ನಾಡಪ್ರಭು ಕೆಂಪೇಗೌಡ 
ದೇಶ

ಬನ್ನಿ ದೆಹಲಿ ಯಾತ್ರೆಗೆ, ಕೆಂಪೇಗೌಡರ ಜಾತ್ರೆ

ದೆಹಲಿಯಲ್ಲಿ ನಡೆಯಲಿದೆ ನಾಡಪ್ರಭು ಕೆಂಪೇಗೌಡರ ಜಾತ್ರೆ...

ಬೆಂಗಳೂರು: ದೆಹಲಿಯಲ್ಲಿ ನಡೆಯಲಿದೆ ನಾಡಪ್ರಭು ಕೆಂಪೇಗೌಡರ ಜಾತ್ರೆ. ಬೆಂಗಳೂರು ವಿಶ್ವವಿಖ್ಯಾತ. ಆದರೆ, ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಬಗ್ಗೆ ಕನ್ನಡಿಗರನ್ನು ಬಿಟ್ಟರೆ ಉಳಿದ ಭಾಷಿಕರಿಗೆ ಹೆಚ್ಚು ಗೊತ್ತಿಲ್ಲ.

ಈ ಹಿನ್ನೆಲೆಯಲ್ಲಿ ಆಯೋಜಿಸಲಾಗಿದೆ ನಾಡಪ್ರಭು ಕೆಂಪೇಗೌಡರ ರಾಷ್ಟ್ರೀಯ ಉತ್ಸವ'. ವಿಶ್ವ ಒಕ್ಕಲಿಗರ ಮಹಾವೇದಿಕೆ, ದೆಹಲಿ ಒಕ್ಕಲಿಗ ಗೌಡರ ಸಂಘ, ದೆಹಲಿ ಕರ್ನಾಟಕ ಸಂಘದ ಸಂಯುಕ್ತಾಶ್ರಯದಲ್ಲಿ ಡಿ.13 ಮತ್ತು 14 ರಂದು ದೆಹಲಿಯ ಲಕ್ಷ್ಮೀಬಾಯಿ ಮಾರ್ಗ್‌ನಲ್ಲಿರುವ ತಾಲ್‌ಕೋಟೋರ ಕ್ರೀಡಾಂಗಣದಲ್ಲಿ ಉತ್ಸವ ನಡೆಯಲಿದ್ದು, 'ಬನ್ನಿ ದೆಹಲಿ ಯಾತ್ರೆಗೆ-ಕೆಂಪೇಗೌಡರ ಜಾತ್ರೆಗೆ' ಎಂದು ಆಯೋಜಕರು ಕರೆ ನೀಡಿದ್ದಾರೆ.

ಏನಿದರ ಉದ್ದೇಶ?


ಕೆಂಪೇಗೌಡರ ಆದರ್ಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸಬೇಕೆಂಬುದು ಕಾರ್ಯಕ್ರಮದ ಪ್ರಧಾನ ಆಶಯ. ಇದರ ಜತೆಗೆ, ಐದು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ವೇದಿಕೆ ಪ್ರಧಾನ ಕಾರ್ಯದರ್ಶಿ ಕನ್ನಡವೇ ಸತ್ಯ ರಂಗಣ್ಣ ತಿಳಿಸಿದ್ದಾರೆ.

ಸಾನಿಧ್ಯವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರು, ಗದುಗಿನ ಡಂಬಳ ಮಠದ ತೋಂಟದಾರ್ಯ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಹಾಗೂ ನಂಜಾವಧೂತ ಸ್ವಾಮೀಜಿಗಳು ವಹಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದ ಗೌಡ, ವೆಂಕಯ್ಯ ನಾಯ್ಜು, ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್, ರಾಜ್ಯದ ಸಚಿವರಾದ ಡಿ.ಕೆ.ಶಿವಕುಮಾರ್, ಅಂಬರೀಷ್. ರಾಮಲಿಂಗಾ ರೆಡ್ಡಿ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಸಮ್ಮಾನ್: ಕಾರ್ಯಕ್ರಮದಲ್ಲಿ ಕೇಂದ್ರದ ಮಾಡಿ ಸಚಿವರಾದ ಅಜಿತ್ ಸಿಂಗ್ ಹಾಗೂ ಸರೋಜಿನಿ ಮಹಿಷಿ ಅವರಿಗೆ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಸಮ್ಮಾನ್ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಐದು ನಿರ್ಣಯಗಳು

  • ಬೆಂಗಳೂರು ನಗರ ಜಿಲ್ಲೆಗೆ ಕೆಂಪೇಗೌಡ ಜಿಲ್ಲೆ ಎಂದು ಹೆಸರಿಡುವಂತೆ ಒತ್ತಾಯಿಸುವುದು.
  • ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕೆಂಪೇಗೌಡ ವಿವಿ ಎಂದು ನಾಮಕರಣ ಮಾಡುವುದು
  • ವಿವಿಯಲ್ಲಿರುವ ಕೆಂಪೇಗೌಡ ಅಧ್ಯಯನ ಪೀಠಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಆಗ್ರಹಿಸುವುದು
  • ಮೈಸೂರು ದಸರಾ ರೀತಿಯಲ್ಲಿ ಕೆಂಪೇಗೌಡ ಜಯಂತ್ಯುತ್ಸವವನ್ನು ನಾಡಿನ ಸಾಂಸ್ಕೃತಿಕ ಹಬ್ಬವಾಗಿ ಆಚರಿಸುವುದು
  • ಅಶ್ವಾರೂಢ ಕೆಂಪೇಗೌಡರ ಕಂಟಿನ ಪ್ರತಿಮೆ ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT