ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತ ಬಿ.ಇ.ಗೋವಿಂದರಾಜು 
ದೇಶ

ರೈಲಿಂದ ಬಿದ್ದು ಆಯುಕ್ತ ಸಾವು

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಪೂರ್ವ ವಲಯದ ಜಂಟಿ...

ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತ ಬಿ.ಇ.ಗೋವಿಂದರಾಜು ಮೃತ ಪಟ್ಟಿದ್ದಾರೆ. ಬೆಂಗಳೂರು-ಶಿವಮೊಗ್ಗ ರೈಲಿನಲ್ಲಿ ಶುಕ್ರವಾರ ಪ್ರಯಾಣಿಸುತ್ತಿದ್ದ ಗೋವಿಂದರಾಜು ಹುಟ್ಟೂರಾದ ತುಮಕೂರಿಗೆ ತೆರಳುತ್ತಿದ್ದರು.

ಶನಿವಾರ ಬೆಳಿಗ್ಗೆ ಅವರ ಶವ ತುಮಕೂರಿನ ಹೆಗಡೆ ಕಾಲೋನಿಯ ಸಿದ್ದಾರ್ಥ ಕಾಲೇಜಿನ ರೈಲ್ವೆ ಮಾರ್ಗದ ಬಳಿ ಪತ್ತೆಯಾಗಿದೆ. ಬೆಳಗ್ಗೆ ಸ್ಥಳೀಯರು ಶವವನ್ನು ಪತ್ತೆಹಚ್ಚಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರೈಲ್ವೆ ಪೊಲೀಸರು ಮೊದಲಿಗೆ ಅಪರಿಚಿತ ಶವ ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ತುಮಕೂರು ಜಿಲ್ಲಾಸ್ಪತ್ರೆಗೆ ಶವ ಕೊಂಡೊಯ್ದ ನಂತರ ಮೃತರ ಜೈಬಿನಲ್ಲಿ ದೊರೆತೆ ಗುರುತಿನ ಚೀಟಿಯಿಂದಾಗಿ ಬಿಬಿಎಂಪಿ ಅಧಿಕಾರಿ ಎಂದು ತಿಳಿದುಬಂದಿದೆ.

ಸ್ಥಳಕ್ಕಾಗಮಿಸಿದ ಕುಟುಂಬ ಸದಸ್ಯರು ಶವ ಪಡೆದಿದ್ದಾರೆ. ಮೃತರ ತಲೆಯ ಹಿಂಭಾಗ ಗಂಭೀರ ಗಾಯವಾಗಿದ್ದು, ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ಗೋವಿಂದರಾಜು ತಾವರೆಕೆರೆ ನಿವಾಸಿಯಾಗಿದ್ದರು. ಬಿಬಿಎಂಪಿಯ ಪೂರ್ವ ವಲಯದಲ್ಲಿ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಕಳೆದ ಒಂದು ತಿಂಗಳಿಂದ ರಜೆಯಲ್ಲಿದ್ದರು.

ಮೊದಲಿಗೆ ಎಂಪಿಎಂಸಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, 2008-09ರಲ್ಲಿ ಎರವಲು ಸೇವೆ ಮೂಲಕ ಬಿಬಿಎಂಪಿಯ ಆರೋಗ್ಯ ವಿಭಾಗದ ಜಂಟಿ ಆಯುಕ್ತರಾಗಿ ನಿಯೋಜನೆಗೊಂಡಿದ್ದರು.

ಕೆಲಕಾಲ ಜಾಹೀರಾತು ವಿಭಾಗದಲ್ಲಿ ಕಾರ್ಯನಿರ್ವಹಿಸಿ ಮಾತೃ ಇಲಾಖೆಗೆ ವಾಪಸಾಗಿದ್ದರು. ಮತ್ತೊಮ್ಮೆ ಜಾಹೀರಾತು ವಿಭಾಗದಲ್ಲಿ ಹಾಗೂ ಕೌನ್ಸಿಲ್ ಕಾರ್ಯದರ್ಶಿಯಾಗಿ ನೇಮಕಗೊಂಡು, ಆರ್.ಆರ್.ನಗರ ಹಾಗೂ ಪೂರ್ವವಲಯದ ಹೊಣೆ ಹೊತ್ತುಕೊಂಡಿದ್ದರು. ಈ ವೇಳೆ ನಗರದಲ್ಲಿ ಹೆಚ್ಚಿದ್ದ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಮುಖ್ಯ ಪಾತ್ರವಹಿಸಿದ್ದರು.

ಅನಾರೋಗ್ಯ: ಕಳೆದ ಕೆಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೋವಿಂದರಾಜು, ಅಪೋಲೋ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕೆಲಸದ ಒತ್ತಡಕ್ಕೂ ಸಿಲುಕಿದ್ದ ಅವರ ಅನಿರೀಕ್ಷಿತ ಸಾವು ಅನುಮಾನಕ್ಕೆ ಮಾಡಿಕೊಟ್ಟಿದೆ. ಮೃತರು ಒಬ್ಬ ಮಗ, ಮಗಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT