ದೇಶ

ಕೋರ್ಟ್ ಆವರಣದಲ್ಲೇ ತುಂಡಾ ಮೇಲೆ ಹಲ್ಲೆ

ನವದೆಹಲಿ: ಲಷ್ಕರ್ ಉಗ್ರ, ಮಾಸ್ಟರ್ ಬಾಂಬ್ ತಯಾರಕ ಅಬ್ದುಲ್ ಕರೀಂ ತುಂಡಾ ಮೇಲೆ ಮಂಗಳವಾರ ಕೋರ್ಟ್ ಆವರಣದಲ್ಲೇ ಹಲ್ಲೆ ನಡೆದಿದೆ. ತುಂಡಾನನ್ನು ಪೊಲೀಸರು ಪಟಿಯಾಲಾ ಹೌಸ್ ಕೋರ್ಟ್‌ಗೆ ಕರೆತರುತ್ತಿದ್ದ ವೇಳೆ ಕೋರ್ಟ್ ಆವರಣದಲ್ಲೇ ಹಿಂದೂ ಸೇನೆಯ ಕಾರ್ಯಕರ್ತನೊಬ್ಬ ತುಂಡಾ ಮೇಲೆ ಹಲ್ಲೆ ನಡೆಸಿದ್ದಾನೆ. ಮೊದಲು ಆತ ತುಂಡಾ ಕೆನ್ನೆಗೆ ಬಾರಿಸಲು ಯತ್ನಿಸಿದಾಗ ಪೊಲೀಸರು ತಡೆದರು. ಆಗ ಆತ ತುಂಡಾನ ಬೆನ್ನಿಗೆ ಬಾರಿಸಿದ್ದಾನೆ.
 ಬಳಿಕ ತುಂಡಾನನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ರಹಸ್ಯ ವಿಚಾರಣೆಗೆ ಕೋರ್ಟ್ ಸೂಚಿಸಿತು.
ನನ್ನಲ್ಲಿ ಹಣವಿಲ್ಲ: ಇದೇ ವೇಳೆ, ನಿಮ್ಮನ್ನು ಯಾರು ಪ್ರತಿನಿಧಿಸಲಿದ್ದಾರೆ ಎಂದು ಕೋರ್ಟ್ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ತುಂಡಾ, ನನ್ನಲ್ಲಿ ವಕೀಲರಿಗೆ ಕೊಡಲು ಹಣವಿಲ್ಲ ಎಂದಿದ್ದಾನೆ.
 ಏತನ್ಮಧ್ಯೆ, ಭಾರತದ ನಕಲಿ ನೋಟು ಜಾಲದ ಡೀಲರ್ ಇಕ್ಬಾಲ್ ಕಾನಾ ಪಾಕ್ ಸೇನಾಧಿಕಾರಿಯಿಂದ ನಕಲಿ ನೋಟು ಪಡೆಯುತ್ತಿದ್ದ ಎಂದು ವಿಚಾರಣೆ ವೇಳೆ ತುಂಡಾ ಬಾಯಿಬಿಟ್ಟಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT