ಪ್ರಧಾನಿ ನರೇಂದ್ರ ಮೋದಿ (ಸಾಂದರ್ಭಿಕ ಚಿತ್ರ) 
ದೇಶ

'ಲಕ್ಷ್ಮಣ ರೇಖೆ' ದಾಟದಿರಿ: ಸಂಸದರಿಗೆ ಮೋದಿ ಎಚ್ಚರಿಕೆ

ವಿವಾದಾದ್ಮಕ ಹೇಳಿಕೆ ನೀಡುತ್ತಿರುವ ಬಿಜೆಪಿ ಸಂಸದರನ್ನು ತರಾಟೆಗೆ...

ನವದೆಹಲಿ: ವಿವಾದಾದ್ಮಕ ಹೇಳಿಕೆ ನೀಡುತ್ತಿರುವ ಬಿಜೆಪಿ ಸಂಸದರನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸಂಸದರು ಸಾರ್ವಜನಿಕವಾಗಿ ಮಾತನಾಡುವಾಗ ತಮ್ಮ ಮಾತಿನ ಮೇಲೆ ಹಿಡಿತವಿಟ್ಟುಕೊಂಡಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.  

ಇಂದು ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಇತ್ತೀಚೆಗೆ ಪಕ್ಷದ ಸಂಸದರು ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷ ಮುಜುಗರಕ್ಕೆ ಒಳಗಾಗುವಂತೆ ಮಾಡಿರುವುದನ್ನು ಹಾಗೂ ಸಭೆಯಲ್ಲಿ ಸಂಸದರು ತಡವಾಗಿ ಬಂದಿರುವುದನ್ನು ಕಂಡು ಕೋಪಗೊಂಡರು. ಈ ಹಿನ್ನೆಲೆಯಲ್ಲಿ ಮಾತನಾಡಿದ ನರೇಂದ್ರ ಮೋದಿಯವರು ಪ್ರತಿಯೊಂದಕ್ಕೂ ಮಿತಿ ಎಂಬುದಿರುತ್ತದೆ. ಅದನ್ನು ಸಂಸದರು ಮೀರಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ, 'ಪಕ್ಷದ ಸಂಸದರು ಸಭೆಯಲ್ಲಿ ಮಾತನಾಡುವಾಗ ಯೋಚಿಸಿ ಮಾತನಾಡಬೇಕು, ಎಲ್ಲದಕ್ಕೂ ಒಂದು ಮಿತಿ ಎಂಬ ರೇಖೆ ಇರುತ್ತದೆ ಅದನ್ನು ದಾಟಬೇಡಿ. ಹೇಳಿಕೆಗಳನ್ನು ನೀಡುವುದರಲ್ಲಿ ಆಸಕ್ತಿ ತೋರಿಸುವ ಬದಲು ಅಭಿವೃದ್ಧಿ ಕಡೆಗೆ ಗಮನಕೊಡಿ' ಎಂದು ಪಕ್ಷದ ಸಂಸದರಿಗೆ ಸಲಹೆ ನೀಡಿದ್ದಾರೆ.

ಈ ಹಿಂದೆ ದೆಹಲಿಯ ಶ್ಯಾಮ್ ನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು, 'ನಿಮಗೆ ದೆಹಲಿಯಲ್ಲಿ ರಾಮನಿಗೆ ಹುಟ್ಟಿದ ಮಕ್ಕಳ ಸರ್ಕಾರ ಬೇಕೆ ಇಲ್ಲವೇ ಅನೈತಿಕವಾಗಿ ಹುಟ್ಟಿದವರ ಸರ್ಕಾರ ಬೇಕೆ'ಎಂಬ ವಿವಾದಾದ್ಮಕ ಹೇಳಿಕೆ ನೀಡಿ ತೀವ್ರ ಸುದ್ದಿಗೆ ಗ್ರಾಸವಾಗಿದ್ದರು.

ಇದು ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿತ್ತಲ್ಲದೇ ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಈ ಘಟನೆ ಮರೆಯಾಗುವ ಮುನ್ನವೇ ಮತ್ತೊಬ್ಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು 'ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆಗೈದ ನಾಥುರಾಮ್ ಗೋಡ್ಸೆ ಕೂಡ ಒಬ್ಬ ಮಹಾನ್ ದೇಶ ಭಕ್ತ' ಎಂಬ ವಿವಾದಾದ್ಮಕ ಹೇಳಿಕೆ ನೀಡಿ ಬಿಜೆಪಿಯನ್ನು ಮುಜುಗರಕ್ಕೊಳಗಾಗುವಂತೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT