ದೇಶ

ಶುಲ್ಕ ಪಾವತಿಸದಕ್ಕೆ, ವಿದ್ಯಾರ್ಥಿಯನ್ನೇ ಥಳಿಸಿ ಕೊಂದ ಶಿಕ್ಷಕ

Mainashree

ಬೇರ್ಲಿ: ಶಾಲೆಯ ಶುಲ್ಕ ಪಾವತಿಸದಕ್ಕೇ, ವಿದ್ಯಾರ್ಥಿನ್ನು ಸಾಯುವಂತೆ ಶಿಕ್ಷಕ ಥಳಿಸಿದ್ದು, ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬೇರ್ಲಿ ಎಂಬಲ್ಲಿ ನಡೆದಿದೆ.

ಶಾಲೆಯ ಶುಲ್ಕ ಪಾವತಿಸದ ಹಿನ್ನೆಲೆಯಲ್ಲಿ ಏಳು ವರ್ಷದ ವಿದ್ಯಾರ್ಥಿನ್ನು ಶಿಕ್ಷಕ ಮನಬಂದಂತೆ ಥಳಿಸಿ, ಬಾಲಕನ ತಲೆಯನ್ನು ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ. ಈ ವೇಳೆ ಬಾಲಕನಿಗೆ ಮೂಗಿನಲ್ಲಿ ರಕ್ತ ಸೋರಿಕೆಯಾಗಿದೆ. ಬಾಲಕನನ್ನು ಶಾಲ ಸಿಬ್ಬಂದಿಗಳು ಆಸ್ಪತ್ರೆಗೆ ಕರೆದೊಯ್ದು, ಪೋಷಕರಿಗೆ ಸುದ್ದಿ ತಿಳಿಸಿದ್ದಾರೆ.

ಸುದ್ದಿ ತಿಳಿದ ಪೋಷಕರು ಆಸ್ಪತ್ರೆಗೆ ಆಗಮಿಸಿದ್ದಾರೆ. ಆಗ ಶಾಲೆಯ ಸಿಬ್ಬಂದಿ ನಿಮ್ಮ ಮಗನಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿಗೆ ಕರೆತಂದಿದ್ದೇವೆ ಎಂದು ಹೇಳಿದ್ದಾರೆ. ಪ್ರಜ್ಞಾಹೀನಾನಾಗಿದ್ದ ಬಾಲಕ ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದ್ದಾನೆ.

ಮರಣೋತ್ತರ ಪರೀಕ್ಷೆ ವರದಿ ಪ್ರಕಾರ ಬಾಲಕನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಪೋಷಕರು ಶಾಲೆಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಪ್ರಾಂಶುಪಾಲರನ್ನು ಬಂಧಿಸುವಂತೆ ಒತ್ತಡ ಹೇರಿದ್ದಾರೆ. ಶಾಲೆಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿ ಎಂ.ಪಿ ಸಿಂಗ್ ತಿಳಿಸಿದ್ದಾರೆ.

SCROLL FOR NEXT