ಜಮ್ಮುಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ 
ದೇಶ

ಉಗ್ರರ ಅಟ್ಟಹಾಸ: ಕಾಶ್ಮೀರದಲ್ಲಿ ಸರ್‌ಪಂಚ್ ಅಪಹರಣ, ಹತ್ಯೆ

ಉಗ್ರರ ಗುಂಪೊಂದು ಅವರನ್ನು ತಮ್ಮ ಕಾರಿನಲ್ಲಿ ಅಪಹರಿಸಿ ಗುಂಡಿಕ್ಕಿ ಹತ್ಯೆ ಮಾಡಿ, ಪರಾರಿಯಾಗಿದೆ...

ಸೊಪೋರ್: ಜಮ್ಮುಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಳೆದ ರಾತ್ರಿ ಉಗ್ರರ ಗುಂಪೊಂದು ಸೊಪೊರ್ ಪ್ರದೇಶದಲ್ಲಿ ಸರ್‌ಪಂಚ್‌ವೊಬ್ಬರನ್ನು ಅಪಹರಿಸಿ, ಹತ್ಯೆ ಮಾಡಿದ್ದಾರೆ. 63 ವರ್ಷದ ಸರ್‌ಪಂಚ್‌ಅವರನ್ನು ಗುಲಾಮ್ ಮೊಹಮ್ಮದ್ ಎಂದು ಗುರುತಿಸಲಾಗಿದೆ.

ಜಮ್ಮುಕಾಶ್ಮೀರದ ಸೊಪೋರ್ ಜಿಲ್ಲೆಯ ನ್ಯಾಷನಲ್ ಕಾನ್ಫರೆನ್ಸ್‌ನ ಸರ್‌ಪಂಚ್ ಗುಲಾಮ್ ಮೊಹಮ್ಮದ್ ಅವರ ಮನೆಗೆ ನುಗ್ಗಿದ ಉಗ್ರರ ಗುಂಪೊಂದು, ಅವರನ್ನು ತಮ್ಮ ಕಾರಿನಲ್ಲಿ ಅಪಹರಿಸಿತ್ತು. ಅಪಹರಣದ ಬಳಿಕ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿ, ಪರಾರಿಯಾಗಿದೆ.

ಈ ಘಟನೆಯಿಂದಾಗಿ ಜಮ್ಮುಕಾಶ್ಮೀರದಾದ್ಯಂತ ತಲ್ಲಣ ಮೂಡಿಸಿದೆ. ಪೊಲೀಸರು ಇದೀಗ ಪರಿಶೀಲನೆ ಕೈಗೊಂಡಿದ್ದು, ಸೊಪೋರ್ ಪ್ರದೇಶದಾದ್ಯಂತ ಭಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.

ಈ ಕೃತ್ಯಕ್ಕೆ ಇನ್ನೂ ಯಾವುದೇ ಸಂಘಟನೆಗಳು ಜವಾಬ್ದಾರಿ ಹೊತ್ತುಕೊಂಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT