ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತ ಬಿ.ಇ.ಗೋವಿಂದರಾಜು 
ದೇಶ

ರೈಲಿಂದ ಬಿದ್ದು ಆಯುಕ್ತ ಸಾವು

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಪೂರ್ವ ವಲಯದ ಜಂಟಿ...

ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತ ಬಿ.ಇ.ಗೋವಿಂದರಾಜು ಮೃತ ಪಟ್ಟಿದ್ದಾರೆ. ಬೆಂಗಳೂರು-ಶಿವಮೊಗ್ಗ ರೈಲಿನಲ್ಲಿ ಶುಕ್ರವಾರ ಪ್ರಯಾಣಿಸುತ್ತಿದ್ದ ಗೋವಿಂದರಾಜು ಹುಟ್ಟೂರಾದ ತುಮಕೂರಿಗೆ ತೆರಳುತ್ತಿದ್ದರು.

ಶನಿವಾರ ಬೆಳಿಗ್ಗೆ ಅವರ ಶವ ತುಮಕೂರಿನ ಹೆಗಡೆ ಕಾಲೋನಿಯ ಸಿದ್ದಾರ್ಥ ಕಾಲೇಜಿನ ರೈಲ್ವೆ ಮಾರ್ಗದ ಬಳಿ ಪತ್ತೆಯಾಗಿದೆ. ಬೆಳಗ್ಗೆ ಸ್ಥಳೀಯರು ಶವವನ್ನು ಪತ್ತೆಹಚ್ಚಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರೈಲ್ವೆ ಪೊಲೀಸರು ಮೊದಲಿಗೆ ಅಪರಿಚಿತ ಶವ ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ತುಮಕೂರು ಜಿಲ್ಲಾಸ್ಪತ್ರೆಗೆ ಶವ ಕೊಂಡೊಯ್ದ ನಂತರ ಮೃತರ ಜೈಬಿನಲ್ಲಿ ದೊರೆತೆ ಗುರುತಿನ ಚೀಟಿಯಿಂದಾಗಿ ಬಿಬಿಎಂಪಿ ಅಧಿಕಾರಿ ಎಂದು ತಿಳಿದುಬಂದಿದೆ.

ಸ್ಥಳಕ್ಕಾಗಮಿಸಿದ ಕುಟುಂಬ ಸದಸ್ಯರು ಶವ ಪಡೆದಿದ್ದಾರೆ. ಮೃತರ ತಲೆಯ ಹಿಂಭಾಗ ಗಂಭೀರ ಗಾಯವಾಗಿದ್ದು, ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ಗೋವಿಂದರಾಜು ತಾವರೆಕೆರೆ ನಿವಾಸಿಯಾಗಿದ್ದರು. ಬಿಬಿಎಂಪಿಯ ಪೂರ್ವ ವಲಯದಲ್ಲಿ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಕಳೆದ ಒಂದು ತಿಂಗಳಿಂದ ರಜೆಯಲ್ಲಿದ್ದರು.

ಮೊದಲಿಗೆ ಎಂಪಿಎಂಸಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, 2008-09ರಲ್ಲಿ ಎರವಲು ಸೇವೆ ಮೂಲಕ ಬಿಬಿಎಂಪಿಯ ಆರೋಗ್ಯ ವಿಭಾಗದ ಜಂಟಿ ಆಯುಕ್ತರಾಗಿ ನಿಯೋಜನೆಗೊಂಡಿದ್ದರು.

ಕೆಲಕಾಲ ಜಾಹೀರಾತು ವಿಭಾಗದಲ್ಲಿ ಕಾರ್ಯನಿರ್ವಹಿಸಿ ಮಾತೃ ಇಲಾಖೆಗೆ ವಾಪಸಾಗಿದ್ದರು. ಮತ್ತೊಮ್ಮೆ ಜಾಹೀರಾತು ವಿಭಾಗದಲ್ಲಿ ಹಾಗೂ ಕೌನ್ಸಿಲ್ ಕಾರ್ಯದರ್ಶಿಯಾಗಿ ನೇಮಕಗೊಂಡು, ಆರ್.ಆರ್.ನಗರ ಹಾಗೂ ಪೂರ್ವವಲಯದ ಹೊಣೆ ಹೊತ್ತುಕೊಂಡಿದ್ದರು. ಈ ವೇಳೆ ನಗರದಲ್ಲಿ ಹೆಚ್ಚಿದ್ದ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಮುಖ್ಯ ಪಾತ್ರವಹಿಸಿದ್ದರು.

ಅನಾರೋಗ್ಯ: ಕಳೆದ ಕೆಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೋವಿಂದರಾಜು, ಅಪೋಲೋ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕೆಲಸದ ಒತ್ತಡಕ್ಕೂ ಸಿಲುಕಿದ್ದ ಅವರ ಅನಿರೀಕ್ಷಿತ ಸಾವು ಅನುಮಾನಕ್ಕೆ ಮಾಡಿಕೊಟ್ಟಿದೆ. ಮೃತರು ಒಬ್ಬ ಮಗ, ಮಗಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!