ, ಸನ್ ಟಿವಿ ನೆಟ್ವರ್ಕ್ ಲಿಮಿಟೆಡ್ (SUNTV) ಷೇರುಗಳು ಬರೊಬ್ಬರಿ ಶೇ. 9.5 ರಷ್ಟು ಭಾರಿ ಕುಸಿತ ಕಂಡಿವೆ. ಮೇ 4, 2026 ರಂದು ವಹಿವಾಟಿನ ಅವಧಿಯಲ್ಲಿ ಷೇರುಗಳ ಬೆಲೆ ₹547.55 ಕ್ಕೆ ಇಳಿಕೆಯಾಗಿದೆ.
ಹಿಂದಿನ ದಿನದ ಅಂತ್ಯದ ದರ ₹605.60 ಕ್ಕೆ ಹೋಲಿಸಿದರೆ, ಇಂದು ₹548.10 ರವರೆಗೆ ಕುಸಿದಿದ್ದು, ಒಂದೇ ದಿನ ಸನ್ ಟಿವಿ ಷೇರುಗಳ ಬೆಲೆ ಬರೊಬ್ಬರಿ 57.5 ರೂ ಕುಸಿದಿದೆ. ಸನ್ ಟಿವಿಯ ಪ್ರವರ್ತಕರಾದ ಮಾರನ್ ಕುಟುಂಬವು ಡಿಎಂಕೆ ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿರುವುದರಿಂದ, ಚುನಾವಣಾ ಫಲಿತಾಂಶಗಳು ನೇರವಾಗಿ ಸಂಸ್ಥೆಯ ಈ ಷೇರಿನ ಮೇಲೆ ಪರಿಣಾಮ ಬೀರುತ್ತವೆ ಎನ್ನಲಾಗಿದೆ.
ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ದ ಬೆನ್ನಲ್ಲೇ ರಾಜಕೀಯ ಹಿಂಸಾಚಾರ ಭುಗಿಲೆದ್ದಿದ್ದು, ಕೂಚ್ ಬೆಹಾರ್ನ ದಿನ್ಹಾಟಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ. ಹೀಗಾಗಿ ಕೇಂದ್ರ ಪಡೆಗಳ ಸಿಬ್ಬಂದಿ ಲಾಠಿ ಚಾರ್ಜ್ ನಡೆಸಿದರು.
ಜಲ್ಪೈಗುರಿಯ ಡಿಐಜಿ ಅಂಜಲಿ ಸಿಂಗ್ ಈ ಬಗ್ಗೆ ಮಾತನಾಡಿ, "ಕಾನೂನು ಮತ್ತು ಸುವ್ಯವಸ್ಥೆಯೊಂದಿಗೆ ಪರಿಸ್ಥಿತಿ ಶಾಂತಿಯುತವಾಗಿದೆ. ಯಾವುದೇ ಅಡ್ಡಿ ಅಥವಾ ಯಾವುದೇ ಅತಂಕದ ನಿರೀಕ್ಷೆಯಿಲ್ಲ. ಪರಿಸ್ಥಿತಿ ಶಾಂತಿಯುತವಾಗಿದೆ. ಯಾವುದೇ ಪರಿಸ್ಥಿತಿ ಉದ್ಭವಿಸಿದಲ್ಲಿ ನಾವು ಪಡೆಗಳನ್ನು ಸಿದ್ಧವಾಗಿಟ್ಟುಕೊಂಡಿದ್ದೇವೆ" ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಚಾಲ್ತಿಯಲ್ಲಿರುವಂತೆಯೇ ಹಾಲಿ ಟ್ರೆಂಡ್ ಅನ್ನು ಬಿಜೆಪಿ ಸಂಚು ಎಂದು ಕರೆದಿರುವ ಟಿಎಂಸಿ ಮುಖ್ಯಸ್ಥೆ ಹಾಗೂ ಸಿಎಂ ಮಮತಾ ಬ್ಯಾನರ್ಜಿ, ಫಲಿತಾಂಶ ತಮಗೆ ಅನುಕೂಲವಾಗಿಸಿಕೊ್ಳ್ಳಲು ಯೋಜನೆ ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರ ಧೈರ್ಯ ಕುಗ್ಗಿಸಲು, ಬಿಜೆಪಿ ಮೊದಲು ತಮಗೆ ಅನುಕೂಲಕರವಾಗಿರುವ ಕ್ಷೇತ್ರಗಳ ಫಲಿತಾಂಶಗಳನ್ನು ತೋರಿಸುತ್ತಿದೆ ಮತ್ತು ಟಿಎಂಸಿ ಮುನ್ನಡೆ ಸಾಧಿಸಿರುವ ಫಲಿತಾಂಶಗಳನ್ನು ತಡವಾಗಿ ತೋರಿಸುವ ಯೋಜನೆ ಹೊಂದಿದೆ. ಮೂರು ಅಥವಾ ನಾಲ್ಕು ಸುತ್ತುಗಳನ್ನು ಎಣಿಸಲಾಗಿದ್ದರೂ, ಒಟ್ಟು 14-18 ಸುತ್ತುಗಳಿವೆ. ಆಗ ನೀವು ಗೆಲ್ಲುತ್ತೀರಿ. ಕಾದು ನೋಡಿ. ನಾವು ನಿಮ್ಮೊಂದಿಗಿದ್ದೇವೆ. ಭಯಪಡಬೇಡಿ. ನಾವು ಹುಲಿ ಮರಿಗಳಂತೆ ಹೋರಾಡುತ್ತೇವೆ" ಎಂದು ಮಮತಾ ಹೇಳಿದ್ದಾರೆ.
ಹಾಲಿ ಚುನಾವಣಾ ಫಲಿತಾಂಶವು ವಿರೋಧ ಪಕ್ಷದ ಬಣದಲ್ಲಿನ ಆಳವಾದ ಬಿರುಕುಗಳನ್ನು ಬಹಿರಂಗಪಡಿಸಿದ್ದು, INDI ಕೂಟಕ್ಕೆ ಭವಿಷ್ಯವೇ ಇಲ್ಲ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ್ಲಾ, 'ಈ ಚುನಾವಣೆಯ ದೊಡ್ಡ ತೀರ್ಮಾನವೆಂದರೆ 'INDI' ಮೈತ್ರಿಕೂಟ ಸಂಪೂರ್ಣವಾಗಿ ಮುರಿದು ಕಣ್ಮರೆಯಾಗಿದೆ. ರಾಹುಲ್ ಗಾಂಧಿ ಮೈತ್ರಿಕೂಟವನ್ನು ಮುನ್ನಡೆಸುವಲ್ಲಿ ವಿಫಲರಾಗಿದ್ದಾರೆ. ರಾಹುಲ್ ಗಾಂಧಿ 'INDI' ಮೈತ್ರಿಕೂಟವನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂಬುದು ಇಡೀ ಚುನಾವಣೆಯಲ್ಲಿ ತೋರಿಸಲಾಗಿದೆ" ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂತೆಯೇ ಮತ ಎಣಿಕೆ ದಿನದಂದು ರಾಹುಲ್ ಗಾಂಧಿ ಇಲ್ಲದಿರುವುದಕ್ಕೆ ಅವರು ಟೀಕಿಸಿದರು.
"ಇಂದು ಚುನಾವಣಾ ಫಲಿತಾಂಶಗಳು ಬರುತ್ತಿವೆ ಮತ್ತು ರಾಹುಲ್ ಗಾಂಧಿ ಮತ್ತೆ ರಜಾದಿನಗಳನ್ನು ಆಚರಿಸಲು ವಿದೇಶದಲ್ಲಿದ್ದಾರೆ. ಮೈತ್ರಿಕೂಟದ ಪಾಲುದಾರರ ನಡುವೆ ಯಾವುದೇ ಸಮನ್ವಯವಿರಲಿಲ್ಲ. ವಿರೋಧ ಪಕ್ಷದ ಬಣದಲ್ಲಿ ಒಗ್ಗಟ್ಟು ಮತ್ತು ನಿರ್ದೇಶನದ ಕೊರತೆಯಿದೆ ಎಂದು ಹೇಳಿದರು.
ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಶನ ಮುಗಿಸಿದ ನಂತರ, ಅವರು ಚೆನ್ನೈಗೆ ಹಿಂತಿರುಗಿ ನೇರವಾಗಿ ನಟ-ರಾಜಕಾರಣಿ ವಿಜಯ್ ಅವರ ನಿವಾಸಕ್ಕೆ ತೆರಳಿದ್ದಾರೆ.
ರಾಜಕೀಯ ಪಕ್ಷ ಸ್ಥಾಪಿಸಿದ 6 ತಿಂಗಳಲ್ಲಿ ಚೊಚ್ಚಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವಿಜಯ್ ಅವರ ಟಿವಿಕೆ ಪಕ್ಷ ಇತಿಹಾಸ ಸೃಷ್ಟಿಸಿ ಸರ್ಕಾರ ರಚಿಸಲು ಸಜ್ಜಾಗಿರುವ ಸಮಯದಲ್ಲಿ ಈ ಭೇಟಿ ಬಂದಿದೆ.
ತಿರುಪತಿ ಪ್ರಸಾದವನ್ನು ಹಸ್ತಾಂತರಿಸಲು ಮತ್ತು ಅಭಿನಂದನೆಗಳನ್ನು ತಿಳಿಸಲು ತ್ರಿಶಾ ವಿಜಯ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ.
ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಕೊನೆಗೂ ಪ್ರಯಾಸದ ಗೆಲುವು ದಾಖಲಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ 4967 ಮತಗಳ ಅಂತರದಿಂದ ಗೆದ್ದಿದ್ದು, 20ನೇ ಸುತ್ತಿನ ಎಣಿಕೆ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
ಏಪ್ರಿಲ್ 9 ರಂದು ಉಪಚುನಾವಣೆ ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಎಚ್ ವೈ ಮೇಟಿ ಅವರ ಪುತ್ರ ಉಮೇಶ್ ಮೇಟಿ 98,919 ಮತಗಳನ್ನು ಪಡೆದರೆ, ಮಾಜಿ ಶಾಸಕ ಮತ್ತು 2023 ರಲ್ಲಿ ಪರಾಜಿತ ಅಭ್ಯರ್ಥಿಯಾಗಿದ್ದ ಬಿಜೆಪಿಯ ವೀರಭದ್ರಯ್ಯ ಚರಂತಿಮಠ 76,587 ಮತಗಳನ್ನು ಪಡೆದರು.
2023 ರ ವಿಧಾನಸಭಾ ಚುನಾವಣೆಯಲ್ಲಿ, ಬಾಗಲಕೋಟೆಯಲ್ಲಿ ಎಚ್ ವೈ ಮೇಟಿ ಬಿಜೆಪಿಯ ಚರಂತಿಮಠ ಅವರನ್ನು 5,878 ಮತಗಳ ಅಂತರದಿಂದ ಸೋಲಿಸಿದ್ದರು.
ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.
ದಳಪತಿ ವಿಜಯ್ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಒಂದು ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಅವರ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ವಿಜಯ್ ಅವರ ಆಪ್ತ ಗೆಳತಿ, ನಟಿ ತ್ರಿಶಾ ಕೃಷ್ಣನ್ ಅವರು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೆ ನಟಿ ಉಪ ಚುನಾವಣೆಯಲ್ಲಿ ಗೆದ್ದರೆ, ಅವರು ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ತಮಿಳುನಾಡು ರಾಜ್ಯದಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಅಧಿಕಾರಕ್ಕೇರುವುದು ನಿಶ್ಚಿತವಾಗಿದ್ದು, ಆಡಳಿತಾರೂಢ ಡಿಎಂಕೆಗೆ ಭಾರೀ ಹಿನ್ನಡೆ ಉಂಟಾಗಿದೆ.
ಹಾಲಿ ಸಿಎಂ ಡಿಎಂಕೆ ನಾಯಕ ಎಂಕೆ ಸ್ಟ್ಯಾಲಿನ್ ತಮ್ಮ ಭದ್ರಕೋಟೆ ಕೊಳತ್ತೂರಿನಲ್ಲಿ ಸ್ಪರ್ಧಿಸಿರುವ ಎಂಕೆ ಸ್ಟ್ಯಾಲಿನ್, ಟಿವಿಕೆ ವಿಎಸ್ ಬಾಬು ವಿರುದ್ಧ ಹೀನಾಯವಾಗಿ ಸೋತಿದ್ದಾರೆ. ಇದಷ್ಟೇ ಅಲ್ಲದೇ ಸಿಎಂ ಎಂಕೆ ಸ್ಟ್ಯಾಲಿನ್ ಸೇರಿದಂತೆ 14 ಡಿಎಂಕೆ ಸಚಿವರು ತಾವು ಸ್ಪರ್ಧಿಸಿದ್ದ ಕ್ಷೇತ್ರಗಳಲ್ಲಿ ತೀವ್ರ ಹಿನ್ನಡೆ ಎದುರಿಸಿದ್ದಾರೆ.
ಸಿಎಂ ಎಂಕೆ ಸ್ಟ್ಯಾಲಿನ್ ವಿರುದ್ಧ ವಿಎಸ್ ಬಾಬು 8 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿಯನ್ನು ಸೋಲಿಸಿದ ವಿಎಸ್ ಬಾಬು ಡಿಎಂಕೆ ಮಾಜಿ ನಾಯಕನಾಗಿದ್ದು, ಇತ್ತೀಚೆಗಷ್ಟೇ ಟಿವಿಕೆ ಸೇರ್ಪಡೆಯಾಗಿದ್ದರು.
ಪಶ್ಚಿಮ ಬಂಗಾಳ ವಿಧಾನಸಭೆಯ ಫಲಿತಾಂಶ ಪ್ರಕಟವಾಗಿದ್ದು, ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಭಾರತೀಯ ಜನತಾ ಪಕ್ಷ ಮೊತ್ತ ಮೊದಲ ಬಾರಿಗೆ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಸಿದ್ಧತೆ ನಡೆಸಿದೆ. ಇದರೊಂದಿಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್ಡಿಎ) ಆಡಳಿತ ನಡೆಸುವ ರಾಜ್ಯಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಏತನ್ಮಧ್ಯೆ, ಕೇಂದ್ರದಲ್ಲಿ ಪ್ರಮುಖ ವಿರೋಧ ಪಕ್ಷವಾದ ಇಂಡಿಯಾ ಬಣ, ತಮಿಳುನಾಡನ್ನು ಕಳೆದುಕೊಂಡಿದೆ. ಆದರೆ ಕೇರಳವನ್ನು ಗೆದ್ದ ನಂತರ ದೇಶಾದ್ಯಂತ ಆರು ರಾಜ್ಯಗಳಲ್ಲಿ ತನ್ನ ನಾಯಕತ್ವವನ್ನು ಉಳಿಸಿಕೊಂಡಿದೆ.
ಪಶ್ಚಿಮ ಬಂಗಾಳ ಗೆಲುವಿನ ನಂತರ ಬಿಜೆಪಿ 15 ರಾಜ್ಯಗಳಲ್ಲಿ ಸ್ವತಂತ್ರವಾಗಿ ಆಡಳಿತ ನಡೆಸಲಿದ್ದು, ಬಿಹಾರ(ಜೆಡಿ (ಯು) ಜೊತೆ), ಆಂಧ್ರಪ್ರದೇಶ (ಟಿಡಿಪಿ ಜೊತೆ), ನಾಗಾಲ್ಯಾಂಡ್ (ನಾಗಾ ಪೀಪಲ್ಸ್ ಫ್ರಂಟ್ ಜೊತೆ), ಮೇಘಾಲಯ (ನ್ಯಾಷನಲ್ ಪೀಪಲ್ಸ್ ಪಾರ್ಟಿ ಜೊತೆ) ಮೈತ್ರಿಕೂಟದಿಂದಾಗಿ ಮೈತ್ರಿಕೂಟ ಆಡಳಿತವಿರುವ ರಾಜ್ಯಗಳ ಸಂಖ್ಯೆ 21 ಕ್ಕೆ ಏರಿದೆ.
ಪ್ರಶಾಂತ್ ಕಿಶೋರ್ ಅವರ ಕಾರ್ಯತಂತ್ರ ಮತ್ತು ದಳಪತಿ ವಿಜಯ್ ಅವರ ನಾಯಕತ್ವದ ಶೈಲಿಗೆ ಸಂಬಂಧಿಸಿದಂತೆ ನೀವು ಹೇಳಿದ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿವೆ.
ಏಪ್ರಿಲ್ 29 ರಂದು ಟಿವಿಕೆ ತಮಿಳುನಾಡಿನಲ್ಲಿ 98 ರಿಂದ 120 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆದಾರರೊಬ್ಬರು ಹೇಳಿದಾಗ, ರಾಜಕೀಯ ಅನುಭವವಿಲ್ಲದ ನಟ ಮೊದಲ ಬಾರಿಗೆ ಸ್ಪರ್ಧಿಸುತ್ತಿರುವ ಚುನಾವಣೆಯಲ್ಲಿ ಅಂತಹ ಸಾಧನೆಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಕ್ಕಾಗಿ ಅನೇಕರು ಅದನ್ನು ಅಪಹಾಸ್ಯ ಮಾಡಿದರು.
ಹಲವು ಎಜೆನ್ಸಿಗಳು ನಡೆಸಿದ ಎಕ್ಸಿಟ್ ಪೋಲ್ ಸಮೀಕ್ಷೆಗಳು ವಿಜಯ್ ಭವಿಷ್ಯದ ಬಗ್ಗೆ ಮಾತನಾಡಿದ್ದವು, ಆದರೆ ಚುನಾವಣೆಗಳು ನಡೆಯುವ ಒಂದು ವರ್ಷದ ಮೊದಲು ಟಿವಿಕೆ ಯಶಸ್ಸಿನ ಬಗ್ಗೆ ಮಾಡಿದ ಮತ್ತೊಂದು ಭವಿಷ್ಯವಾಣಿಯು ಈಗ ವೈರಲ್ ಆಗುತ್ತಿದೆ.
ಟಿವಿಕೆ ರಚನೆಯಾದ ಕೇವಲ ಒಂದು ವರ್ಷದ ನಂತರ ಕಳೆದ ವರ್ಷ ಮಾರ್ಚ್ನಲ್ಲಿ ತಂತಿ ಟಿವಿಗೆ ನೀಡಿದ ಸಂದರ್ಶನದಲ್ಲಿ, ರಾಜಕೀಯ ತಂತ್ರಜ್ಞ-ರಾಜಕಾರಣಿ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷದ ಮತ್ತು ಅದರ ಸಂಸ್ಥಾಪಕ ತಮಿಳು ಸಿನಿಮಾ ಸೂಪರ್ಸ್ಟಾರ್ ವಿಜಯ್ ಅವರ ಭವಿಷ್ಯದ ಬಗ್ಗೆ ಕೇಳಲಾಯಿತು.
ತಮಿಳುನಾಡಿನಲ್ಲಿ ವಿಜಯ್ ಏಕಾಂಗಿಯಾಗಿ ಕಣಕ್ಕಿಳಿದರೆ ಅವರಿಗೆ ಗೆಲ್ಲುವ ಅತ್ಯಂತ ಉತ್ತಮ ಅವಕಾಶವಿದೆ' ಎಂದಿದ್ದರು. ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, ಕಿಶೋರ್ ಅವರು "ಖಂಡಿತವಾಗಿಯೂ ಇಲ್ಲ" ಎಂದು ಉತ್ತರಿಸಿದ್ದರು.
ಏಕಾಂಗಿಯಾಗಿ ಸ್ಪರ್ಧಿಸುವ ಬಗ್ಗೆಯೇ ಅವರು ಯೋಚಿಸಬೇಕು ಮತ್ತು ಅವರ ಆ ನಿರ್ಧಾರ ಬದಲಾಗುತ್ತದೆ ಎಂದು ನಾನು ಭಾವಿಸುವುದಿಲ್ಲ. ಅವರು ಒಬ್ಬಂಟಿಯಾಗಿ ಸ್ಪರ್ಧಿಸಿದರೆ ಜಯದ ಅವಕಾಶಗಳು ಹೆಚ್ಚಿವೆ" ಎಂದು ಅವರು ಹೇಳಿದ್ದರು. "ಅತ್ಯುತ್ತಮ ಅವಕಾಶ ಎಂದರೆ ಏನು?" ಎಂದು ಪ್ರಶ್ನಿಸಿದಾಗ, "ತಮಿಳುನಾಡನ್ನು ಗೆಲ್ಲುವ ಉತ್ತಮ ಅವಕಾಶ" ಎಂದು ಕಿಶೋರ್ ನೇರವಾಗಿ ಉತ್ತರಿಸಿದ್ದರು.
ನಟ-ರಾಜಕಾರಣಿ ವಿಜಯ್ ಅವರ TVK ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಾಗ ಜನರು ತಮ್ಮನ್ನು ನೋಡಿ 'ನಗುತ್ತಿದ್ದರು' ಎಂದು ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್ ಗುಪ್ತಾ ಹೇಳಿದ್ದಾರೆ. ಎಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ಗಳಲ್ಲಿ ಟಿವಿಕೆ ಗೆಲುವು ಸಾಧಿಸುತ್ತದೆ ಎಂದು ಊಹಿಸಿದ್ದ ಏಕೈಕ ಸಮೀಕ್ಷೆ ಸಂಸ್ಥೆಯಾಗಿದ್ದು, 234 ಸದಸ್ಯರ ವಿಧಾನಸಭೆಯಲ್ಲಿ ಪಕ್ಷ ಸುಮಾರು 98 ರಿಂದ 120 ಸ್ಥಾನಗಳು ಸಿಗುತ್ತವೆ ಎಂದು ಭವಿಷ್ಯ ನುಡಿದಿತ್ತು.
ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ ಪುತ್ರನಿಗೆ ಅದೃಷ್ಟ ಖುಲಾಯಿಸಿದೆ.
ನಟ-ರಾಜಕಾರಣಿ ವಿಜಯ್ ಅವರು ತಮ್ಮ ಕಾರು ಚಾಲಕನ ಪುತ್ರ ಆರ್ ಶಬರಿನಾಥನ್ ಅವರಿಗೆ ಟಿವಿಕೆ ಟಿಕೆಟ್ ನೀಡಿ, ವಿರುಗಂಬಕ್ಕಂ ಕ್ಷೇತ್ರದಿಂದ ಕಣಕ್ಕೀಳಿಸಿ ಗೆಲ್ಲಿಸಿಕೊಂಡು ಬಂದಿದ್ದಾರೆ.
ಶಬರಿನಾಥನ್ ಅವರು ಗೆಲುವು ಸಾಧಿಸುತ್ತಿದ್ದಂತೆ, ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಕಾಣಿಸಿಕೊಂಡ ನಂತರ ವೇದಿಕೆಯಲ್ಲೇ ವಿಜಯ್ ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಭಾವನಾತ್ಮಕ ಮತ್ತು ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ.
ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿಯುತ್ತಿದ್ದಂತೆ ಹೊರಬಂದ ಟ್ರೆಂಡಿಂಗ್ ಶಾಕಿಂಗ್ ಫಲಿತಾಂಶ ತೋರಿಸಿದೆ.
ಚುನಾವಣಾ ಆಯೋಗದ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (SIR) ನೆರಳಿನಲ್ಲಿ ವಿಧಾನಸಭಾ ಚುನಾವಣೆ ನಡೆದ ಪಶ್ಚಿಮ ಬಂಗಾಳದಲ್ಲಿ, ಬಿಜೆಪಿ ಸುಮಾರು 200 ಸ್ಥಾನಗಳೊಂದಿಗೆ ಐತಿಹಾಸಿಕ ಗೆಲುವು ಸಾಧಿಸಿದೆ. 2021 ರ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ 215 ಸ್ಥಾನಗಳನ್ನು ಗೆದಿದ್ದ ಆಡಳಿತಾರೂಢ ಟಿಎಂಸಿ ಕೇವಲ 88 ಸ್ಥಾನಗಳಿಗೆ ಕುಸಿದಿದೆ.
ತಮಿಳುನಾಡಿನಲ್ಲಿ, ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) 100 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಆಘಾತಕಾರಿ ಫಲಿತಾಂಶವನ್ನು ನೀಡಿದೆ.
ಅಸ್ಸಾಂನಲ್ಲಿ, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ ಆರು ಸ್ಥಾನಗಳನ್ನು ಗೆದ್ದು 94 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದೆ. ಬಿಜೆಪಿ ಐದು ಸ್ಥಾನಗಳಲ್ಲಿ ಗೆದ್ದಿದ್ದು, 76 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಕೇರಳದಲ್ಲಿ ಸತತ ಎರಡು ವರ್ಷಗಳ ಕಾಲ ಅಧಿಕಾರದಿಂದ ಹೊರಗುಳಿದಿದ್ದ UDF ಮತ್ತೆ ಕಂಬ್ಯಾಕ್ ಮಾಡಿದೆ. ಹಿಂದಿನ ವಿಧಾನಸಭಾ ಚುನಾವಣೆಗಳಲ್ಲಿ 41 ಸ್ಥಾನಗಳನ್ನು ಗೆದಿದ್ದ ಯುಡಿಎಫ್ ಈ ಬಾರಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿದೆ.
‘ಜನರ ತೀರ್ಪಿಗೆ ನಾನು ತಲೆಬಾಗುತ್ತೇನೆ’ ಎಂದು ಡಿಎಂಕೆ ಅಧ್ಯಕ್ಷ ಮತ್ತು ನಿರ್ಗಮಿತ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶಗಳು ಟಿವಿಕೆ ಪರವಾಗಿರುವ ಕುರಿತು ಹೇಳಿದ್ದಾರೆ.
‘ನಾವು ಉತ್ತಮ ಆಡಳಿತವನ್ನು ನೀಡಿದ್ದೇವೆ ಮತ್ತು ನಮ್ಮ ಸಾಧನೆಗಳನ್ನು ಒತ್ತಿ ಹೇಳುವ ಮೂಲಕ ಮತಗಳನ್ನು ಕೋರಿದ್ದೇವೆ’ ಎಂದು ಅವರು ಹೇಳುತ್ತಾರೆ.
‘ನಮ್ಮ ಕಲ್ಯಾಣ ಯೋಜನೆಗಳನ್ನು ಮುಂದುವರಿಸಲು ನಾವು ಮತಗಳನ್ನು ಕೋರಿದ್ದೇವೆ’ ಎಂದು ಡಿಎಂಕೆ ಸ್ಟಾಲಿನ್ ಹೇಳಿದರು.
ಮಮತಾ ಬ್ಯಾನರ್ಜಿ ತಮ್ಮ ಭಬಾನಿಪುರ ಭದ್ರಕೋಟೆಯನ್ನು ಸುವೇಂದು ಅಧಿಕಾರಿ ವಿರುದ್ಧ 15,114 ಮತಗಳ ಅಂತರದಿಂದ ಸೋತಿದ್ದಾರೆ.