ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ನಿಮ್ಮ ಪ್ರಾರ್ಥನೆಗೆ ಧನ್ಯವಾದ: ಪ್ರಣಬ್ ಮುಖರ್ಜಿ

ಅನಾರೋಗ್ಯದಿಂದ ಬಳಲಿಕೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ...

ನವದೆಹಲಿ: ಅನಾರೋಗ್ಯದಿಂದ ಬಳಲಿಕೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮ ಆರೋಗ್ಯ ಚೇತರಿಕೆಗೆ ಪ್ರಾರ್ಥನೆ ಮಾಡಿದ ಎಲ್ಲಾ ಜನತೆಗೂ ಧನ್ಯವಾದಗಳನ್ನು ಸೂಚಿಸಿದ್ದಾರೆ.

ಶಸ್ತ್ರ ಚಿಕಿತ್ಸೆ ನಂತರ ಇದೇ ಮೊದಲ ಬಾರಿಗೆ ಟ್ವಿಟರ್ ಮೂಲಕ ತಾವು ಆರೋಗ್ಯವಾಗಿರುವುದಾಗಿ ಸಂದೇಶ ರವಾನಿಸಿರುವ ಪ್ರಣಬ್ ಮುಖರ್ಜಿಯವರು ದೇಶದ ಜನತೆಗೆ ಧನ್ಯವಾದ ಸೂಚಿಸಿದ್ದು, ಜನರ ಪ್ರಾರ್ಥನೆಯಿಂದಾಗಿ ಈಗಾಗಲೇ ನನ್ನ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದೆ. ಆದಷ್ಟೂ ಬೇಗ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನಿನ್ನೆ ಬೆಳಿಗ್ಗೆ ರಾಷ್ಟ್ರಪತಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಸೇನೆಯ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಪ್ರಣಬ್ ಮುಖರ್ಜಿ ಅವರನ್ನು ತಪಾಸಣೆಗೊಳಪಡಿಸಿದ ವೈದ್ಯರು ಹೃದಯಕ್ಕೆ ರಕ್ತ ಪೂರೈಸುವ ನಾಳಗಳಲ್ಲಿ ತೊಂದರೆ ಇರುವುದಾಗಿ ಪತ್ತೆ ಹಚ್ಚಿದ್ದರು.

ನಂತರ ಸಮಸ್ಯೆ ಕಂಡುಕೊಂಡ ವೈದ್ಯರು ಕೂಡಲೇ ರಾಷ್ಟ್ರಪತಿ ಅವರಿಗೆ ಆ್ಯಂಡಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿ ಪರಿಧಮನಿ ಸ್ಟೆಂಟ್ ಅಳವಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ