ಆಗ್ರಾದಲ್ಲಿ ನಡೆದ ಮತಾಂತರದ ದೃಶ್ಯ(ಸಂಗ್ರಹ ಚಿತ್ರ) 
ದೇಶ

ಆಗ್ರಾ ಮತಾಂತರ ಬಳಿಕ ಮತ್ತೊಂದು ಮತಾಂತರಕ್ಕೆ ವೇದಿಕೆ ಸಜ್ಜು

ಅಲಿಗಢ(ಉತ್ತರಪ್ರದೇಶ): ಆಗ್ರಾದಲ್ಲಿ ನಡೆದ ಮತಾಂತರ ಬಿಸಿ ಲೋಕಸಭೆಯಲ್ಲಿ ಪ್ರಜ್ವಲಿಸುತ್ತಿದ್ದು, ಇದೀಗ ಮತ್ತೊಂದು ಮತಾಂತರಕ್ಕೆ ವೇದಿಕೆ ಸಜ್ಜಾಗಿದೆ.

ಡಿಸೆಂಬರ್ 25ರಂದು ಸಾಮೂಹಿಕ ಮತಾಂತರಕ್ಕೆ ಯೋಜನೆ ಹಮ್ಮಿಕೊಂಡಿರುವುದಾಗಿ ಹಿಂದೂ ಜಾಗರಣ ಸಮಿತಿ ಘೋಷಿಸಿದೆ. ಈ ನಿರ್ಧಾರವನ್ನು ಅಲಿಗಢ ಕ್ಷೇತ್ರದ ಬಿಜೆಪಿ ಸಂಸದ ಸತೀಶ್ ಗೌತಮ್ ಅವರು ಸ್ವಾಗತಿಸಿರುವುದು ಅಚ್ಚರಿ ಮೂಡಿಸಿದೆ.

ಕ್ರಿಸ್‌ಮಸ್ ಹಬ್ಬದಂದು ಮಹೇಶ್ವರಿ ಇಂಟರ್ ಕಾಲೇಜಿನಲ್ಲಿ ಭವ್ಯ ಸಮಾರಂಭದಲ್ಲಿ ಹಿಂದೂ ಧರ್ಮವನ್ನು ತೊರೆದಿದ್ದ ಸಾಕಷ್ಟು ಸಂಖ್ಯೆಯ ಜನರನ್ನು ಮತ್ತೆ ಹಿಂದುತ್ವಕ್ಕೆ ಮರು ಮತಾಂತರಗೊಳಿಸಲಾಗುವುದು ಎಂದು ಹಿಂದೂ ಜಾಗರಣ ಸಮಿತಿಯ ರಾಜೇಶ್ವರ್ ಸಿಂಗ್ ಕಳೆದ ಸಂಜೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಮೊದಲು ದಾರಿ ತಪ್ಪಿ ಹಾಗೂ ಪ್ರಲೋಭನಕ್ಕೆ ಒಳಗಾಗಿ ಹಿಂದೂ ಧರ್ಮವನ್ನು ತೊರೆದಿದ್ದವರು ಮತ್ತೆ ಸ್ವಧರ್ಮಕ್ಕೆ ಮರಳುತ್ತಿರುವುದಾಗಿದ್ದು, ಇದು ಮತಾಂತರವಲ್ಲ ಎಂದು ರಾಜೇಶ್ವರ್ ಸಿಂಗ್ ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ ಪಶ್ಚಿಮ ಉತ್ತರಪ್ರದೇಶದ ಹಲವು ಜಿಲ್ಲೆಗಳಲ್ಲಿಯೂ ಸಾಕಷ್ಟು ಜನರು ಮರು ಮತಾಂತರಗೊಳ್ಳಲಿದ್ದಾರೆ ಎಂದು ಬಹಿರಂಗಗೊಳಿಸಿದ್ದಾರೆ.

ಜನರು ಸ್ವಇಚ್ಛೆಯಿಂದ ಹಾಗೂ ಶಾಂತಿಯುತವಾಗಿ ಹಿಂದುತ್ವವನ್ನು ಸ್ವೀಕರಿಸಲು ಸಿದ್ಧರಿದ್ದರೇ ಅವರು ತಮ್ಮ ಆಯ್ಕೆ ಮಾಡಿಕೊಳ್ಳಲು ತಮ್ಮ ಹಕ್ಕುಗಳ ಅಡಿಯಲ್ಲಿ ಸ್ವತಂತ್ರರು ಎಂದು ಗೌತಮ್‌ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT