ಸಂಸ್ಕೃತ 
ದೇಶ

ಸಂಸ್ಕೃತ ಕಡ್ಡಾಯ, ಆದ್ರೆ ಈ ವರ್ಷ ಅಲ್ಲ: ಕೇಂದ್ರ

ಜರ್ಮನಿ ಹಾಗೂ ಸಂಸ್ಕೃತ ಭಾಷೆಗಳಲ್ಲಿ...

ನವದೆಹಲಿ: ಜರ್ಮನಿ ಹಾಗೂ ಸಂಸ್ಕೃತ ಭಾಷೆಗಳಲ್ಲಿ ತಮಗಿಷ್ಟವಾದುದನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿದೆ.

ಅಲ್ಲದೆ, ಪ್ರಸಕ್ತ ಸಾಲಿನ ಸಂಸ್ಕೃತ ಪರೀಕ್ಷೆಗಳಿಂದ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿನಾಯ್ತಿಯನ್ನೂ ನೀಡಿದೆ. ಸರ್ಕಾರದ ಈ ನಿಲುವನ್ನು ನ್ಯಾಯಾಲಯ ಸ್ವಾಗತಿಸಿದೆ.

ನ್ಯಾ. ಅನಿಲ್ ಆರ್. ದಾವೆ ಅವರ ನೇತೃತ್ವದ ನ್ಯಾಯಪೀಠದ ಮುಂದೆ ಶುಕ್ರವಾರ ಹಾಜರಾದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ, ಸರ್ಕಾರದ ಈ 2 ಮಹತ್ವದ ನಿರ್ಧಾರಗಳನ್ನು ಸಲ್ಲಿಸಿದರು. ವಿದ್ಯಾರ್ಥಿಗಳ ಬಗ್ಗೆ ನ್ಯಾಯಾಲಯ ಹೊಂದಿರುವ ಕಳಕಳಿಯ ಅನುಸಾರವಾಗಿ ಕೇಂದ್ರೀಯ ವಿವಿ ಪರೀಕ್ಷೆಗಳಲ್ಲಿ ಈ ನಿರ್ಧಾರಗಳನ್ನು ಕೈಗೊಂಡಿರುವುದಾಗಿ ಅವರು ನ್ಯಾಯಪೀಠಕ್ಕೆ ತಿಳಿಸಿದರು.

ಸರ್ಕಾರ ಹೊಸ ನಿರ್ಧಾರಗಳಿಂದಾಗಿ ದೇಶದಲ್ಲಿರುವ ಸಾವಿರ ಕೇಂದ್ರೀಯ ವಿವಿ ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ. ಈ ನಿರ್ಣಯದಿಂದಾಗಿ, ಇನ್ನು ಮುಂದೆ ಸಂಸ್ಕೃತವನ್ನು ಕಡ್ಡಾಯವಾಗಿ ಕಲಿಯಲೇಬೇಕಾದ ಒತ್ತಡದಿಂದ ಸಾವಿರಾರು ವಿದ್ಯಾರ್ಥಿಗಳು ಪಾರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT