ಬೆಂಗಳೂರು ವಿಶ್ವವಿದ್ಯಾಲಯ 
ದೇಶ

ಬಾರ್‌ನಲ್ಲಿ ಉತ್ತರಪತ್ರಿಕೆ: ಉಪನ್ಯಾಸಕ ಸೆರೆ

ಬೆಂಗಳೂರು ವಿವಿ ಪದವಿ ಪರೀಕ್ಷೆಯ ಉತ್ತರ ಪತ್ರಿಕೆಗಳು...

ಬೆಂಗಳೂರು: ಬೆಂಗಳೂರು ವಿವಿ ಪದವಿ ಪರೀಕ್ಷೆಯ ಉತ್ತರ ಪತ್ರಿಕೆಗಳು ಮಾರತ್ ಹಳ್ಳಿ ತ್ರಿವೇಣಿ ಬಾರ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣ ಸಂಬಂಧ ಸಹಾಯಕ ಉಪನ್ಯಾಸಕನನ್ನು ಎಚ್‌ಎಲ್ ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಉಪನ್ಯಾಸಕ ಶಿವಕುಮಾರ್ (38) ಬಂಧಿತ.

ಕಾಡುಬಿಸನಹಳ್ಳಿಯಲ್ಲಿರುವ ನ್ಯೂ ಹಾರಿಜನ್ ಕಾಲೇಜು ಪ್ರಾಂಶುಪಾಲರ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆಯ ಖಾಲಿ ಉತ್ತರ ಪತ್ರಿಕೆಗಳನ್ನು ಶಿವಕುಮಾರ್ ಬಾರ್‌ನಲ್ಲಿ ಬಿಸಾಡಿದ್ದ. ಜೀವನಬಿಮಾನಗರದ ಕೆಪಿಡಬ್ಲ್ಯೂಡಿ ವಸತಿಗೃಹ ನಿವಾಸಿ ಶಿವಕುಮಾರ್‌ನನ್ನು ನ.7 ರಿಂದ ನ.26ರವರೆಗೆ ನಡೆದ ಪದವಿ ಪರೀಕ್ಷೆ ವೇಳೆ ನ್ಯೂ ಹಾರಿಜಾನ್ ಕಾಲೇಜಿಗೆ ಸಿಟ್ಟಿಂಗ್ ಆಫೀಸರ್ ಆಗಿ ವಿವಿ ನೇಮಿಸಿತ್ತು.

ಕರ್ತವ್ಯ ನಿರ್ವಹಣೆ ವೇಳೆ ಕಾಲೇಜಿನ ಪ್ರಾಂಶುಪಾಲರ ಜತೆ ಉಂಟಾದ ಜಗಳದಲ್ಲಿ ಶಿವಕುಮಾರ್ ದ್ವೇಷ ಕಟ್ಟಿಕೊಂಡಿದ್ದ. ಹೀಗಾಗಿ ಪ್ರಾಂಶುಪಾಲರಿಗೆ ಮತ್ತು ಕಾಲೇಜಿಗೆ ಕೆಟ್ಟ ಹೆಸರು ತರಲೆಂದು ಪರೀಕ್ಷೆ ವೇಳೆ 4 ಖಾಲಿ ಉತ್ತರ ಪತ್ರಿಕೆಗಳನ್ನು ಕದ್ದು, ತ್ರಿವೇಣಿ ವೈನ್ ಸ್ಟೋರ್‌ನಲ್ಲಿ ಬಿಟ್ಟು ಹೋಗಿದ್ದ.

ನಂತರ ಕಾಯಿನ್ ಬೂತ್ ಫೋನ್‌ನಲ್ಲಿ ಪೊಲೀಸ್ ನಿಯಂತ್ರಣ ಕೊಠಡಿ ಹಾಗೂ ವಿವಿಗೆ ಅನಾಮಧೇಯ ವ್ಯಕ್ತಿಯಂತೆ ಕರೆ ಮಾಡಿ ಮಾಹಿತಿ ನೀಡಿದ್ದ.

ಈ ಬಗ್ಗೆ ವಿವಿಯಿಂದ ಎಚ್‌ಎಎಲ್ ಠಾಮೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈನ್ ಸ್ಟೋರ್ ಸುತ್ತಮುತ್ತ ಅಳವಡಿಸಿದ್ದ ಸಿಸಿ ಕ್ಯಾಮೆರಾದ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಶಿವಕುಮಾರ್ ಸುಳಿವು ಸಿಕ್ಕಿತ್ತು.

ಈ ಸಾಕ್ಷ್ಯಾಧಾರದ ಮೇಲೆ ಹಾರಿಜಾನ್ ಕಾಲೇಜಿನ ಸಿಬ್ಬಂದಿ, ಉಪನ್ಯಾಸಕರು ಮತ್ತು ಪರೀಕ್ಷೆಗೆ ಬಂದಿದ್ದ ವಿಚಕ್ಷಣಾಧಿಕಾರಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದಾಗ ಶಿವಕುಮಾರ್ ಉತ್ತರ ಪತ್ರಿಕೆ ಪ್ರಕರಣದ ಹಿಂದೆ ಇರುವುದು ಗೊತ್ತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT