ಮಮತಾ ಬ್ಯಾನರ್ಜಿ 
ದೇಶ

ಸಚಿವ ಮದನ್ ಮಿತ್ರ ಬಂಧನ: 'ರಾಜಕೀಯ ಪಿತೂರಿ' ಎಂದ ಸಿಎಂ ಮಮತಾ

ಕೊಲ್ಕಾತ್ತಾ: ಬಹುಕೋಟಿ ಶಾರದಾ ಚಿಟ್‌ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಮುಖಂಡ ಮದನ್ ಮಿತ್ರರನ್ನು ಸಿಬಿಐ ಪೊಲೀಸರು ಬಂಧಿಸಿರುವುದರ ಹಿಂದೆ ರಾಜಕೀಯ ಪಿತೂರಿ ಅಡಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಸಚಿವ ಮದನ್ ಮಿತ್ರರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕೊಲ್ಕಾತ್ತಾದಲ್ಲಿ ಸುದ್ಧಿಗೋಷ್ಠಿ ನಡೆಸಿದ ಸಿಎಂ ಮಮತಾ ಬ್ಯಾನರ್ಜಿ ಅವರು, ರಾಜಕೀಯ ಪಿತೂರಿಯಿಂದ ಮದನ್ ಮಿತ್ರರನ್ನು ಬಂಧಿಸಲಾಗಿದೆ. ಮಿತ್ರರ ಬಂಧನ ಅಸಂವಿಧಾನಕವಾಗಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಬಿಜೆಪಿ ವಿರುದ್ಧ ಅಧಿಕಾರ ದುರಪಯೋಗ ಆರೋಪ ಮಾಡಿದ ಮಮತಾ ಬ್ಯಾನರ್ಜಿ ಅವರು, ಸಂವಿಧಾನಿಕ ಸಂಸ್ಥೆಗಳ ಕಾರ್ಯ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿನಾಃ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕರನ್ನು ಮಾತ್ರ ಬಂಧಿಸಲಾಗುತ್ತಿದೆ. ಇದರೊಂದಿಗೆ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಗೂಂಡಾಗಿರಿ ನಡೆಸುತ್ತಿದ್ದು, ಜಾತ್ಯತೀತ ಶಕ್ತಿಗಳನ್ನು ಹತ್ತಿಕುವ ಯತ್ನ ನಡೆಸುತ್ತಿದೆ. ಆದರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಪಕ್ಷಗಳ ಮುಖಂಡರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಮದನ್ ಮಿತ್ರರಿಗೆ ನವೆಂಬರ್‌ನಲ್ಲಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಅನಾರೋಗ್ಯದ ನೆಪ ಹೇಳಿಕೊಂಡು ವಿಚಾರಣೆಗೆ ಗೈರಾಗುತ್ತಿದ್ದರು. ಹೀಗಾಗಿ ಮದನ್ ಮಿತ್ರರನ್ನು ಇಂದು ಸಂಜೆ ಕ್ರಿಮಿನಲ್ ಸಂಚು, ವಂಚನೆ ಆರೋಪದಡಿ ಮಿತ್ರರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT