ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ನಿಮ್ಮ ಪ್ರಾರ್ಥನೆಗೆ ಧನ್ಯವಾದ: ಪ್ರಣಬ್ ಮುಖರ್ಜಿ

ಅನಾರೋಗ್ಯದಿಂದ ಬಳಲಿಕೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ...

ನವದೆಹಲಿ: ಅನಾರೋಗ್ಯದಿಂದ ಬಳಲಿಕೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮ ಆರೋಗ್ಯ ಚೇತರಿಕೆಗೆ ಪ್ರಾರ್ಥನೆ ಮಾಡಿದ ಎಲ್ಲಾ ಜನತೆಗೂ ಧನ್ಯವಾದಗಳನ್ನು ಸೂಚಿಸಿದ್ದಾರೆ.

ಶಸ್ತ್ರ ಚಿಕಿತ್ಸೆ ನಂತರ ಇದೇ ಮೊದಲ ಬಾರಿಗೆ ಟ್ವಿಟರ್ ಮೂಲಕ ತಾವು ಆರೋಗ್ಯವಾಗಿರುವುದಾಗಿ ಸಂದೇಶ ರವಾನಿಸಿರುವ ಪ್ರಣಬ್ ಮುಖರ್ಜಿಯವರು ದೇಶದ ಜನತೆಗೆ ಧನ್ಯವಾದ ಸೂಚಿಸಿದ್ದು, ಜನರ ಪ್ರಾರ್ಥನೆಯಿಂದಾಗಿ ಈಗಾಗಲೇ ನನ್ನ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದೆ. ಆದಷ್ಟೂ ಬೇಗ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನಿನ್ನೆ ಬೆಳಿಗ್ಗೆ ರಾಷ್ಟ್ರಪತಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಸೇನೆಯ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಪ್ರಣಬ್ ಮುಖರ್ಜಿ ಅವರನ್ನು ತಪಾಸಣೆಗೊಳಪಡಿಸಿದ ವೈದ್ಯರು ಹೃದಯಕ್ಕೆ ರಕ್ತ ಪೂರೈಸುವ ನಾಳಗಳಲ್ಲಿ ತೊಂದರೆ ಇರುವುದಾಗಿ ಪತ್ತೆ ಹಚ್ಚಿದ್ದರು.

ನಂತರ ಸಮಸ್ಯೆ ಕಂಡುಕೊಂಡ ವೈದ್ಯರು ಕೂಡಲೇ ರಾಷ್ಟ್ರಪತಿ ಅವರಿಗೆ ಆ್ಯಂಡಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿ ಪರಿಧಮನಿ ಸ್ಟೆಂಟ್ ಅಳವಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT