ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ನಿಮ್ಮ ಪ್ರಾರ್ಥನೆಗೆ ಧನ್ಯವಾದ: ಪ್ರಣಬ್ ಮುಖರ್ಜಿ

ಅನಾರೋಗ್ಯದಿಂದ ಬಳಲಿಕೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ...

ನವದೆಹಲಿ: ಅನಾರೋಗ್ಯದಿಂದ ಬಳಲಿಕೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮ ಆರೋಗ್ಯ ಚೇತರಿಕೆಗೆ ಪ್ರಾರ್ಥನೆ ಮಾಡಿದ ಎಲ್ಲಾ ಜನತೆಗೂ ಧನ್ಯವಾದಗಳನ್ನು ಸೂಚಿಸಿದ್ದಾರೆ.

ಶಸ್ತ್ರ ಚಿಕಿತ್ಸೆ ನಂತರ ಇದೇ ಮೊದಲ ಬಾರಿಗೆ ಟ್ವಿಟರ್ ಮೂಲಕ ತಾವು ಆರೋಗ್ಯವಾಗಿರುವುದಾಗಿ ಸಂದೇಶ ರವಾನಿಸಿರುವ ಪ್ರಣಬ್ ಮುಖರ್ಜಿಯವರು ದೇಶದ ಜನತೆಗೆ ಧನ್ಯವಾದ ಸೂಚಿಸಿದ್ದು, ಜನರ ಪ್ರಾರ್ಥನೆಯಿಂದಾಗಿ ಈಗಾಗಲೇ ನನ್ನ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದೆ. ಆದಷ್ಟೂ ಬೇಗ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನಿನ್ನೆ ಬೆಳಿಗ್ಗೆ ರಾಷ್ಟ್ರಪತಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಸೇನೆಯ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಪ್ರಣಬ್ ಮುಖರ್ಜಿ ಅವರನ್ನು ತಪಾಸಣೆಗೊಳಪಡಿಸಿದ ವೈದ್ಯರು ಹೃದಯಕ್ಕೆ ರಕ್ತ ಪೂರೈಸುವ ನಾಳಗಳಲ್ಲಿ ತೊಂದರೆ ಇರುವುದಾಗಿ ಪತ್ತೆ ಹಚ್ಚಿದ್ದರು.

ನಂತರ ಸಮಸ್ಯೆ ಕಂಡುಕೊಂಡ ವೈದ್ಯರು ಕೂಡಲೇ ರಾಷ್ಟ್ರಪತಿ ಅವರಿಗೆ ಆ್ಯಂಡಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿ ಪರಿಧಮನಿ ಸ್ಟೆಂಟ್ ಅಳವಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT