ಬಾಕ್ಸರ್ ಆಟಗಾರ್ತಿ ಸರಿತಾ ದೇವಿ 
ದೇಶ

ಬಾಕ್ಸರ್ ಸರಿತಾ ಪ್ರಕರಣ : ಜೀವಾವಧಿ ನಿಷೇಧ ತೆರವಿಗೆ ಮನವಿ

ತೀವ್ರ ಪರಿಶ್ರಮದ ಮೂಲಕ ಆಕೆ ಇಂದು ಉನ್ನತ ಮಟ್ಟದಲ್ಲಿ ಬೆಳೆದಿದ್ದಾಳೆ...

ನವದೆಹಲಿ: ಬಾಕ್ಸರ್ ಆಟಗಾರ್ತಿ ಸರಿತಾ ದೇವಿಯ ಮೇಲಿನ ನಿಷೇಧದ ತೆರವು ಮಾಡುವಂತೆ ಕೋರಿ ಭಾರತೀಯ ಕ್ರೀಡಾ ಸಚಿವಾಲಯ, ಅಮೇಚರ್ ಅಂತರರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಶನ್‌ಗೆ ಮನವಿ ಪತ್ರ ರವಾನಿಸಿದೆ.

ಈ ಕುರಿತು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕ್ರೀಡಾ ಸಚಿವ ಸರ್ಬನಂದ ಸೋನವಾಲ್, ಸರಿತಾ ದೇವಿಯ ವಿರುದ್ಧ ಕೈಗೊಂಡಿರುವ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಕೋರಿ, ಅಮೇಚರ್ ಅಂತರರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಶನ್‌ಗೆ ಭಾರತ ಸರ್ಕಾರ ಪತ್ರ ಬರೆದಿದೆ ಎಂದು ವಿವರಿಸಿದರು.

ಸರಿತಾ ದೇವಿಯು ಅತ್ಯಂತ ಬಡ ಕುಟುಂಬದಿಂದ ಬಂದವಳು, ತೀವ್ರ ಪರಿಶ್ರಮದ ಮೂಲಕ ಆಕೆ ಇಂದು ಉನ್ನತ ಮಟ್ಟದಲ್ಲಿ ಬೆಳೆದಿದ್ದಾಳೆ, ಅಂತರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಶನ್ ಸಂಸ್ಥೆಯ ನಿರ್ಧಾರದಿಂದ ಆಕೆಭ ಭವಿಷ್ಯಕ್ಕೆ ಬಾರಿ ಪೆಟ್ಟು ಬೀಳಲಿದೆ. ಇದನ್ನು ಪರಿಗಣಿಸಿ ಆಕೆಯ ಮೇಲಿನ ನಿಷೇಧವನ್ನು ತೆರವು ಗೊಳಿಸುವಂತೆ ಮನವಿಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕ್ರಿಕೆಟ್ ಆಟಗಾರ ಮತ್ತು ಸಂಸದ ಸಚಿನ್ ತೆಂಡೂಲ್ಕರ್, ಸರಿತಾ ದೇವಿ ಉತ್ತಮ ಆಟಗಾರ್ತಿಯಾಗಿದ್ದು, ಸಹಾನೂಭೂತಿಯ ಆಧಾರದ ಮೇಲೆ ಆಕೆಯ ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಮನವಿ ಮಾಡಿರುವುದಾಗಿ ವಿವರಿಸಿದರು.

2014 ರಲ್ಲಿ ನಡೆದ ಏಶಿಯನ್ ಕ್ರೀಡಾ ಸಂದರ್ಭದಲ್ಲಿ, ಬಾಕ್ಸಿಂಗ್ ವಿಭಾಗದಲ್ಲಿ ಕಂಚಿನ ಪದಕವನ್ನು ತೆಗೆದುಕೊಳ್ಳಲು ತಿರಸ್ಕರಿಸಿದ ಕಾರಣ ಆಕೆಯನ್ನು ಏಶಿಯನ್ ಕ್ರೀಡೆಯಿಂದ, ಅಮೆಚರ್ ಅಂತರರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಶನ್ ಸರಿತಾ ದೇವಿಗೆ ಆಜೀವ ನಿಶೇಧವನ್ನು ಹೇರಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ