ದೇಶ

ರೂಪಾಯಿ ನೋಟುಗಳ ಮೇಲೆ ಗಾಂಧಿ ಭಾವಚಿತ್ರಕ್ಕೆ ಮಾತ್ರ ಅವಕಾಶ

ಗಾಂಧಿಯನ್ನು ಹೊರತುಪಡಿಸಿ ಮತ್ತೆ ಬೇರೆ ನಾಯಕರ ಭಾವಚಿತ್ರಗಳನ್ನು ಮುದ್ರಿಸುವ ನಿರ್ಧಾರ ಇಲ್ಲ

ನವದೆಹಲಿ: ರೂಪಾಯಿ ನೋಟುಗಳ ಮೇಲೆ ಮಹಾತ್ಮಗಾಂಧಿ ಭಾವಚಿತ್ರ ಹೊರತು ಪಡಿಸಿ ಬೇರೆ ನಾಯಕರ ಭಾವಚಿತ್ರಗಳನ್ನು ಮುದ್ರಿಸುವ ಅವಕಾಶ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಪಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಸೂಚನೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ ಕಳೆದ 2010ರಂದು ವಿಶೇಷ ತಂಡ ರಚನೆ ಮಾಡಿತ್ತು. ಈ ತಂಡವು ಭವಿಷ್ಯದಲ್ಲಿ ರೂಪಾಯಿ ನೋಟುಗಳ ಮೇಲೆ ಇತರೆ ನಾಯಕರ ಭಾವಚಿತ್ರವನ್ನು ಮುದ್ರಿಸುವ ಕುರಿತು ಚರ್ಚೆ ನಡೆಸಿತ್ತು.

ಈ ಸಂಬಂಧ ಸಂಸತ್ತಿನಲ್ಲಿಂದು ಪ್ರಶ್ನೆ ಪ್ರತಿಧ್ವನಿಸಿತು. ಇದಕ್ಕೆ ಉತ್ತರ ನೀಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಲಿಖಿತ ಪತ್ರದ ಮೂಲಕ ಉತ್ತರ ನೀಡಿದರು.

ಆರ್‌ಬಿಐ ನಿಂದ ರಚಿತಗೊಂಡಿರುವ ಮಹಾತ್ಮ ಗಾಂಧಿಯನ್ನು ಹೊರತುಪಡಿಸಿ ಮತ್ತೆ ಬೇರೆ ನಾಯಕರ ಭಾವಚಿತ್ರಗಳನ್ನು ರೂಪಾಯಿ ನೋಟುಗಳ ಮೇಲೆ ಮುದ್ರಿಸುವ ನಿರ್ಧಾರ ಹೊಂದಿಲ್ಲ ಎಂದು ಜೇಟ್ಲಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ವಿವಿಧ ಬ್ಯಾಂಕುಗಳ ಎಟಿಎಂ ಮೆಶಿನ್‌ಗಳಿಂದ ತೆಗೆಯಲ್ಪಡುವ ರೂಪಾಯಿ ನೋಟುಗಳಲ್ಲಿ ನಕಲಿ ನೋಟುಗಳು ಸೇರ್ಪಡೆಯಾಗುವುದರ ಕುರಿತು ಇಲ್ಲಿಯವರೆಗೆ 21 ಪ್ರಕರಣಗಳು ರಿಸರ್ವ್ ಬ್ಯಾಂಕಿನಲ್ಲಿ ದಾಖಲಾಗಿದೆ. ಈ ಕುರಿತು ಸಂಬಂಧಿಸಿದ ಬ್ಯಾಂಕುಗಳಿಂದ ವರದಿ ನೀಡುವಂತೆ ಕೋರಲಾಗಿದೆ ಎಂದು ಜೇಟ್ಲಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT