ದೇಶ

ಶುಲ್ಕ ಪಾವತಿಸದಕ್ಕೆ, ವಿದ್ಯಾರ್ಥಿಯನ್ನೇ ಥಳಿಸಿ ಕೊಂದ ಶಿಕ್ಷಕ

ಶಾಲೆಯ ಶುಲ್ಕ ಪಾವತಿಸದಕ್ಕೇ, ವಿದ್ಯಾರ್ಥಿನ್ನು ಸಾಯುವಂತೆ ಶಿಕ್ಷಕ ಥಳಿಸಿದ್ದು...

ಬೇರ್ಲಿ: ಶಾಲೆಯ ಶುಲ್ಕ ಪಾವತಿಸದಕ್ಕೇ, ವಿದ್ಯಾರ್ಥಿನ್ನು ಸಾಯುವಂತೆ ಶಿಕ್ಷಕ ಥಳಿಸಿದ್ದು, ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬೇರ್ಲಿ ಎಂಬಲ್ಲಿ ನಡೆದಿದೆ.

ಶಾಲೆಯ ಶುಲ್ಕ ಪಾವತಿಸದ ಹಿನ್ನೆಲೆಯಲ್ಲಿ ಏಳು ವರ್ಷದ ವಿದ್ಯಾರ್ಥಿನ್ನು ಶಿಕ್ಷಕ ಮನಬಂದಂತೆ ಥಳಿಸಿ, ಬಾಲಕನ ತಲೆಯನ್ನು ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ. ಈ ವೇಳೆ ಬಾಲಕನಿಗೆ ಮೂಗಿನಲ್ಲಿ ರಕ್ತ ಸೋರಿಕೆಯಾಗಿದೆ. ಬಾಲಕನನ್ನು ಶಾಲ ಸಿಬ್ಬಂದಿಗಳು ಆಸ್ಪತ್ರೆಗೆ ಕರೆದೊಯ್ದು, ಪೋಷಕರಿಗೆ ಸುದ್ದಿ ತಿಳಿಸಿದ್ದಾರೆ.

ಸುದ್ದಿ ತಿಳಿದ ಪೋಷಕರು ಆಸ್ಪತ್ರೆಗೆ ಆಗಮಿಸಿದ್ದಾರೆ. ಆಗ ಶಾಲೆಯ ಸಿಬ್ಬಂದಿ ನಿಮ್ಮ ಮಗನಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿಗೆ ಕರೆತಂದಿದ್ದೇವೆ ಎಂದು ಹೇಳಿದ್ದಾರೆ. ಪ್ರಜ್ಞಾಹೀನಾನಾಗಿದ್ದ ಬಾಲಕ ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದ್ದಾನೆ.

ಮರಣೋತ್ತರ ಪರೀಕ್ಷೆ ವರದಿ ಪ್ರಕಾರ ಬಾಲಕನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಪೋಷಕರು ಶಾಲೆಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಪ್ರಾಂಶುಪಾಲರನ್ನು ಬಂಧಿಸುವಂತೆ ಒತ್ತಡ ಹೇರಿದ್ದಾರೆ. ಶಾಲೆಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿ ಎಂ.ಪಿ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT