ಮ್ಯಾರಾಥಾನ್ ಸಭೆಯಲ್ಲಿ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರು 
ದೇಶ

ಮೋದಿ ಎದುರಿಸಲು ಮತ್ತೆ ಒಂದಾದ ಜನತಾ ಪರಿವಾರ

ಕಳೆದ ಲೋಕಸಭೆ ಚುನಾವಣೆ ಹಾಗೂ ಇತ್ತೀಚಿನ...

ನವದೆಹಲಿ: ಕಳೆದ ಲೋಕಸಭೆ ಚುನಾವಣೆ ಹಾಗೂ ಇತ್ತೀಚಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿದ್ದ ಜನತಾ ಪರಿವಾರದ ಪ್ರಾದೇಶಿಕ ಪಕ್ಷಗಳು ಇಂದು ಮತ್ತೆ ಒಂದಾಗಲು ನಿರ್ಧರಿಸಿವೆ.

ಈ ಕುರಿತು ಇಂದು ನಡೆದ ಮ್ಯಾರಾಥಾನ್ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿ(ಯು) ನಾಯಕ ಮತ್ತು ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಮುಖ್ಯಮಂತ್ರಿ ಅಧಿಕೃತವಾಗಿ ಹೇಳಿಕೆ ನೀಡಿದ್ದು, ಸಭೆಯಲ್ಲಿ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದು, ಹಲವು ನಿಯಮಗಳ ಮೇರೆಗೆ ತಮ್ಮ ಪಕ್ಷಗಳನ್ನು ಜನತಾ ಪರಿವಾರಕ್ಕೆ ಸೇರ್ಪಡೆಗೊಳಿಸಲು ಎಲ್ಲಾ ಪಕ್ಷದ ನಾಯಕರು ಮನಸ್ಸು ಮಾಡಿದ್ದಾರೆ ಎಂದು ಹೇಳಿದ್ದಾರೆ.

ನಮಗೆ ನಮ್ಮದೇ ಆದ ಸೈದ್ದಾಂತಿಕ ಸಿದ್ದಾಂತಗಳಿದ್ದು, ರಾಜಕೀಯದಲ್ಲಿ ಬೆಳೆಯಬೇಕಾದರೆ ವಿರೋಧ ಪಕ್ಷಗಳು ಒಗ್ಗೂಡಿ ಕೆಲಸ ಮಾಡಬೇಕು. ಆಗಲೇ ಪಕ್ಷ ಶಕ್ತಿಶಾಲಿಯಾಗಿ ಹೊರಹೊಮ್ಮಲು ಸಾಧ್ಯ ಎಂದು ಹೇಳಿದರು. ಅಲ್ಲದೆ ಅವರು ಸಭೆಯಲ್ಲಿ ದೇಶದ ದೊಡ್ಡ ಸಮಸ್ಯೆಗಳಾಗಿ ತಲೆದೋರಿರುವ ಕಪ್ಪು ಹಣ, ಅತ್ಯಾಚಾರ, ನಿರುದ್ಯೋಗದಂತಹ ಹತ್ತು ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದು, ಡಿ.22 ರಂದು ದೆಹಲಿಯಲ್ಲಿ ಧರಣಿ ನಡೆಸಲು ಎಲ್ಲಾ ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅಂತೂ ಹಲವು ವರ್ಷಗಳ ಹಿಂದೆ ಹರಿದು ಹಂಚಿಹೋಗಿದ್ದ ಜನತಾ ಪರಿವಾರ ಇಂದು ವಿಲೀನಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

SCROLL FOR NEXT