ಸಾಹಿತ್ಯ ಸಮ್ಮೇಳನ 
ಹಿನ್ನೋಟ 2014

ಮಡಿಕೇರಿಯಲ್ಲಿ ಸಾಹಿತ್ಯ ಸಮ್ಮೇಳನ

80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಡಿಕೇರಿಯಲ್ಲಿ ನಡೆಯಿತು. ಜನವರಿ 7ರಂದು ಆರಂಭವಾದ ಸಮ್ಮೇಳನಕ್ಕೆ ಜನವರಿ 9ರಂದು ತೆರೆ ಎಳೆಯಲಾಗಿತ್ತು. ಅದ್ಧೂರಿಯಾಗಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಕವಿ ನಾ.ಡಿಸೋಜಾ ಅವರು ಅಧ್ಯಕ್ಷತೆ ವಹಿಸಿದ್ದರು. ಸತತ ಮೂರು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಹಿತ್ಯ ಸಮ್ಮೇಳನಗಳು, ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಕವಿ, ಸಾಮಾಜಿ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಯಿತು.

ಕನ್ನಡ ಭಾಷೆಯ ಉಳಿವಿಗಾಗಿ ತಜ್ಞರು, ಕವಿಗಳು ಮತ್ತು ಬುದ್ಧಿ ಜೀವಿಗಳ ವೈಚಾರಿಕ ವಿಶ್ಲೇಷಣೆಗಳು ಗಮನ ಸೆಳೆದವು. ಮುಖ್ಯವಾಗಿ ಈ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು.

1. ನಾಡ ವಿರೋಧಿಗಳಿಗಳಿಗೆ ಖಂಡನೆ
2.ಕನ್ನಡ ನಾಡ ಗೀತೆಯನ್ನು ಕಡ್ಡಾಯವಾಗಿ ಇಂಗ್ಲೀಷ್ ಮಾಧ್ಯಮದ ಶಾಲೆಗಳಲ್ಲಿಯೂ ಹಾಡಿಸಬೇಕು.
3.ಗಡಿನಾಡಿನಲ್ಲಿರುವ ಶಾಲೆಗಳನ್ನು ಮುಚ್ಚಬಾರದು. ಮತ್ತು ಈ ಶಾಲೆಗಳಲ್ಲಿರುವ ಮಕ್ಕಳಿಗೆ ಉಚಿತವಾಗಿ ಕನ್ನಡ ಪುಸ್ತಕಗಳನ್ನು ಹಂಚಿಕೆ ಮಾಡಬೇಕು.
4.ಪಶ್ಚಿಮ ಘಟ್ಟ ಅಭಿವೃದ್ಧಿ ಕುರಿತ ಕಸ್ತೂರಿರಂಗನ್ ವರದಿಯನ್ನು ತಿರಸ್ಕರಿಸಬೇಕು.
5.ರಾಜ್ಯ ಹೈಕೋರ್ಟ್ ಸೇರಿದಂತೆ ಎಲ್ಲ ಬಗೆಯ ನ್ಯಾಯಾಲಯಗಳಲ್ಲಿ ನಡಾವಳಿಗಳನ್ನು ಕನ್ನಡದಲ್ಲಿಯೇ ನೀಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

Hong Kong ಅಗ್ನಿ ಪ್ರಮಾದ: ಮೂವರ ಬಂಧನ; 55 ಮಂದಿಯ ಜೀವ ತೆಗೆಯಿತಾ ಸಿಗರೇಟ್ ಕಿಡಿ? ವೈರಲ್ ಆಗಿರುವ ವಿಡಿಯೋದಲ್ಲೇನಿದೆ?

ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ

LPG ಆಮದು: ಭಾರತ-ಅಮೆರಿಕ ಒಪ್ಪಂದ ತೈಲ ಸಂಸ್ಥೆಗಳಿಗೆ ದುಬಾರಿ; ಗ್ರಾಹಕರ ಮೇಲೆ ಪರಿಣಾಮ? ತಜ್ಞರು ಹೇಳಿದ್ದೇನು?

SCROLL FOR NEXT