ಸಂಗ್ರಹ ಚಿತ್ರ 
ಮಹಾಶಿವರಾತ್ರಿ

ವಿಷ ಕುಡಿದ ಶಿವನನ್ನು ಎಚ್ಚರವಿಡಲು ದೇವತೆಗಳು ಭಜನೆ ಮಾಡಿದ ರಾತ್ರಿ

ದೇವತೆಗಳೆಲ್ಲರೂ ಶಿವನ ಭಜನೆ ಮಾಡಿ ಪರಮೇಶ್ವರನ್ನು ಎಚ್ಚರವಿರಿಸುತ್ತಾರೆ. ಹಾಗಾಗಿ ಆ ಪವಿತ್ರ ದಿನವನ್ನು...

ಮಹಾ ಶಿವರಾತ್ರಿ ಹಿಂದೂಗಳು ಅತ್ಯಂತ ಭಕ್ತಿ ಭಾವದಿಂದ ಆಚರಿಸುವ ಪ್ರಮುಖ ಹಬ್ಬಗಳಲ್ಲೊಂದು. ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ ಶಿವ ಭಕ್ತರ ಪಾಲಿಗೆ ಮಂಗಳಕರ ರಾತ್ರಿ. ಆದರೆ ಈ ಶಿವ ರಾತ್ರಿಯ ಹಿಂದೆ ಸಣ್ಣ ಕಥೆಗಳು ಇವೆ. 
ದೇವತೆಗಳು ಮತ್ತು ಅಸುರರು ಅಮೃತಕ್ಕಾಗಿ ಸಮುದ್ರ ಮಂಥನ ಮಾಡುತ್ತಿರುತ್ತಾರೆ. ಈ ವೇಳೆ ವಿಷ ಉದ್ಭವವಾಗುತ್ತದೆ. ಈ ವಿಷ ಇಡೀ ನಭೋಮಂಡಲವನ್ನೇ ನಾಶಮಾಡಬಲ್ಲ ಸಾಮರ್ಥ್ಯ ಹೊಂದಿತ್ತು. ಆದರೆ, ಈ ವಿಷವನ್ನು ಕುಡಿಯೋಕೆ ದೇವತೆಗಳು ಯಾರೂ ಮುಂದಾಗುವುದಿಲ್ಲ. ಆಗ ಲೋಕ ಕಲ್ಯಾಣಕ್ಕಾಗಿ ಪರಶಿವನು ಆ ವಿಷವನ್ನು ಕುಡಿದುಬಿಡುತ್ತಾನೆ. 
ಇದನ್ನು ಕಂಡ ಪಾರ್ವತಿ ತನ್ನ ಪತಿ ಸೇವಿಸಿದ ವಿಷ ಹೊಟ್ಟೆ ಸೇರದಂತೆ ಗಂಟಲಲ್ಲೇ ತಡೆ ಹಿಡಿಯುತ್ತಾಳೆ. ಆದರೆ, ಶಿವನು ನಿದ್ರೆಗೆ ಜಾರಿದರೆ ವಿಷವು ಬೇಗನೆ ದೇಹದ ತುಂಬ ಹರಡಬಹುದು ಎಂದು ದೇವತೆಗಳೆಲ್ಲರೂ ಶಿವನ ಭಜನೆ ಮಾಡಿ ಪರಮೇಶ್ವರನ್ನು ಎಚ್ಚರವಿರಿಸುತ್ತಾರೆ. ಹಾಗಾಗಿ ಆ ಪವಿತ್ರ ದಿನವನ್ನು ಶಿವರಾತ್ರಿ ಎಂದು ಕರೆಯಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT