ಜಾನಕಿರಾಮ್ ಅಂತ್ಯಕ್ರಿಯೆಗೂ ಮೊದಲು ನಡೆದ ಅಂತಿಮಯಾತ್ರೆ (ಸಂಗ್ರಹ ಚಿತ್ರ) 
ದೇಶ

ನಂದಮೂರಿ ಜಾನಕಿರಾಮ್ ಅಂತ್ಯಕ್ರಿಯೆ ಪೂರ್ಣ

ಶನಿವಾರ ರಸ್ತೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ಎನ್‌ಟಿಆರ್ ಮೊಮ್ಮಗ ಜಾನಕಿ ರಾಮ್ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.

ಹೈದರಾಬಾದ್: ಶನಿವಾರ ರಸ್ತೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ಎನ್‌ಟಿಆರ್ ಮೊಮ್ಮಗ ಜಾನಕಿ ರಾಮ್ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.

ಹೈದರಾಬಾದ್‌ನ ಹೊರವಲಯದಲ್ಲಿರುವ ಮೊಯಿನಾಬಾದ್‌ನಲ್ಲಿರುವ ಎನ್‌ಟಿಆರ್ ಕುಟುಂಬದ ಒಡೆತನದ ಫಾರಂಹೌಸ್‌ನಲ್ಲಿ ಜಾನಕಿ ರಾಮ್ ಅವರ ಮೃತದೇಹದ ಅಂತಿಮ ವಿಧಿವಿಧಾನವನ್ನು ನೆರವೇರಿಸಲಾಯಿತು. ಅಂತ್ಯಕ್ರಿಯೆ ವೇಳೆ ಆಂಧ್ರಪ್ರದೇಶದ ಪ್ರಮುಖ ರಾಜಕಾರಣಿಗಳು, ಚಿತ್ರತಾರೆಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಎನ್‌ಟಿಆರ್ ಅವರ ಮಗ ಹರಿಕೃಷ್ಣ ಅವರ ಪುತ್ರ ಮತ್ತು ಜೂ.ಎನ್‌ಟಿಆರ್ ಅವರ ಸಹೋದರರಾಗಿರುವ ಜಾನಕಿರಾಮ್ ಅವರು ನಿನ್ನೆ ಆಂಧ್ರಪ್ರದೇಶದ ನಲ್ಗೊಂಡ ಬಳಿ ರಸ್ತೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು. ಸ್ಕಾರ್ಪಿಯೋ ವಾಹನದಲ್ಲಿ ಚಲಿಸುತ್ತಿದ್ದ ಜಾನಕಿರಾಮ್ ಅವರು ಟ್ರಾಕ್ಟರ್‌ಗೆ ಗುದ್ದಿದ್ದರು. ಈ ವೇಳೆ ಅವರ ಹೃದಯ ಮತ್ತು ತಲೆಗೆ ಬಲವಾದ ಪೆಟ್ಟುಬಿದ್ದಿತ್ತು.

ಕೂಡಲೇ ಅವರನ್ನು ಕೋದಾಡ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿತಾದರೂ, ಹೃದಯಕ್ಕೆ ಬಿದ್ದಿದ್ದ ಬಲವಾದ ಪೆಟ್ಟಿನಿಂದಾಗಿ ರಕ್ತ ಪರಿಚಲನೆಯಾಗದೇ ಅವರು ನಿಧನರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT