ಮತದಾನದಲ್ಲಿ ತೊಡಗಿರುವ ಜನತೆ (ಸಾಂದರ್ಭಿಕ ಚಿತ್ರ) 
ದೇಶ

4ನೇ ಹಂತ: ಕಾಶ್ಮೀರ ಕಣಿವೆ ಮತ್ತು ಜಾರ್ಖಂಡ್‌ನಲ್ಲಿ ಮತದಾನ ಆರಂಭ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ 4ನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ರಾಂಚಿ/ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ 4ನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಾಲುಗಟ್ಟಿ ಜನತೆ ಮತದಾನದಲ್ಲಿ ತೊಡಗಿದ್ದಾರೆ.

ಉಗ್ರರ ದಾಳಿ ಭೀತಿಯ ಕರಿ ನೆರಳಿನ ನಡುವೆಯೇ ಇಂದು ಕಣಿವೆ ರಾಜ್ಯದ ವಿಧಾನಸಭೆ ಚುನಾವಣೆಯ 4ನೇ ಹಂತದ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಪ್ರತಿನಿಧಿಸಿರುವ ಸೋನ್ವಾರ್ ಕ್ಷೇತ್ರ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಮಾಜಿ ಮುಖ್ಯಮಂತ್ರಿ ಮೊಹಮ್ಮದ್ ಸಯೀದ್ ಸೇರಿ ಒಟ್ಟು 182 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿ ಮತಗಟ್ಟೆ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದೆ.

ಇನ್ನು ಮತ್ತು ಜಾರ್ಖಂಡ್ ರಾಜ್ಯದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಜಾರ್ಖಂಡ್ ವಿಧಾನಸಭೆ ಚುನಾವಣೆಯ 4ನೇ ಹಂತದ ಮತದಾನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಗಿರಿಡ್ಹಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಸೇರಿದಂತೆ ಒಟ್ಟು 217 ಅಭ್ಯರ್ಥಿಗಳು ಕಣದಲ್ಲಿದ್ದು, ಮೂವರು ಕ್ಯಾಬಿನೆಟ್ ಸಚಿವರು ಕೂಡ ಕಣದಲ್ಲಿದ್ದಾರೆ. 4ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಜಾರ್ಖಂಡ್‌ನ ಒಟ್ಟು 15 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಅತ್ತ ಕಾಶ್ಮೀರದಲ್ಲಿ ಉಗ್ರರ ದಾಳಿ ಭೀತಿ ಇದ್ದರೆ ಇತ್ತ ಜಾರ್ಖಂಡ್‌ನಲ್ಲಿ ನಕ್ಸಲರ ದಾಳಿ ಭೀತಿ ಹಿನ್ನಲೆಯಲ್ಲಿಯೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ 4ನೇ ಹಂತದ ಮತದಾನ ನಡೆಯುತ್ತಿರುವ ಎಲ್ಲ 15 ಕ್ಷೇತ್ರಗಳ 3700 ಮತಗಟ್ಟೆಗಳಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಈ ಪೈಕಿ ನಕ್ಸಲ್ ಪೀಡಿತ ಪ್ರದೇಶಗಳು ಸೇರಿದಂತೆ ಒಟ್ಟು 716 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಹೀಗಾಗಿ ಇಲ್ಲಿ ಸಿಆರ್‌ಪಿಎಫ್ ಯೋಧರು ಮತ್ತು ನಕ್ಸಲ್ ವಿರೋಧಿ ಕಾರ್ಯಾಚರಣೆ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT