ಮಂಗಳಯಾನ 
ಹಿನ್ನೋಟ 2014

ಮಂಗಳಯಾನ ಯಶಸ್ವಿ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಖ್ಯಾತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಮ್ಮಡಿಗೊಳಿಸಿದ್ದು, ಮಂಗಳಯಾನ ಯೋಜನೆ. 2013 ನವೆಂಬರ್ 5ರಂದು ಆಂಧ್ರಪ್ರದೇಶದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆಯಾದ ಮಾರ್ಸ್ ಆರ್ಬಿಟರ್ ಮಿಷನ್ (ಮಾಮ್) 2014 ಸೆಪ್ಟೆಂಬರ್ 24ರಂದು ಯಶಸ್ವಿಯಾಗಿ ಮಂಗಳ ಗ್ರಹದ ಕಕ್ಷೆಗೆ ಸೇರಿತು. ಆ ಮೂಲಕ ಇಡೀ ವಿಶ್ವದ ಯಾವುದೇ ದೇಶ ಮಾಡದ ಸಾಧನೆಯನ್ನು ಇಸ್ರೋ ಮಾಡಿ ತೋರಿಸಿತ್ತು. ಮೊದಲ ಯತ್ನದಲ್ಲೇ ಮಂಗಳಯಾನ ಯಶಸ್ವಿಗೊಳಿಸಿದ ಏಕೈಕ ರಾಷ್ಟ್ರವೆಂಬ ಖ್ಯಾತಿ ಭಾರತಕ್ಕೆ ಲಭಿಸಿತು.

ಅಮೆರಿಕ, ರಾಷ್ಯಾ, ಚೀನಾ, ಜಪಾನ್ ಮತ್ತು ಬ್ರಿಟನ್ ದೇಶಗಳು ಈ ಹಿಂದೆ ಮಂಗಳಯಾನ ಯೋಜನೆಯನ್ನು ಹಮ್ಮಿಕೊಂಡಿದ್ದವಾದರೂ ಈ ಎಲ್ಲ ದೇಶಗಳ ಮೊದಲ ಯತ್ನ ವಿಫಲವಾಗಿತ್ತು. ಹೀಗಾಗಿ ಇಡೀ ವಿಶ್ವದ ಗಮನ ಭಾರತದ ಮಂಗಳಯಾನ ಯೋಜನೆ ಮೇಲೆ ನೆಟ್ಟಿತ್ತು. ಅಮೆರಿಕದ ಮಂಗಳಯಾನ ಯೋಜನೆಗೆ ಹೋಲಿಸಿದರೆ ಮೂರು ಪಟ್ಟು ಕಡಿಮೆ ವೆಚ್ಚದಲ್ಲಿ ಇಸ್ರೋ ಮಂಗಳಯಾನ ಯೋಜನೆಯನ್ನು ರೂಪಿಸಿದ್ದು, ಕೇವಲ 450 ಕೋಟಿ ರುಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲಾಗಿತ್ತು. ವೆಚ್ಚದ ವಿಚಾರದಲ್ಲಿಯೂ ಭಾರತದ ಮಂಗಳಯಾನ ಯೋಜನೆ ವಿಶ್ವವೇ ನಿಬ್ಬೆರಗಗಾವಂತೆ ಮಾಡಿತ್ತು.

ಮಂಗಳಯಾನ ಉಪಗ್ರಹವನ್ನು ಯಶಸ್ವಿಯಾಗಿ ಕೆಂಪುಗ್ರಹದ ಕಕ್ಷೆಗೆ ಸೇರಿಸುವ ಮೂಲಕ ಭಾರತ ಈ ಸಾಧನೆಗೈದ ಏಷ್ಯಾದ ಮೊದಲ ಮತ್ತು ವಿಶ್ವದ ನಾಲ್ಕನೇ ರಾಷ್ಟ್ರ ಎಂಬ ಖ್ಯಾತಿಗೆ ಭಾಜನವಾಯಿತು. ಇದಿಷ್ಟೇ ಅಲ್ಲದೆ ಅಮೆರಿಕದ ಟೈಮ್ಸ್ ಮ್ಯಾಗಜಿನ್ ವಿಶ್ವದ 25 ಅತ್ಯುತ್ತಮ ಆವಿಷ್ಕಾರಗಳ ಪಟ್ಟಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಭಾರತದ ಮಂಗಳಯಾನ ಯೋಜನೆಗೆ ಮೊದಲ ಸ್ಥಾನ ನೀಡಲಾಗಿತ್ತು. ಅಲ್ಲದೇ ಮಂಗಳಯಾನ ಯೋಜನೆಯನ್ನು 'ಸೂಪರ್ ಸ್ಮಾರ್ಟ್ ಯೋಜನೆ' ಎಂದು ಶ್ಲಾಘಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT