ಭಾರತೀಯ ಸಶಸ್ತ್ರ ಪಡೆ ಧ್ವಜ 
ದೇಶ

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಡಿ. 5 ರಂದು

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು...

ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಡಿ.5 ರಂದು ನಗರದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಯೋಜಿಸಿದೆ. ಅಂದು ಸಂಜೆ 4.15ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ.ಜಾರ್ಜ್ ಅತಿಥಿಗಳಾಗಿ ಭಾಗವಹಿಸುವರು ಎಂದು ಇಲಾಖೆ ನಿರ್ದೇಶಕ (ಪ್ರಭಾರ) ಎಂ.ಎಸ್.ಲೋಲಾಕ್ಷ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

ಪ್ರತಿವರ್ಷವೂ ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಡಿ.7ರಂದು ದೇಶದಾದ್ಯಂತ ಆಚರಿಸಲಾಗುತ್ತದೆ. ಆದರೆ ಈ ವರ್ಷ ಡಿ.7 ಭಾನುವಾರವಾಗಿರುವುದರಿಂದ ಎರಡು ದಿವಸ ಮುಂಚಿತವಾಗಿಯೇ ಕೇಂದ್ರೀಯ ಸೈನಿಕ ಮಂಡಳಿಯು ಸಶಸ್ತ್ರ ಧ್ವಜ ದಿನ ಆಚರಿಸುತ್ತಿದೆ. ಅಂತೆಯೇ ನಗರದಲ್ಲೂ ಶುಕ್ರವಾರವೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಯುದ್ಧ ಸಂತ್ರಸ್ತರು, ರಾಜ್ಯದ ಹಿರಿಯ ನಾಗರಿಕರು, ಸೈನಿಕ ಶಾಲೆಯ ಮಕ್ಕಳು, ಎನ್‌ಸಿಸಿ ಕೆಡೆಟ್‌ಗಳು ಹಾಗೂ ಸೇವಾ ನಿರತ ಸೈನಿಕರು ಸಮಾರಂಭದಲ್ಲಿ ಬಾಗವಹಿಸುತ್ತಿದ್ದಾರೆ. ಗಾಯಗೊಂಡ ಸೈನಿಕರಿಗೆ ಮತ್ತು ಹುತಾತ್ಮರಾದ ಸೈನಿಕರ ಅವಲಂಬಿತರಿಗೆ, ಶೌರ್ಯ ಪ್ರಶಸ್ತಿ ವಿಜೇತರಿಗೆ ಧನ ಸಹಾಯ ವಿತರಿಸಿ ಗೌರವಿಸಲಾಗುವುದು. ಜತೆಗ ಸಾಂಕೇತಿಕ ಮತ್ತು ವಾಹನ ಧ್ವಜಗಳನ್ನು ಖರೀದಿಸಿ ಧ್ವಜ ನಿಧಿಗೆ ದೇಣಿಗೆ ನೀಡುವ ಕಾರ್ಯಕ್ರಮವೂ ಇದೆ ಎಂದರು.

ಧ್ವಜ ದಿನಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 5 ರಂದು ರಾಜ್ಯದ ಎಳ್ಲ ಮಾಜಿ ಸೈನಿಕರಿಗೆ ರಸ್ತೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವಂತೆ ಸರ್ಕಾರವನ್ನು ಕೇಳಿಕೊಳ್ಳಲಾಗಿದೆ. ಸರ್ಕಾರವೂ ಇದಕ್ಕೆ ಒಪ್ಪಿಗೆ ಸೂಚಿಸಿದೆ. ಆದೇಶ ಬರುವುದು ಬಾಕಿಯಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ