ಝಕಿವುರ್ ರೆಹಮಾನ್ ಲಖ್ವಿ 
ದೇಶ

ಜಾಮೀನು ಸಿಕ್ಕರು ಉಗ್ರ ಲಖ್ವಿಗೆ ಜೈಲೆ ಗತಿ

ಇಸ್ಲಾಮಾಬಾದ್: ಮುಂಬೈ ದಾಳಿಯ ಆರೋಪಿ ಉಗ್ರ ಝಕಿವುರ್ ರೆಹಮಾನ್ ಲಖ್ವಿಗೆ ಜಾಮೀನು ನೀಡಿರುವುದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಉಗ್ರರನ್ನು ಜೈಲಿನಿಂದ ಬಿಡುಗಡೆ ಮಾಡದಿರಲು ಪಾಕಿಸ್ತಾನ ಸರ್ಕಾರ ತೀರ್ಮಾನಿಸಿದೆ.

ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರಗಾಮಿ ಝಕಿವುರ್ ರೆಹಮಾನ್ ಲಖ್ವಿಗೆ ಪಾಕಿಸ್ತಾನ ಉಗ್ರ ನಿಗ್ರಹ ಕೋರ್ಟ್ ಜಾಮೀನು ನೀಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನ ಉನ್ನತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ ಆತನನ್ನು ಹೊರಗೆ ಬಿಟ್ಟರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುತ್ತದೆಂಬ ಕಾರಣ ನೀಡಿ ಆತನನ್ನು ಜೈಲಿನಿಂದ ಬಿಡುಗಡೆ ಮಾಡದಿರಲು ಪಾಕ್ ತೀರ್ಮಾನಿಸಿದೆ.

ತಾಂತ್ರಿಕ ದೋಷದಿಂದಾಗಿ ಲಖ್ವಿಗೆ ಜಾಮೀನು ಸಿಕ್ಕಿದೆ ಎಂದು ಪಾಕ್ ಸರ್ಕಾರ ಹೇಳುತ್ತಿದೆ. ಪೇಶಾವರ ಶಾಲೆಯಲ್ಲಿ ಉಗ್ರರು ದಾಳಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾವಾದಿಗಳು ಹಾಜರಾಗಿ ವಾದ ಮಂಡಿಸದೇ ಹೋಗಿದ್ದರಿಂದ ಲಖ್ವಿಗೆ ಜಾಮೀನು ಸಿಕ್ಕಿದೆ ಎಂಬುದು ಪಾಕ್ ಸರ್ಕಾರದ ಸ್ಪಷ್ಟನೆಯಾಗಿದೆ.

ಲಖ್ವಿಗೆ ಜಾಮೀನು ನೀಡಿರುವುದು ಈ ಪ್ರಕರಣದ ಇತರ ಆರು ಆರೋಪಿಗಳಿಗೂ ಜಾಮೀನು ಸಿಗಲು ನೆರವಾಗಬಹುದು. ಈ ಭಯವೂ ಪಾಕಿಸ್ತಾನಕ್ಕಿದೆ. ಹೀಗಾಗಿ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ತೀರ್ಪುನ್ನು ಮರುಪರಿಶೀಲಿಸುವಂತೆ ಕೋರಿ ಸರ್ಕಾರ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಬಿಡುಗಡೆಯ ಆಸೆಯಲ್ಲಿದ್ದ ಉಗ್ರ ಝಕಿಯುರ್ ರೆಹಮಾನ್ ಲಖ್ವಿ ಮತ್ತೆ ಜೈಲಿನಲ್ಲೇ ಉಳಿಯುವ ಸಾಧ್ಯತೆ ದಟ್ಟವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT