ಗಾಲಿ ಜನಾರ್ದನ ರೆಡ್ಡಿ 
ದೇಶ

ಜನಾರ್ದನ ರೆಡ್ಡಿಗೆ ಸಿಕ್ಕಿತು ಮತ್ತೊಂದು ಜಾಮೀನು

ಹೈದರಾಬಾದ್: ಗಣಿ ಅಕ್ರಮ ಪ್ರಕರಣದಲ್ಲಿ ಜಾಮೀನು ಪಡೆಯಲು ಲಂಚ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಆಂಧ್ರಪ್ರದೇಶ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಹತ್ತು ಮಂದಿಗೆ ವಿವಿಧ ಕೋರ್ಟ್‌ಗಳು ಈಗಾಗಲೇ ಜಾಮೀನು ನೀಡಿವೆ. 2012ರಲ್ಲಿ ಬಹಿರಂಗವಾದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಭ್ರಷ್ಟಾಚಾರ ನಿಗ್ರಹ ದಳ(ಎಬಿಸಿ) ಪ್ರಕರಣ ದಾಖಲಿಸಿತ್ತು. ಲಂಚ ತೆಗೆದುಕೊಂಡ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಪಟ್ಟಾಭಿರಾಮ್ ರಾವ್‌ರನ್ನು ಸಸ್ಪೆಂಡ್ ಮಾಡಲಾಗಿತ್ತು.

ರೆಡ್ಡಿಗೆ ಜಾಮೀನು ನೀಡಲು ಸಿಬಿಐ 7 ಷರತ್ತುಗಳನ್ನು ವಿಧಿಸಿತ್ತು. ಅರದಲ್ಲಿ ಜಾಮೀನು ಸಿಕ್ಕಿದ ಬಳಿಕ ರೆಡ್ಡಿ ಬಳ್ಳಾರಿಗೆ ತೆರಳಲು ಅನುಮತಿ ನೀಡಬಾರದು ಎಂದು ಆಕ್ಷೇಪಿಸಿತ್ತು. ಆದರೆ ಅದಕ್ಕೆ ರೆಡ್ಡಿ ಪರ ವಕೀಲರು ಒಪ್ಪಿರಲಿಲ್ಲ ಎನ್ನಲಾಗಿದೆ.

ಪ್ರಕರಣದಲ್ಲಿ ಜಾಮೀನು ಸಿಕ್ಕಿದರೂ ರೆಡ್ಡಿ ಕಾರಾಗೃಹ ವಾಸದಿಂದ ಹೊರ ಬರಲು ಜನವರಿ ತಿಂಗಳ 2ನೇ ವಾರದವರೆಗೆ ಕಾಯಬೇಕು. ಗಣಿ ಅಕ್ರಮಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟನಲ್ಲಿ ಮತ್ತೊಂದು ಪ್ರಕರಣದ ವಿಚಾರಣೆ ಬಾಕಿ ಉಳಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT