ಸಾಂದರ್ಭಿಕ ಚಿತ್ರ 
ದೇಶ

ಇನ್ನು ಮುಂದೆ ಆತ್ಮಹತ್ಯೆ ಅಪರಾಧವಲ್ಲ

ಭಾರತೀಯ ದಂಡ ಸಂಹಿತೆಯಲ್ಲಿ ತಿದ್ದುಪಡಿ ತರಲು ಕೇಂದ್ರ ಸರ್ಕಾರ...

ನವದೆಹಲಿ: ಭಾರತೀಯ ದಂಡ ಸಂಹಿತೆಯಲ್ಲಿ ತಿದ್ದುಪಡಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಅಪರಾಧ ಪ್ರಕರಣಗಳ ಪಟ್ಟಿಯಲ್ಲಿರುವ ಆತ್ಮಹತ್ಯೆಯನ್ನು ತೆಗೆದುಹಾಕಲು ನಿರ್ಧರಿಸಿದೆ.

ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಮುಂದಾಗುವವರನ್ನು ಶಿಕ್ಷಿಸದೆ, ವೈದ್ಯಕೀಯ ನೆರವು ನೀಡಿ ಜೀವನೋಲ್ಲಾಸ ಮೂಡಿಸುವ ಉದ್ದೇಶದಿಂದ ಆತ್ಮಹತ್ಯೆ ಯತ್ನವನ್ನು ಅಪರಾಧ ಎಂಬುದನ್ನು ತೆಗೆದು ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಇಂದು ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ದೇಶದ 18 ರಾಜ್ಯಗಳು ಹಾಗೂ 4 ಕೇಂದ್ರಾಡಳಿತಗಳು ಸಮ್ಮತಿ ನೀಡಿದ್ದು, ಇನ್ನು ಮುಂದೆ 309 ಸೆಕ್ಷನ್‌ಗೆ ಆತ್ಮಹತ್ಯೆ ಬರುವುದಿಲ್ಲ. ಆತ್ಮಹತ್ಯೆ ಪ್ರಯತ್ನ ಮಾಡಿ ಬದುಕುಳಿದ ವ್ಯಕ್ತಿಯ ವಿರುದ್ಧ ದೂರು ಸ್ವೀಕರಿಸುವಂತಿಲ್ಲ. ವಿಚಾರಣೆ ಅಥವಾ ತನಿಖೆ ನಡೆಸುವಂತಿಲ್ಲ ಎಂಬ ನಿಯಮವನ್ನು ಆತ್ಮಹತ್ಯಾ ಪ್ರಕರಣದಲ್ಲಿ ವಿಧಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 309ನ್ನು ಅಪರಾಧ ಪಟ್ಟಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ. ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿ, ಬದುಕುಳಿದರೆ ಆತನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 309ರಡಿ ಪ್ರಕರಣ ದಾಖಲಿಸಿ, ಒಂದು ವರ್ಷ ಜೈಲು ಹಾಗೂ ದಂಡ ವಿಧಿಸಲಾಗುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT