ಹೆದರಿ ಬೋರಲು ಮಲಗಿದ ವ್ಯಕ್ತಿಯ ಮೇಲೆ ಕುಳಿದ ಸಿಂಹ 
ದೇಶ

ಸಿಂಹದ ಬಾಯಿಗೆ ಆಹಾರವಾಗಲು ಹೊರಟ!

ಓಡಿ ಬಂದ ಸಿಂಹಿಣಿಯೊಂದು ಆತನ ಕಾಲು ಹಿಡಿದೆಳೆದು ಹೊಂಡದೊಳಗೆ ಬೀಳಿಸಿದೆ...

ಬಾರ್ಸಿಲೋನಿಯಾ: ಬಯಸಿ ಬಯಸಿ ಸಾವಿನ ದವಡೆಗೆ ಸಿಲುಕುವುದು ಅಂದರೆ ಇದೇ ಇರಬೇಕು.

ಸ್ಪೇನ್‌ನಲ್ಲೊಬ್ಬ ಇಂಥ ದುಸ್ಸಾಹಸ ಮಾಡಿದ್ದಾನೆ. ಸುಮ್ಮನೆ ಇರುವುದು ಬಿಟ್ಟು ಸಿಂಹ ಇರುವ ಆವರಣಕ್ಕೆ ಹಾಸಿ ಈಗ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ದೆಹಲಿ ಝೂನಲ್ಲಿ ಹುಲಿ ಬಾಯಿಗೆ ಸಿಕ್ಕು ಮೃತಪಟ್ಟ ಯುವಕನ ಘಟನೆಯನ್ನು ನೆನಪಿಸುವಂತಿದೆ ಈ ಪ್ರಸಂಗ.

ಇದಾಗಿದ್ದು ಬಾರ್ಸಿಲೋನಿಯಾ ಪ್ರಾಣಿ ಸಂಗ್ರಹಾಲಯದಲ್ಲಿ. ಇಲ್ಲಿ ಮಿಲಿಟರಿ ಸಮವಸ್ತ್ರದ ವೇಷಧಾರಿಯೊಬ್ಬ ಸಿಂಹದ ಆವರಣದೊಳಗೆ ಹಾರಿದ್ದಾನೆ. ಬಳಿಕ ಮತ್ತೆ ಬೇಲಿ ಹತ್ತಲು ಪ್ರಯತ್ನಿಸಿದ್ದಾನೆ.

ಅಷ್ಟರಲ್ಲಾಗಲೇ ಓಡಿ ಬಂದ ಸಿಂಹಿಣಿಯೊಂದು ಆತನ ಕಾಲು ಹಿಡಿದೆಳೆದು ಹೊಂಡದೊಳಗೆ ಬೀಳಿಸಿದೆ. ತಕ್ಷಣ ಉಳಿದೆರಡು ಸಿಂಹಗಳೂ ಸೇರಿಕೊಂಡಿವೆ. ಮೂರು ಸಿಂಹಗಳ ದಾಳಿಗೆ ಈತ ತೀವ್ರವಾಗಿ ಗಾಯಗೊಂಡಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಪ್ರಾಣಿಸಂಗ್ರಹಾಲಯದ ಸಿಬ್ಬಂದಿ ರಕ್ಷಣೆಗೆ ತೀವ್ರ ಪ್ರಯತ್ನಪಟ್ಟಿದ್ದಾರೆ. ನಂತರ ಸಿಂಹಗಳ ಮೇಲೆ ನೀರು ಹಾಯಿಸಿ ಹೆದರಿಸಲು ಪ್ರಯತ್ನಿಸಿದ್ದಾರೆ.

ಸುಮಾರು 30 ನಿಮಿಷ ಬಳಿಕ ಆತನನ್ನು ಅವುಗಳಿಂದ ರಕ್ಷಿಸಿದ್ದು, ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT