ಸಾಂದರ್ಭಿಕ ಚಿತ್ರ 
ದೇಶ

ಕಾರು ಅಡ್ಡಗಟ್ಟಿ ಸುಲಿಗೆ: ಇಬ್ಬರ ಸೆರೆ

ಹಲಸೂರು ಕೆರೆ ಸಮೀಪ ಕಾರು ಅಡ್ಡಗಟ್ಟಿ ಸುಲಿಗೆ ಮಾಡಿ...

ಬೆಂಗಳೂರು: ಹಲಸೂರು ಕೆರೆ ಸಮೀಪ ಕಾರು ಅಡ್ಡಗಟ್ಟಿ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಸುಲಿಗೆಕೋರರನ್ನು ಗಸ್ತಿನಲ್ಲಿದ್ದ ಭಾರತಿನಗರ ಪೊಲೀಸರು ಬಂಧಿಸಿದ್ದಾರೆ.

ಆರ್.ಟಿ. ನಗರ ಸುಲ್ತಾನ್‌ಪಾಳ್ಯ ನಿವಾಸಿ ಅನಿಲ್‌ಕುಮಾರ್ (38) ಹಾಗೂ ಕೋಲಾರ ಜಿಲ್ಲೆ ಮಾಲೂರು ಮೂಲದ ಫೈಜುಲ್ (45) ಬಂಧಿತರು.

ಶನಿವಾರ ರಾತ್ರಿ 8.30ರ ಸುಮಾರಿಗೆ ಸಿದ್ಧಾರ್ಥ ಎಂಬುವರು ತಮ್ಮ ಗೆಳತಿಯೊಂದಿಗೆ ಕಾರಿನಲ್ಲಿ ಹಲಸೂರು ಕೆರೆ ಬಳಿ ಹೋಗುತ್ತಿದ್ದಾಗ ಪಲ್ಸರ್ ಬೈಕ್‌ನಲ್ಲಿ ವೇಗವಾಗಿ ಬಂದು ಕಾರು ಅಡ್ಡಗಟ್ಟಿದ್ದಾರೆ.

ಏರುಧ್ವನಿಯಲ್ಲಿ ತಾವು ಕ್ರೈ ಬ್ರ್ಯಾಂಚ್ ಪೊಲೀಸರು, ಕೆಳಗಿಳಿಯಿರಿ ಎಂದು ಜೋರು ಮಾಡಿದ್ದಾರೆ. ಅಲ್ಲದೇ ಜೇಬಿಗೆ ಕೈ ಹಾಕಿ ಪರ್ಸ್‌ನಲ್ಲಿದ್ದ 1700 ನಗದು ಕಿತ್ತುಕೊಂಡು ಪರಾರಿಯಾಗುವ ಯತ್ನದಲ್ಲಿದ್ದರು. ಅದೇ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಆರೋಪಿಗಳನ್ನು ಹಿಡಿದುಕೊಂಡಿದ್ದಾರೆ.

ಆರೋಪಿಗಳು ಸುಲಿಗೆ ಮಾಡಿದ 1700 ನಗದು, ಕೃತ್ಯಕ್ಕೆ ಬಳಸಿದ್ದ ಬೈಕ್ ಹಾಗೂ 2 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT