ಸಾಕ್ಷಿ ಮಹಾರಾಜ್ 
ದೇಶ

ಮಹಾತ್ಮ ಗಾಂಧಿ ಹಂತಕ ಗೋಡ್ಸೆ ಓರ್ವ ದೇಶಭಕ್ತ: ಬಿಜೆಪಿ ಸಂಸದ

ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಓರ್ವ ಮಹಾನ್ ದೇಶಭಕ್ತ ಎಂದು ಹೇಳುವ ಮೂಲಕ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೊಸದೊಂದು ವಿವಾದವನ್ನು ಹುಟ್ಟು ಹಾಕಿದ್ದಾರೆ.

ದೇಶ ವಿಭಜನೆಯ ಸಂಕಟ ನಾಥುರಾಮ್ ಗೋಡ್ಸೆರನ್ನು ಆವರಿತ್ತು. ಮಹಾಜನ್‌ರ ಗೋಡ್ಸೆ ಅಪ್ಪಟ ದೇಶ ಭಕ್ತ ಎನ್ನುವ ಹೇಳಿಕೆ ಇದೀಗ ವಿವಾದಕ್ಕೆ ಗುರಿಯಾಗಿದ್ದು ಬಿಜೆಪಿ ಮತ್ತೊಮ್ಮೆ ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗಿದೆ.

ಸಾಕ್ಷಿ ಮಹಾರಾಜ್ ಹೇಳಿಕೆ ವಿರುದ್ಧ ಕಾಂಗ್ರೆಸ್ ರಾಜ್ಯಸಭಾ ಸಂಸದ ಹುಸೈನ್ ದಲ್ವಾಯ್ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ಸಾಕ್ಷಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತಮ್ಮ ಹೇಳಿಕೆ ವಿರುದ್ಧ ಪ್ರತಿ ಪಕ್ಷಗಳು ಹರಿಹಾಯುತ್ತಿದ್ದಂತೆ ಎಚ್ಚೆತ್ತ ಸಾಕ್ಷಿ ಮಹಾರಾಜ್, ತಾವು ತಪ್ಪಾಗಿ ಹೇಳಿಕೆ ನೀಡಿದ್ದೇನೆ ಎನ್ನುವ ಮೂಲಕ ತಮ್ಮ ಹೇಳಿಕೆಯಿಂದ ನುಣುಚಿಕೊಳ್ಳಲು ಯತ್ನಿಸಿದ್ದಾರೆ.

ಇನ್ನು ಮಹಾರಾಜ್‌ರ ಹೇಳಿಕೆ ಹೊರಬರುತ್ತಿದ್ದಂತೆ ಸಾಕ್ಷಿ ಮಹಾರಾಜ್‌ರ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಸಂಸದರ ಹೇಳಿಕೆ ಅವರ ವೈಯಕ್ತಿಕವಾಗಿದ್ದು ಅವರ ಹೇಳಿಕೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ. ಅಲ್ಲದೆ ಮಹಾತ್ಮಾ ಗಾಂಧಿ ಹಂತಕರನ್ನು ಸರ್ಕಾರ ಎಂದೂ ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದರು ಸಾಲು ಸಾಲು ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT