ಸಾಂದರ್ಭಿಕ ಚಿತ್ರ 
ದೇಶ

ಕಾರು ಅಡ್ಡಗಟ್ಟಿ ಸುಲಿಗೆ: ಇಬ್ಬರ ಸೆರೆ

ಹಲಸೂರು ಕೆರೆ ಸಮೀಪ ಕಾರು ಅಡ್ಡಗಟ್ಟಿ ಸುಲಿಗೆ ಮಾಡಿ...

ಬೆಂಗಳೂರು: ಹಲಸೂರು ಕೆರೆ ಸಮೀಪ ಕಾರು ಅಡ್ಡಗಟ್ಟಿ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಸುಲಿಗೆಕೋರರನ್ನು ಗಸ್ತಿನಲ್ಲಿದ್ದ ಭಾರತಿನಗರ ಪೊಲೀಸರು ಬಂಧಿಸಿದ್ದಾರೆ.

ಆರ್.ಟಿ. ನಗರ ಸುಲ್ತಾನ್‌ಪಾಳ್ಯ ನಿವಾಸಿ ಅನಿಲ್‌ಕುಮಾರ್ (38) ಹಾಗೂ ಕೋಲಾರ ಜಿಲ್ಲೆ ಮಾಲೂರು ಮೂಲದ ಫೈಜುಲ್ (45) ಬಂಧಿತರು.

ಶನಿವಾರ ರಾತ್ರಿ 8.30ರ ಸುಮಾರಿಗೆ ಸಿದ್ಧಾರ್ಥ ಎಂಬುವರು ತಮ್ಮ ಗೆಳತಿಯೊಂದಿಗೆ ಕಾರಿನಲ್ಲಿ ಹಲಸೂರು ಕೆರೆ ಬಳಿ ಹೋಗುತ್ತಿದ್ದಾಗ ಪಲ್ಸರ್ ಬೈಕ್‌ನಲ್ಲಿ ವೇಗವಾಗಿ ಬಂದು ಕಾರು ಅಡ್ಡಗಟ್ಟಿದ್ದಾರೆ.

ಏರುಧ್ವನಿಯಲ್ಲಿ ತಾವು ಕ್ರೈ ಬ್ರ್ಯಾಂಚ್ ಪೊಲೀಸರು, ಕೆಳಗಿಳಿಯಿರಿ ಎಂದು ಜೋರು ಮಾಡಿದ್ದಾರೆ. ಅಲ್ಲದೇ ಜೇಬಿಗೆ ಕೈ ಹಾಕಿ ಪರ್ಸ್‌ನಲ್ಲಿದ್ದ 1700 ನಗದು ಕಿತ್ತುಕೊಂಡು ಪರಾರಿಯಾಗುವ ಯತ್ನದಲ್ಲಿದ್ದರು. ಅದೇ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಆರೋಪಿಗಳನ್ನು ಹಿಡಿದುಕೊಂಡಿದ್ದಾರೆ.

ಆರೋಪಿಗಳು ಸುಲಿಗೆ ಮಾಡಿದ 1700 ನಗದು, ಕೃತ್ಯಕ್ಕೆ ಬಳಸಿದ್ದ ಬೈಕ್ ಹಾಗೂ 2 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT