ದೇಶ

ಯಾಕುಬ್ ಮೆಮನ್ ಗಲ್ಲು ಶಿಕ್ಷೆ ತಡೆ ಅವಧಿ ವಿಸ್ತರಣೆ

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕುಬ್ ಮೆಮನ್ ಗಲ್ಲು ಶಿಕ್ಷೆಗೆ ಹೇರಲಾಗಿದ್ದ...

ನವದೆಹಲಿ(ಪಿಟಿಐ): 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕುಬ್ ಮೆಮನ್ ಗಲ್ಲು ಶಿಕ್ಷೆಗೆ ಹೇರಲಾಗಿದ್ದ ತಡೆ ಅವಧಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ.

1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನೀಡಲಾಗಿರುವ ಗಲ್ಲು ಶಿಕ್ಷೆ ಕುರಿತು ಪುನರ್ಪರಿಶೀಲನೆ ಮಾಡುವಂತೆ ಕೋರಿ ಯಾಕುಬ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದನು. ಇದಕ್ಕೆ ಪ್ರತಿಕ್ರಿಯಿಸುವಂತೆ ಮಹಾರಾಷ್ಟ್ರ ವಿಶೇಷ ಕಾರ್ಯ ಪಡೆ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ.

ಯಾಕುಬ್ ಮೆಮನ್‌ಗೆ ವಿಶೇಷ ಟಾಡಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. 2013ರಲ್ಲಿ ಇದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು.

ಯಾಕುಬ್ ಮೆಮನ್ ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದರು. ಮಹಾರಾಷ್ಟ್ರ ಸರ್ಕಾರ ನೀಡಿದ ವರದಿಯ ಹಿನ್ನಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು.

ಅಪೆಕ್ಸ್ ಕೋರ್ಟ್ ನೀಡಿದ್ದ ಮರಣದಂಡನೆಯ ವಿರುದ್ಧ, ಯಾಕುಬ್ ಅಬ್ದುಲ್ ರಜಾಕ್ ಮೆಮನ್ ಸಲ್ಲಿಸಿದ್ದ ಮೇಲ್ಮನವಿಯನ್ನು, ಸ್ವೀಕರಿಸಿದ್ದ ಸುಪ್ರೀಂ ಕೋರ್ಟ್, ಆತನಿಗೆ ನೀಡಿರುವ ಶಿಕ್ಷೆಗೆ ತಡೆ ಒಡ್ಡಿತ್ತು.

1993ರ ಮುಂಬೈ ಸರಣಿ ಬಾಂಬ್ ಸ್ಫೋಟದಲ್ಲಿ 250 ಜನರು ಸಾವನ್ನಪ್ಪಿದ್ದರು. ಸುಮಾರು 700 ಜನ ಗಾಯಗೊಂಡಿದ್ದರು. ಯಾಕುಬ್ ಮೆಮನ್ ಭೂಗತ ಪಾತಕಿ ಟೈಗರ್ ಮೆಮನ್ ಸಹೋದರ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT