ಕಬ್ಬನ್ ಪಾರ್ಕ್ ಗ್ಯಾಂಗ್ ರೇಪ್ ಪ್ರಕರಣ 
ಹಿನ್ನೋಟ 2015

ಪೊಲೀಸ್ ವ್ಯವಸ್ಥೆಯನ್ನೇ ಪ್ರಶ್ನಿಸಿದ ಕಬ್ಬನ್ ಪಾರ್ಕ್ ಗ್ಯಾಂಗ್ ರೇಪ್

ನವೆಂಬರ್ 11 ಬುಧವಾರ ರಾತ್ರಿ ಟೆನ್ನಿಲ್ ಕಲಿಕೆಗಾಗಿ ಬೆಂಗಳೂರಿಗೆ ಆಗಮಿಸಿದ್ದ ಮಹಿಳೆಯೊಬ್ಬಳನ್ನು ಕಬ್ಬನ್ ಪಾರ್ಕಿನ ಇಬ್ಬರು ಭದ್ರತಾ ಸಿಬ್ಬಂದಿಗಳೇ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತು...

ನವೆಂಬರ್ 11 ಬುಧವಾರ ರಾತ್ರಿ ಟೆನ್ನಿಲ್ ಕಲಿಕೆಗಾಗಿ ಬೆಂಗಳೂರಿಗೆ ಆಗಮಿಸಿದ್ದ ಮಹಿಳೆಯೊಬ್ಬಳನ್ನು ಕಬ್ಬನ್ ಪಾರ್ಕಿನ ಇಬ್ಬರು ಭದ್ರತಾ ಸಿಬ್ಬಂದಿಗಳೇ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತು.

ಮೂಲತಃ ತುಮಕೂರಿನವಳಾದ ಮಹಿಳೆ (30) ಬೆಂಗಳೂರಿನ ಟೆನ್ನಿಸ್ ಕ್ಲಬ್ ಗೆ ಸದಸ್ಯತ್ವ ಸ್ಥಾನ ಪಡೆಯಲು ಆಗಮಿಸಿದ್ದಳು. ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಇರುವ ಟೆನ್ನಿಸ್ ಅಕಾಡೆಮಿಗೆ ತೆರಳಿದ್ದ ಮಹಿಳೆ ಅಲ್ಲಿನ ಅಧಿಕಾರಿಗಳೊಂದಿಗೆ ತನ್ನ ಟೆನ್ನಿಸ್ ಆಡುವ ಅಭಿಲಾಶೆಯನ್ನು ವ್ಯಕ್ತಪಡಿಸಿದ್ದಳು. ಅಧಿಕಾರಿಗಳೊಂದಿಗೆ ಮಾತುಕತೆ ಮುಗಿಸಿದ್ದ ಮಹಿಳೆ ಕಬ್ಬನ್ ಪಾರ್ಕ್ ಬಳಿ  ಕೆಲಹೊತ್ತು ವಿಶ್ರಾಂತಿ ಪಡೆದಿದ್ದಳು. ಬೆಳಗ್ಗಿನಿಂದಲೇ ಮಹಿಳೆಯ ಚಲನವಲನವನ್ನು ಗಮನಿಸುತ್ತಿದ್ದ ಅಲ್ಲಿನ ಇಬ್ಬರು ಭದ್ರತಾ ಸಿಬ್ಬಂದಿಗಳು ಆಕೆಯ ಮೇಲೆ ಕಣ್ಣಿಟ್ಟಿದ್ದರು.

ಮಹಿಳೆಯ ಚಲನವಲನಗಳ ಮೇಲೆ ಬೆಳಗ್ಗೆಯಿಂದಲೂ ಕಣ್ಣಿಟ್ಟಿದ್ದ ಭದ್ರತಾ ಸಿಬ್ಬಂದಿ ಈಕೆ ಒಂಟಿಯಾಗಿರುವುದನ್ನು ಗೊತ್ತುಪಡಿಸಿಕೊಂಡಿದ್ದಾರೆ. ಅಷ್ಟರಲ್ಲೇ ಟೆನ್ನಿಸ್ ಅಕಾಡೆಮಿಯಲ್ಲಿ ತಡವಾದ ಕಾರಣ ಮಹಿಳೆ ತಾನು ಉಳಿದುಕೊಳ್ಳಲು ವ್ಯವಸ್ಥೆ ಮಾಡುವಂತೆ ಇದೇ ಭದ್ರತಾ ಸಿಬ್ಬಂದಿಗಳ ಬಳಿ ಕೇಳಿದ್ದಾಳೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡ ಸಿಬ್ಬಂದಿಗಳು ಆಕೆಯನ್ನು ಕಬ್ಬನ್  ಪಾರ್ಕ್ ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಸಭ್ಯರಂತೆ ವರ್ತಿಸಿದ ಸಿಬ್ಬಂದಿ ಆಕೆಗೆ ದಾರಿ ತೋರಿಸುವುದಾಗಿ ಹೇಳಿ ಈ ಕೃತ್ಯ  ಎಸಗಿದ್ದಾರೆ.

ಬಳಿಕ ಸಮೀಪದ ಸಿದ್ದಲಿಂಗಯ್ಯ ಸರ್ಕಲ್ ಬಳಿಯ ಪೊದೆಯೊಳಗೆ ಬಿಸಾಡಿ ಹೋಗಿದ್ದಾರೆ. ಅತ್ಯಾಚಾರದಿಂದಾಗಿ ನಿತ್ರಾಣಗೊಂಡಿದ್ದ ಮಹಿಳೆ ರಾತ್ರಿ ಪಾಳಿ ಪೊಲೀಸರ ಕಣ್ಣಿಗೆ ಬಿದ್ದಿದ್ದು,  ಅಸ್ವಸ್ಥವಾಗಿದ್ದ ಮಹಿಳೆಗೆ ಪೊಲೀಸರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ಆಕೆಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಬೆಳಕಿಗೆ ಬರುತ್ತಿದ್ದಂತೆಯೇ ಎಚ್ಚೆತ್ತ  ಕಬ್ಬನ್ ಪಾರ್ಕ್ ಪೊಲೀಸರು ಅತ್ಯಾಚಾರವೆಸಗಿದ ಇಬ್ಬರು ಭದ್ರತಾ ಸಿಬ್ಬಂದಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT