ಮಂಗಳಯಾನ 
ಹಿನ್ನೋಟ 2014

ಮಂಗಳಯಾನ ಯಶಸ್ವಿ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಖ್ಯಾತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಮ್ಮಡಿಗೊಳಿಸಿದ್ದು, ಮಂಗಳಯಾನ ಯೋಜನೆ. 2013 ನವೆಂಬರ್ 5ರಂದು ಆಂಧ್ರಪ್ರದೇಶದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆಯಾದ ಮಾರ್ಸ್ ಆರ್ಬಿಟರ್ ಮಿಷನ್ (ಮಾಮ್) 2014 ಸೆಪ್ಟೆಂಬರ್ 24ರಂದು ಯಶಸ್ವಿಯಾಗಿ ಮಂಗಳ ಗ್ರಹದ ಕಕ್ಷೆಗೆ ಸೇರಿತು. ಆ ಮೂಲಕ ಇಡೀ ವಿಶ್ವದ ಯಾವುದೇ ದೇಶ ಮಾಡದ ಸಾಧನೆಯನ್ನು ಇಸ್ರೋ ಮಾಡಿ ತೋರಿಸಿತ್ತು. ಮೊದಲ ಯತ್ನದಲ್ಲೇ ಮಂಗಳಯಾನ ಯಶಸ್ವಿಗೊಳಿಸಿದ ಏಕೈಕ ರಾಷ್ಟ್ರವೆಂಬ ಖ್ಯಾತಿ ಭಾರತಕ್ಕೆ ಲಭಿಸಿತು.

ಅಮೆರಿಕ, ರಾಷ್ಯಾ, ಚೀನಾ, ಜಪಾನ್ ಮತ್ತು ಬ್ರಿಟನ್ ದೇಶಗಳು ಈ ಹಿಂದೆ ಮಂಗಳಯಾನ ಯೋಜನೆಯನ್ನು ಹಮ್ಮಿಕೊಂಡಿದ್ದವಾದರೂ ಈ ಎಲ್ಲ ದೇಶಗಳ ಮೊದಲ ಯತ್ನ ವಿಫಲವಾಗಿತ್ತು. ಹೀಗಾಗಿ ಇಡೀ ವಿಶ್ವದ ಗಮನ ಭಾರತದ ಮಂಗಳಯಾನ ಯೋಜನೆ ಮೇಲೆ ನೆಟ್ಟಿತ್ತು. ಅಮೆರಿಕದ ಮಂಗಳಯಾನ ಯೋಜನೆಗೆ ಹೋಲಿಸಿದರೆ ಮೂರು ಪಟ್ಟು ಕಡಿಮೆ ವೆಚ್ಚದಲ್ಲಿ ಇಸ್ರೋ ಮಂಗಳಯಾನ ಯೋಜನೆಯನ್ನು ರೂಪಿಸಿದ್ದು, ಕೇವಲ 450 ಕೋಟಿ ರುಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲಾಗಿತ್ತು. ವೆಚ್ಚದ ವಿಚಾರದಲ್ಲಿಯೂ ಭಾರತದ ಮಂಗಳಯಾನ ಯೋಜನೆ ವಿಶ್ವವೇ ನಿಬ್ಬೆರಗಗಾವಂತೆ ಮಾಡಿತ್ತು.

ಮಂಗಳಯಾನ ಉಪಗ್ರಹವನ್ನು ಯಶಸ್ವಿಯಾಗಿ ಕೆಂಪುಗ್ರಹದ ಕಕ್ಷೆಗೆ ಸೇರಿಸುವ ಮೂಲಕ ಭಾರತ ಈ ಸಾಧನೆಗೈದ ಏಷ್ಯಾದ ಮೊದಲ ಮತ್ತು ವಿಶ್ವದ ನಾಲ್ಕನೇ ರಾಷ್ಟ್ರ ಎಂಬ ಖ್ಯಾತಿಗೆ ಭಾಜನವಾಯಿತು. ಇದಿಷ್ಟೇ ಅಲ್ಲದೆ ಅಮೆರಿಕದ ಟೈಮ್ಸ್ ಮ್ಯಾಗಜಿನ್ ವಿಶ್ವದ 25 ಅತ್ಯುತ್ತಮ ಆವಿಷ್ಕಾರಗಳ ಪಟ್ಟಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಭಾರತದ ಮಂಗಳಯಾನ ಯೋಜನೆಗೆ ಮೊದಲ ಸ್ಥಾನ ನೀಡಲಾಗಿತ್ತು. ಅಲ್ಲದೇ ಮಂಗಳಯಾನ ಯೋಜನೆಯನ್ನು 'ಸೂಪರ್ ಸ್ಮಾರ್ಟ್ ಯೋಜನೆ' ಎಂದು ಶ್ಲಾಘಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT