ಮುಂಬೈ ದಾಳಿ ಸೂತ್ರಧಾರ, ಲಷ್ಕರ್-ಎ-ತೋಯ್ಬಾ ಮುಖ್ಯ ಕಮಾಂಡರ್ ಝಕಿ-ಉರ್ ರೆಹಮಾನ್ ಲಖ್ವಿ (ಸಂಗ್ರಹ ಚಿತ್ರ) 
ದೇಶ

ಭಾರತದ ಆಕ್ರೋಶಕ್ಕೆ ಮಣಿದ ಪಾಕ್: ಲಖ್ವಿಗೆ 3 ತಿಂಗಳ ಅಂದರ್

ಕಟುಕ ಲಖ್ವಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮತ್ತೆ ಮೂರು ತಿಂಗಳ ಅವಧಿವರೆಗೆ ಪಾಕಿಸ್ತಾನ ಜೈಲಿಗಟ್ಟಿದೆ.

ಇಸ್ಲಾಮಾಬಾದ್: ಮುಂಬೈ ದಾಳಿ ಸೂತ್ರಧಾರ, ಲಷ್ಕರ್-ಎ-ತೋಯ್ಬಾ ಮುಖ್ಯ ಕಮಾಂಡರ್ ಝಕಿ-ಉರ್ ರೆಹಮಾನ್ ಲಖ್ವಿ ಬಿಡುಗಡೆಗೆ ಭಾರತದಾದ್ಯಂತ ಮತ್ತು ಸಂಸತ್ತಿನಲ್ಲಿ ವ್ಯಕ್ತವಾದ ಆಕ್ರೋಶಕ್ಕೆ ಪಾಕಿಸ್ತಾನ ಕೊನೆಗೂ ಮಣಿದಿದೆ. ಕಟುಕ ಲಖ್ವಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮತ್ತೆ ಮೂರು ತಿಂಗಳ ಅವಧಿವರೆಗೆ ಜೈಲಿಗಟ್ಟಿದೆ.

ಮುಂಬೈ ದಾಳಿ ಪ್ರಕರಣದಲ್ಲಿ 2009ರಿಂದ ಜೈಲಿನಲ್ಲಿರುವ ಲಖ್ವಿಗೆ ಸಾಕ್ಷ್ಯಾಧಾರಗಳ ಕೊರೆತೆ ಆಧಾರದ ಮೇಲೆ ಭಯೋತ್ಪಾದನೆ ನಿಗ್ರಹ ನ್ಯಾಯಾಲಯ ಜಾಮೀನು ನೀಡಿತ್ತು. ಅದರಂತೆ ರಾವಲ್ಪಿಂಡಿಯ ಅಧಿಯಾಲ ಜೈಲಿನಿಂದ ಲಖ್ವಿ ಶುಕ್ರವಾರಿ ಬಿಡುಗಡೆಯಾಗಬೇಕಿತ್ತು. ಆದರೆ, ಇದರ ವಿರುದ್ಧ ಭಾರತ ಮಾತ್ರವಲ್ಲದೆ ಪಾಕ್‌ನೊಳಗೂ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಲಖ್ವಿಯನ್ನು ಸಾರ್ವಜನಿಕ ಸುವ್ಯವಸ್ಥೆ ಕಾಪಾಡಲು (ಎಂಪಿಒ) ಸರ್ಕಾರ ವಶಕ್ಕೆ ತೆಗೆದುಕೊಂಡಿತು.

ಹೈಕೋರ್ಟ್‌ಗೆ ಅರ್ಜಿ: ಲಖ್ವಿಗೆ ಜಾಮೀನು ನೀಡಿದ ವಿಶೇಷ ಕೋರ್ಟ್ ಆದೇಶ ಪ್ರಶ್ನಿಸಿ ಪಾಕ್ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಲಖ್ವಿ ಜಾಮೀನನ್ನು ಸೋಮವಾರ ಇಸ್ಲಾಮಾಬಾದ್ ನ್ಯಾಯಾಲಯದಲ್ಲಿ  ಪ್ರಶ್ನಿಸಲಾಗುವುದು ಎಂದು ಸರ್ಕಾರಿ ವಕೀಲ ಮುಹಮ್ಮದ್ ಅಜರ್ ಚೌಧರಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT