ಒಂದಂಕಿ ಲಾಟರಿ ಹಗರಣದಲ್ಲಿ ಅಮಾನತಾಗಿದ್ದ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ 
ಹಿನ್ನೋಟ 2015

ಪೊಲೀಸ್ ಇಲಾಖೆಯ ಮುಜುಗರಕ್ಕೆ ಕಾರಣವಾದ ಲಾಟರಿ ಹಗರಣ

ವರ್ಷಗಳ ಹಿಂದೆ ನಿಷೇಧಕ್ಕೆ ಒಳಗಾದ ಒಂದಂಕಿ ಲಾಟರಿ ಹಗರಣ 2015ರಲ್ಲಿ ಮತ್ತೆ ಭಾರಿ ಸುದ್ದಿಗೆ ಕಾರಣವಾಯಿತು. ಕರ್ನಾಟಕದಲ್ಲಿ ಲಾಟರಿ ನಿಷೇಧವಿದ್ದರೂ ಹೊರಗಡೆ ಮುದ್ರಿಸಿ ರಾಜ್ಯದಲ್ಲಿ...

ವರ್ಷಗಳ ಹಿಂದೆ ನಿಷೇಧಕ್ಕೆ ಒಳಗಾದ ಒಂದಂಕಿ ಲಾಟರಿ ಹಗರಣ 2015ರಲ್ಲಿ ಮತ್ತೆ ಭಾರಿ ಸುದ್ದಿಗೆ ಕಾರಣವಾಯಿತು. ಕರ್ನಾಟಕದಲ್ಲಿ ಲಾಟರಿ ನಿಷೇಧವಿದ್ದರೂ ಹೊರಗಡೆ ಮುದ್ರಿಸಿ ರಾಜ್ಯದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ಇತ್ತಾದರೂ, ಮೇಲಧಿಕಾರಿಗಳ ಸೂಚನೆಯಂತೆ ಸುಮ್ಮನಿದ್ದರು ಮತ್ತು ಇದಕ್ಕಾಗಿ ಪೊಲೀಸ್‌ ಇಲಾಖೆಗೆ  ಪ್ರತೀ ತಿಂಗಳು ಅಧಿಕಾರಿಗಳಿಗೆ "ಕಾಣಿಕೆ' ಸಲ್ಲುತ್ತಿತ್ತು ಎಂದು ಆರೋಪಿಸಲಾಗಿತ್ತು.

ಈ ವಿಚಾರವನ್ನು ಖಾಸಗಿ ಸುದ್ದಿವಾಹಿನಿಯೊಂದು ಬಯಲಿಗೆಳೆದಿತ್ತು. ಚುಟುಕು ಕಾರ್ಯಾಚರಣೆಯಲ್ಲಿ ಲಾಟರಿ ಕಿಂಗ್ ಪಿನ್ ಪಾರಿರಾಜನ್ ಜತೆ ಇಬ್ಬರು ಎಡಿಜಿಪಿ, ಮೂವರು ಐಜಿಪಿ, ಇಬ್ಬರು  ನಿವೃತ್ತ ಡಿಜಿಪಿ ಸೇರಿ 32 ಅಧಿಕಾರಿಗಳಿಗೆ ಸಂಪರ್ಕ ಇತ್ತು ಎಂದು ತಿಳಿದುಬಂದಿತ್ತು. ಈ ಅಧಿಕಾರಿಗಳು ತಮ್ಮ  ಪ್ರಭಾವ ಬೀರಿ ರಾಜ್ಯವ್ಯಾಪಿ ಅಕ್ರಮ ಲಾಟರಿ ದಂಧೆ ನಡೆಯಲು ಸಹಕರಿಸಿದ್ದರು.  ಪಾರಿ ರಾಜನ್‌ ಜತೆ ಪೊಲೀಸ್‌ ಅಧಿಕಾರಿಗಳು ನಿರಂತರವಾಗಿ ಮೊಬೈಲ್‌ ದೂರವಾಣಿ ಮೂಲಕ  ಮಾತನಾಡಿದ್ದಾರೆ ಎಂದು ಸಿಐಡಿ ಮಧ್ಯಂತರ ವರದಿ ತಿಳಿಸಿತ್ತು.

ಇನ್ನೂ ಅಚ್ಚರಿ ಎಂದರೆ ಈ ಹೈ ಪ್ರೊಫೈಲ್ ಪ್ರಕರಣದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಗಳು ಎಂದು ಖ್ಯಾತಿಗಳಿಸಿದ್ದ ಅಲೋಕ್ ಕುಮಾರ್ ರಂತಹ ಅಧಿಕಾರಿಗಳೇ ಲಾಭ ಪಡೆದ ಆರೋಪದ ಮೇಲೆ ಅಮಾನತುಗೊಂಡಿದ್ದು ಪ್ರಕರಣದ ಗಂಭೀರತೆಯನ್ನು ತೋರಿಸುತ್ತಿತ್ತು.

ಮೂರು ವರ್ಷ ರಜೆ ಕೋರಿದ್ದ ಅಲೋಕ್‌
ಅಕ್ರಮ ಲಾಟರಿ ದಂಧೆಯ ರೂವಾರಿ ರಾಜನ್‌ ಜತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಐಜಿಪಿ ಅಲೋಕ್‌ಕುಮಾರ್‌ ಉನ್ನತ ತರಬೇತಿಗಾಗಿ ಮೂರು ವರ್ಷ ದೀರ್ಘ‌ ರಜೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಅವರು ದೆಹಲಿಗೂ ಹೋಗಿ ಬಂದಿದ್ದರು. ಸಿಐಡಿ ಮಧ್ಯಂತರ ವರದಿಯಲ್ಲಿ ಅಲೋಕ್‌ ಕುಮಾರ್‌ ಹೆಸರು ಇರುವುದು ಪತ್ತೆಯಾದ ತಕ್ಷಣವೇ ಕಡ್ಡಾಯ ರಜೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೆ, ತರಬೇತಿಗಾಗಿ ದೀರ್ಘ‌ ರಜೆ ಕೋರಿ ಮನವಿ ಸಲ್ಲಿಸಿದ್ದೇನೆ. ಅದಕ್ಕೆ ಅನುಮತಿ ದೊರೆಯುತ್ತದೆ ಎಂದು ಅಲೋಕ್‌ ವಿಶ್ವಾಸ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.

ಅಲೋಕ್‌ ಅಮಾನತೇಕೆ?
ಮೂಲಗಳ ಪ್ರಕಾರ, ದಂಧೆ ರೂವಾರಿ ಪಾರಿ ರಾಜನ್‌ ಮಾಹಿತಿದಾರನಾಗಿ ಅಲೋಕ್‌ ಕುಮಾರಗೆ ಪರಿಚಯವಾದ. ಅಲೋಕ್‌ಗೆ ಆತನ ಪರಿಚಯ ಮಾಡಿಸಿದ್ದೇ ಮತ್ತೂಬ್ಬ ಹಿರಿಯ ಅಧಿಕಾರಿ.   ಬಳಿಕ ಪಾರಿರಾಜನ್‌ ತನ್ನ ವ್ಯವಹಾರಗಳಿಗೆ ಅಲೋಕ್‌ ಸಹಾಯ ಪಡೆದ. ಆತನನ್ನು ಹಲವು ಕಿರಿಯ ಅಧಿಕಾರಿಗಳಿಗೆ ಅಲೋಕ್‌ ಪರಿಚಯ ಮಾಡಿಸಿದ್ದರು. ಪಾರಿ ರಾಜನ್‌ಗಾಗಿ ತಲಾಷೆ ನಡೆದಾಗ  ಆತನನ್ನು ಬಂಧಿಸದಂತೆ ಕಿರಿಯ ಅಧಿಕಾರಿ ಮೇಲೆ ಒತ್ತಡ ಹಾಕಿದ್ದರೆನ್ನಲಾಗುತ್ತಿದೆ. ಪಾರಿ ಜತೆ ಅಲೋಕ್ ಗೆ ನಿರಂತರ ಮೊಬೈಲ್‌ ಸಂಪರ್ಕ ಇತ್ತೆನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT