ಪ್ರಧಾನಿ ನರೇಂದ್ರ ಮೋದಿ (ಸಾಂದರ್ಭಿಕ ಚಿತ್ರ) 
ದೇಶ

'ಲಕ್ಷ್ಮಣ ರೇಖೆ' ದಾಟದಿರಿ: ಸಂಸದರಿಗೆ ಮೋದಿ ಎಚ್ಚರಿಕೆ

ವಿವಾದಾದ್ಮಕ ಹೇಳಿಕೆ ನೀಡುತ್ತಿರುವ ಬಿಜೆಪಿ ಸಂಸದರನ್ನು ತರಾಟೆಗೆ...

ನವದೆಹಲಿ: ವಿವಾದಾದ್ಮಕ ಹೇಳಿಕೆ ನೀಡುತ್ತಿರುವ ಬಿಜೆಪಿ ಸಂಸದರನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸಂಸದರು ಸಾರ್ವಜನಿಕವಾಗಿ ಮಾತನಾಡುವಾಗ ತಮ್ಮ ಮಾತಿನ ಮೇಲೆ ಹಿಡಿತವಿಟ್ಟುಕೊಂಡಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.  

ಇಂದು ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಇತ್ತೀಚೆಗೆ ಪಕ್ಷದ ಸಂಸದರು ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷ ಮುಜುಗರಕ್ಕೆ ಒಳಗಾಗುವಂತೆ ಮಾಡಿರುವುದನ್ನು ಹಾಗೂ ಸಭೆಯಲ್ಲಿ ಸಂಸದರು ತಡವಾಗಿ ಬಂದಿರುವುದನ್ನು ಕಂಡು ಕೋಪಗೊಂಡರು. ಈ ಹಿನ್ನೆಲೆಯಲ್ಲಿ ಮಾತನಾಡಿದ ನರೇಂದ್ರ ಮೋದಿಯವರು ಪ್ರತಿಯೊಂದಕ್ಕೂ ಮಿತಿ ಎಂಬುದಿರುತ್ತದೆ. ಅದನ್ನು ಸಂಸದರು ಮೀರಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ, 'ಪಕ್ಷದ ಸಂಸದರು ಸಭೆಯಲ್ಲಿ ಮಾತನಾಡುವಾಗ ಯೋಚಿಸಿ ಮಾತನಾಡಬೇಕು, ಎಲ್ಲದಕ್ಕೂ ಒಂದು ಮಿತಿ ಎಂಬ ರೇಖೆ ಇರುತ್ತದೆ ಅದನ್ನು ದಾಟಬೇಡಿ. ಹೇಳಿಕೆಗಳನ್ನು ನೀಡುವುದರಲ್ಲಿ ಆಸಕ್ತಿ ತೋರಿಸುವ ಬದಲು ಅಭಿವೃದ್ಧಿ ಕಡೆಗೆ ಗಮನಕೊಡಿ' ಎಂದು ಪಕ್ಷದ ಸಂಸದರಿಗೆ ಸಲಹೆ ನೀಡಿದ್ದಾರೆ.

ಈ ಹಿಂದೆ ದೆಹಲಿಯ ಶ್ಯಾಮ್ ನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು, 'ನಿಮಗೆ ದೆಹಲಿಯಲ್ಲಿ ರಾಮನಿಗೆ ಹುಟ್ಟಿದ ಮಕ್ಕಳ ಸರ್ಕಾರ ಬೇಕೆ ಇಲ್ಲವೇ ಅನೈತಿಕವಾಗಿ ಹುಟ್ಟಿದವರ ಸರ್ಕಾರ ಬೇಕೆ'ಎಂಬ ವಿವಾದಾದ್ಮಕ ಹೇಳಿಕೆ ನೀಡಿ ತೀವ್ರ ಸುದ್ದಿಗೆ ಗ್ರಾಸವಾಗಿದ್ದರು.

ಇದು ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿತ್ತಲ್ಲದೇ ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಈ ಘಟನೆ ಮರೆಯಾಗುವ ಮುನ್ನವೇ ಮತ್ತೊಬ್ಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು 'ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆಗೈದ ನಾಥುರಾಮ್ ಗೋಡ್ಸೆ ಕೂಡ ಒಬ್ಬ ಮಹಾನ್ ದೇಶ ಭಕ್ತ' ಎಂಬ ವಿವಾದಾದ್ಮಕ ಹೇಳಿಕೆ ನೀಡಿ ಬಿಜೆಪಿಯನ್ನು ಮುಜುಗರಕ್ಕೊಳಗಾಗುವಂತೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT