ದೇಶ

ಸರ್ಕಾರಿ ಬಸ್‌ಗೆ ಲಾರಿ ಡಿಕ್ಕಿ: ಓರ್ವ ಸಾವು, 15 ಮಂದಿ ಗಾಯ

ಬೆಂಗಳೂರು: ಕೇರಳ ಸರ್ಕಾರಕ್ಕೆ ಸೇರಿದ್ದ ಬಸ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 15 ಮಂದಿ ಗಾಯಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾನೆ.

ಕೇರಳ ಸರ್ಕಾರಕ್ಕೆ ಸೇರಿದ್ದ ಬಸ್‌ವೊಂದು ತಮಿಳುನಾಡಿನ ಹೊಸೂರು ರಸ್ತೆಯ ಸಂಭಾಳಪಾಳ್ಯಂ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ವೇಗವಾಗಿ ಬಂದ ಲಾರಿಯೊಂದು ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ರವೀಂದ್ರನ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್‌ನಲ್ಲಿದ್ದ 15 ಜನರಿಗೆ ಗಂಭೀರವಾಗಿ ಗಾಯಗಳಾಗಿವೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಿಮಿಸಿದ ಸೂಳಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

SCROLL FOR NEXT