ಮಲ್ಲಿಕಾರ್ಜುನ ಖರ್ಗೆ 
ದೇಶ

ಸಿಬಿಐ ಸಾರಥಿ ಆಯ್ಕೆಗೆ ಕನ್ನಡಿಗರಿಬ್ಬರ ಸಾಥ್

ಸಿಬಿಐ ನೂತನ ನಿರ್ದೇಶಕರ ಆಯ್ಕೆ...

ನವದೆಹಲಿ: ಸಿಬಿಐ ನೂತನ ನಿರ್ದೇಶಕರ ಆಯ್ಕೆ ಮಂಗಳವಾರ ನಡೆಯಲಿದೆ. ವಿಶೇಷವೆಂದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಟ್ಟರೆ ಆಯ್ಕೆ ಸಮಿತಿಯಲ್ಲಿ ಇರುವ ಮತ್ತಿಬ್ಬರು ಕರ್ನಾಟಕದವರೇ.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ  ನ್ಯಾಯಮೂರ್ತಿ ಎಚ್. ಎಲ್ ದತ್ತು ಅವರಿರುವ ತ್ರಿಸದಸ್ಯರ ಉನ್ನತ ಸಮಿತಿ ಸಿಬಿಐ ಮುಖ್ಯಸ್ಥರ ಆಯ್ಕೆ ಮಾಡಲಿದೆ. ಹಾಲಿ ನಿರ್ದೇಶಕ ರಂಜಿತ್ ಸಿನ್ಹಾ ಅವರು ಮಂಗಳವಾರ ನಿವೃತ್ತರಾಗಲಿದ್ದಾರೆ. ಸಿನ್ಹಾ ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯೊಂದು ಈಗಾಗಲೇ ಪ್ರಧಾನಿ ಕಾರ್ಯಾಲಯದ ಕೈಯಲ್ಲಿದೆ. ಆಂತರಿಕ ಭದ್ರತೆಯ ವಿಶೇಷ ಕಾರ್ಯದರ್ಶಿ ಪ್ರಕಾಶ್ ಮಿಶ್ರಾ, ಹೋಂಗಾರ್ಡ್ಸ್‌ನ ಡಿಜಿ ಅಭಯ್ ಆನಂದ್, ಎನ್‌ಐಎ  ನಿರ್ದೇಶಕ ಶರತ್ ಕುಮಾರ್, ಸಿಬಿಐ ವಿಶೇಷ ನಿರ್ದೇಶಕ ಅನಿಶ್ ಸಿನ್ಹಾ, ರೈಲ್ವೆ ಸುರಕ್ಷಾ ಪಡೆಯ ಡಿಜಿ ಕೃಷ್ಣ ಚೌಧರಿ ಅವರ ಹೆಸರು ಸಿಬಿಐ ನಿರ್ದೇಶಕ ಸ್ಥಾನಕ್ಕೆ ಕೇಳಿಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT