ಜಾನಕಿ ರಾಮ್‌ 
ದೇಶ

ಎನ್‌ಟಿಆರ್ ಮೊಮ್ಮಗ ಜಾನಕಿ ರಾಮ್‌ಗೆ ಅಂತಿಮ ನಮನ

ಟಾಲಿವುಡ್ ಚಿತ್ರ ನಿರ್ಮಾಪಕ ಹಾಗೂ ಎನ್‌ಟಿಆರ್ ಮೊಮ್ಮಗ...

ನಲಗೊಂಡ: ಟಾಲಿವುಡ್ ಚಿತ್ರ ನಿರ್ಮಾಪಕ ಹಾಗೂ ಎನ್‌ಟಿಆರ್ ಮೊಮ್ಮಗ ಜಾನಕಿರಾಮ್ ಅವರ ಅಂತಿಮ ಸಂಸ್ಕಾರ ಭಾನುವಾರ ನಡೆಯಲಿದೆ.

ಜಾನಕಿರಾವ್ ತಮ್ಮ ಟಾಟಾ ಸಫಾರಿ ಕಾರು ಚಾಲನೆ ಮಾಡಿಕೊಂಡು ಹೈದರಾಬಾದ್‌ನಿಂದ ವಿಜಯವಾಡಗೆ ಹೋಗುತ್ತಿದ್ದರು. ನಿನ್ನೆ ಸಂಜೆ ಸುಮಾರು 6.30ರ ವೇಳೆಗೆ ಕರ್ನೂಲ್ ಜಿಲ್ಲೆ,  ಮುನಾಗಲ ಹಳ್ಳಿಯ ಕೋದಾಡ್ ಪ್ರದೇಶಕ್ಕೆ ತಲುಪುತ್ತಿದ್ದಂತೆ ಎದುರಿಗೆ ಬರುತ್ತಿದ್ದ ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಜಾನಕಿರಾಮ್ ತಲೆಗೆ ಹಾಗೂ ಹೃದಯಕ್ಕೆ ತೀವ್ರವಾದ ಪೆಟ್ಟು ಬಿದ್ದಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ್ದ ಪೊಲೀಸರು ಜಾನಕಿರಾಮ್ ಅವರನ್ನು ಕೋದಾಡ್‌ನ ಖಾಸಗೀ ಆಸ್ಪತ್ರೆಯೊಂದಕ್ಕೆ ದಾಖಲಿಸಲಿದ್ದರು. ಆದರೆ ಹೃದಯದ ಭಾಗಕ್ಕೆ ತೀವ್ರವಾಗಿ ಪೆಟ್ಟು ಬಿದ್ದ ಕಾರಣ ರಕ್ತಪರಿಚಲನೆಯಾಗದೆ ನಿನ್ನೆ ರಾತ್ರಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಂತಿಮ ದರ್ಶನ ಇಂದು ಮಧ್ಯಾಹ್ನ 2 ರವರೆಗೆ ಹೈದರಾಬಾದ್‌ನಲ್ಲಿರುವ ಜಾನಕಿರಾಮ್ ಅವರ ನಿವಾಸದಲ್ಲಿ ನಡೆಯುತ್ತಿದ್ದು, ಅಂತಿಮ ಸಂಸ್ಕಾರದ ವಿಧಿವಿಧಾನ ಸಂಜೆ 4 ಗಂಟೆಯಿಂದ ಪಂಜಾಗುಟ್ಟಾದ ಹಿಂದೂ ಸ್ಮಶಾನದಲ್ಲಿ ನೆರವೇರಲಿದೆ.

ಜಾನಕಿರಾಮ್ ಸಾವಿಗೆ ಅಚ್ಚರಿ ವ್ಯಕ್ತಪಡಿಸುತ್ತಿರುವ ಟಾಲಿವುಡ್ ಚಿತ್ರರಂಗ ಹಾಗೂ ರಾಜಕೀಯ ರಂಗದವರು ಈಗಾಗಲೇ ಜಾನಕಿರಾಮ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಅಲ್ಲದೆ, ನಿನ್ನೆ ರಾತ್ರಿಯಿಂದಲೇ ಜಾನಕಿರಾಮ್ ನಿವಾಸದಲ್ಲೇ ಇದ್ದು ಅಂತಿಮ ದರ್ಶನ ಪಡೆಯುತ್ತಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT