ಸಾಂದರ್ಭಿಕ ಚಿತ್ರ 
ದೇಶ

ಪೊಲೀಸರ ಎದುರೇ ಆತ್ಮಹತ್ಯೆಗೆ ಆರೋಪಿ ಯತ್ನ

ಫೇಸ್‌ಬುಕ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ...

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರ ಬಗ್ಗೆ ಅವಹೇಳನಕಾರಿ ಲೇಖನ ಪ್ರಕಟಿಸಿದ ಆರೋಪ ಎದುರಿಸುತ್ತಿದ್ದ ಬಿ.ಹರೀಶ್ ಕುಮಾರ್ (36) ಬಂಧನದ ಭೀತಿಯಿಂದ ಪೊಲೀಸರ ಎದುರೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸಂಪಿಗೆ ಹಳ್ಳಿ ಸಮೀಪದ ಶ್ರೀರಾಂಪುರದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಹರೀಶ್ ಅವರು 'ಡೀಲ್ ನಾರಾಯಣ' ಎಂಬ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ 18 ಲೇಖನಗಳನ್ನು ಪ್ರಕಟಿಸಿದ್ದಾರೆ. 'ಆಧಾರವಿಲ್ಲದೇ ದುರುದ್ದೇಶದಿಂದ ಈ ಲೇಖನಗಳನ್ನು ಬರೆದಿರುವುದರಿಂದ ನನ್ನ ಗೌರವಕ್ಕೆ ಧಕ್ಕೆಯಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾರಾಯಣಗೌಡ ಅವರು ನ.3ರಂದು ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದರು.

ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಳಿಕ ಹರೀಶ್ ಫೇಸ್‌ಬುಕ್ ಖಾತೆ ಪರಿಶೀಲಿಸಲಾಗಿತ್ತು. ವಿಚಾರಣೆ ನಡೆಸಲು ಅವರ ಮನೆಗೆ ಹೋಗಿದ್ದೆವು. ಊಟ ಮಾಡುತ್ತಿದ್ದ ಹರೀಶ್, ಏಕಾಏಕಿ ಕೋಣೆಯೊಳಗೆ ಸೇರಿಕೊಂಡರು. ನನ್ನ ಸಾವಿಗೆ ನಾರಾಯಣಗೌಡ ಅವರೇ ಕಾರಣ ಎಂದು ಕೂಗುತ್ತಾ, ನೇಣು ಹಾಕಿಕೊಂಡು ಆಗ ಬಾಗಿಲು ಮುರಿದು ಕೋಣೆ ಪ್ರವೇಶಿಸಿ ನೇಣಿನ ಕುಣಿಕೆಯಿಂದ ಇಳಿಸಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

40 ವರ್ಷ ನಾರಾಯಣಗೌಡ ಅವರ ಜತೆ ಇದ್ದ ಹರೀಶ್, 2 ವರ್ಷಗಳಿಂದ ಅವರಿಂದ ದೂರಾಗಿದ್ದರು. ಇತ್ತೀಚೆಗೆ ಕರವೇ ಶಿವರಾಮೇಗೌಡ ಬಣ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವಿಷಯ ತಿಳಿದ ನಾರಾಯಣಗೌಡ ಮತ್ತು ಅವರ ಭಾಮೈದ ಮಧು, ಹರೀಶಗೆ ಜೀವ ಬೆದರಿಕೆ ಹಾಕಿದ್ದರು. ಈ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ 15 ದಿನಗಳ ಹಿಂದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT