ಪ್ರಧಾನಿ ನರೇಂದ್ರ ಮೋದಿ 
ದೇಶ

ಶಬರಿಮಲೆಗೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

ರಾಷ್ಟ್ರೀಯ ಪುಣ್ಯಕ್ಷೇತ್ರವಾಗಿ ಘೋಷಿಸಿದರೆ, ಜಾಗತಿಕ ಮಟ್ಟದಲ್ಲಿ ಶಬರಿಗಿರಿ ಸುಪ್ರಸಿದ್ಧ ಕ್ಷೇತ್ರವಾಗಿ...

ತಿರುವನಂತಪುರ: ಮುಂದಿನ ವರ್ಷ ಜನವರಿಯಂದು ಪ್ರಧಾನಿ ನರೇಂದ್ರ ಮೋದಿ ಶಬರಿಮಲೆಗೆ ಬರುವ ಸಾಧ್ಯತೆಗಳಿವೆ ಎಂದು ತಿರುವಾದಂಕೂರ್ ದೇವಸಂ ಬೋರ್ಡ್ ತಿಳಿಸಿದೆ.

ಕೇರಳದಲ್ಲಿರುವ ಸುಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಪ್ರತಿ ವರ್ಷವೂ ವಿವಿಧ ರಾಜ್ಯಗಳಿಂದ ಮಾತ್ರವಲ್ಲದೆ ವಿದೇಶಗಳಿಂದ ಹಲವು ಭಕ್ತರು ಆಗಮಿಸಿ ಶಬರಿಶಾಸ್ತನ ದರ್ಶನ ಪಡೆಯುವರು. ಭಕ್ತಾದಿಗಳ ಅನುಕೂಲಕ್ಕಾಗಿ ತಿರುವಾದಂಕೂರ್ ದೇವಸಂ ಬೋರ್ಡ್ ಹಲವು ಬಗೆಯ ಅಭವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ.

ಏಥೇನ್ ಮಧ್ಯೆ ಶಬರಿಮಲೆಯನ್ನು ರಾಷ್ಟ್ರೀಯ ತೀರ್ಥ ಕ್ಷೇತ್ರವನ್ನಾಗಿ ಘೋಷಿಸಲು ಸಾರ್ಕರ ಚಿಂತನೆ ನಡೆಸುತ್ತಿದೆ. ಈ ಕುರಿತು ಇತ್ತಿಚೆಗೆ ಕೇರಳ ಮುಖ್ಯಮಂತ್ರಿ ಊಮ್ಮನ್ ಚಾಂಡಿ ಸಹಾ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಆ ಭೇಟಿಯ ಸಮಯದಲ್ಲಿ ಶಬರಿ ಮಲೆಗೆ ಆಗಮಿಸಲು ಆಹ್ವಾನ ಕೋರಲಾಗಿತ್ತು. ಪ್ರಧಾನಿ ಮೋದಿ ಸಹಾ ಆಹ್ವಾನವನ್ನು ಸ್ವೀಕರಿಸಿದ್ದರು ಎಂಬ ಮಾಹಿತಿ ತಿಳಿದುಬಂದಿತ್ತು.

ಈ ಸಂಬಂಧ ತಿರುವಾದಂಕೂರ್ ದೇವಸಂ ಮಂಡಳಿಯ ಅಧ್ಯಕ್ಷ ಗೋವಿಂದನ್ ನಾಯರ್, ಜನವರಿ ತಿಂಗಳಿನಿಲ್ಲಿ ಶಬರಿ ಮಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.  

ಜನವರಿ ತಿಂಗಳು ಕೇರಳದಲ್ಲಿ ರಾಷ್ಟ್ರೀಯ ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಕೇರಳಕ್ಕೆ ಆಗಮಿಸುವುದು ಖಚಿತವಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಶಬರಿಗಿರಿ ಶಾಸ್ತನ ದರ್ಶನ ಮಾಡುವ ಸಾಧ್ಯತೆಗಳಿವೆ ಎಂದು ಅವರು ವಿವರಿಸಿದರು.

ಶಬರಿಗಿರಿಯನ್ನು ರಾಷ್ಟ್ರೀಯ ಪುಣ್ಯಕ್ಷೇತ್ರವಾಗಿ ಘೋಷಿಸಿದರೆ, ಜಾಗತಿಕ ಮಟ್ಟದಲ್ಲಿ ಶಬರಿಗಿರಿ ಸುಪ್ರಸಿದ್ಧ ಕ್ಷೇತ್ರವಾಗಿ ಹೊರಹೊಮ್ಮಲಿದೆ. ಶಬರಿಮಲೆ ಅಭಿವೃದ್ಧಿ ಕಾಮಗಾರಿಗೆ ಇನ್ನೂ 500 ಎಕರೆ ಜಾಗ ಅಗತ್ಯವಿದೆ. ಬೇಕಾಗುವಷ್ಟು ಜಾಗವನ್ನು ಕೇಂದ್ರ ಸರ್ಕಾರ ಶಬರಿಮಲೆಗೆ ಒದಗಿಸಿದ್ದಲ್ಲಿ, ಅದಕ್ಕೆ ಬದಲಾಗಿ ದೇವಸಂ ಮಂಡಳಿ ಬಳಿ ಇರುವ ಜಾಗವನ್ನು ಅರಣ್ಯಇಲಾಖೆಗೆ ಒಪ್ಪಿಸಲು ಸಿದ್ಧವಾಗಿರುವುದಾಗಿ ಅವರು ತಿಳಿಸಿದರು.

ಅಲ್ಲದೇ ಶಬರಿ ಮಲೆಯಲ್ಲಿ 'ರೋಪ್ ವೇ' ಸ್ಥಾಪಿಸುವ ಚಿಂತನೆ ಕೈಗೊಂಡಿದ್ದು, ಒಂದು ವರ್ಷದಲ್ಲಿ ಈ ಕಾಮಗಾರಿ ಆರಂಭಿಸುವ ಕಾರ್ಯದಲ್ಲಿ ತೊಡಗಿರುವುದಾಗಿ ಗೋವಿಂದನ್ ನಾಯರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT